ಯುವಕನಿಗೆ ಚೂರಿ ಇರಿತ: ಪಾಣೆ ಮಂಗಳೂರು ಹೋಟೆಲ್ ಮಾಲೀಕ ಬಂಧನ

ಯುವಕರ ಗುಂಪಿನೊಂದಿಗೆ ಕ್ಷುಲ್ಲಕ ವಿಚಾರಕ್ಕೆ ನಡೆದ ಮಾತಿನ ಚಕಮಕಿ ವೇಳೆ, ಜಗಳವಾಡುತ್ತಿದ್ದ ಇಲ್ಲಿನ ಪಾಣೆ ಮಂಗಳೂರು ಹೋಟೆಲ್ ಮಾಲೀಕ ಯಾಸೀನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಟ್ವಾಳ, ಜನವರಿ 15 : ಹೊಟೇಲ್ ಮಾಲೀಕ ಮತ್ತು ಸ್ಥಳೀಯ ಯುವಕರ ಮಧ್ಯೆ ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿ ನಡೆದ ಮಾತಿನ ಚಕಮಕಿಯ ವೇಳೆ ಹೊಟೇಲ್ ಮಾಲಕನಿಗೆ ಚೂರಿಯಿಂದ ಇರಿದ ಘಟನೆ ಬಂಟ್ವಾಳ ತಾಲೂಕಿನ ಪಾಣೆಮಂಗಳೂರು ಚಿಕನ್ ಕೆಫೆ ಆಂಡ್ ಫಿಶಾವಿ ಫ್ಯಾಮಿಲಿ ರೆಸ್ಟೋರೆಂಟ್ ಎದುರು ಶನಿವಾರ ತಡರಾತ್ರಿ ನಡೆದಿರುವುದು ಬೆಳಕಿಗೆ ಬಂದಿದೆ.

ಪಾಣೆ ಮಂಗಳೂರು ಸಮೀಪದ ನೆಹರುನಗರ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ ಮುಹಮ್ಮದ್ ನೌಫಲ್ (26) ಚೂರಿ ಇರಿತದಿಂದ ಗಾಯಗೊಂಡವರು.

ಚೂರಿ ಇರಿದ ಹೊಟೇಲ್ ಮಾಲಕ ಮೆಲ್ಕಾರ್ ನಿವಾಸಿ ಅಹ್ಮದ್ ಬಾವ ಎಂಬವರ ಪುತ್ರ ಯಾಸೀನ್ ನನ್ನು (32) ಘಟನಾ ಸ್ಥಳದಿಂದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Youth stabbed by a hotel owner in petty quarel

ಚೂರಿ ಇರಿತಕ್ಕೊಳಗಾದ ಮುಹಮ್ಮದ್ ನೌಫಲ್ ಬಿ.ಸಿ.ರೋಡಿನ ಕೈಕಂಬದಲ್ಲಿ ರವಿವಾರ ಶುಭಾರಂಭಗೊಳ್ಳಲಿರುವ ತನ್ನ ಸಹೋದರನ ಅಂಗಡಿಗೆ ಕುರ್ಚಿ ತರಲು ಕೈಕಂಬದಿಂದ ಮೆಲ್ಕಾರ್ ಕಡೆಗೆ ಪಾಣೆ ಮಂಗಳೂರು ಮಾರ್ಗವಾಗಿ ಸ್ನೇಹಿತನ ಆಟೋ ರಿಕ್ಷಾದಲ್ಲಿ ತೆರಳುತ್ತಿದ್ದಾಗ ಜೋರಾಗಿ ಸಂಗೀತ ನುಡಿಸಿದ್ದರು ಎನ್ನಲಾಗಿದೆ.

Youth stabbed by a hotel owner in petty quarel

ಆಟೋ ರಿಕ್ಷಾ ಹೊಟೇಲ್ ಎದುರಿನಿಂದ ಸಾಗುತ್ತಿದ್ದಾಗ ಜೋರಾಗಿ ಸಂಗೀತ ನುಡಿಸಿದ್ದಕ್ಕೆ ಯಾಸೀನ್, ನೌಫಲ್ ಮತ್ತು ಆತನ ಸ್ನೇಹಿತನೊಂದಿಗೆ ತಗಾದೆ ತೆಗೆದಿದ್ದಾನೆ. ಈ ಸಂದರ್ಭದಲ್ಲಿ ಮೂವರ ನಡುವೆ ಮಾತಿನ ಚಕಮಕಿ ನಡೆದಿದ್ದು ಸ್ಥಳದಲ್ಲಿದ್ದ ಯಾಸೀನ್ ನ ಸಹೋದರ ಯಾಸೀನ್ ನನ್ನು ಸಮಾಧಾನಪಡಿಸಿ ಹೊಟೇಲ್ ಒಳಗೆ ಕರೆದೊಯ್ದಿದ್ದ.

ಬಳಿಕ ನೌಫಲ್ ಮತ್ತು ಸ್ನೇಹಿತ ಅದೇ ಮಾರ್ಗವಾಗಿ ಆಟೋ ರಿಕ್ಷಾದಲ್ಲಿ ಹಿಂದಿರುಗುತ್ತಿದ್ದಾಗ ಹೊಟೇಲ್ ಎದುರು ಅಡ್ಡಗಟ್ಟಿ ರಿಕ್ಷಾವನ್ನು ನಿಲ್ಲಿಸಿದ ಹೊಟೇಲ್ ಮಾಲಕ ಯಾಸೀನ್, ರಿಕ್ಷಾದಲ್ಲಿದ್ದ ನೌಫಲ್ ಮತ್ತು ಆತನ ಸ್ನೇಹಿತನ ಜೊತೆ ಮಾತಿನ ಚಕಮಕಿ ನಡೆಸಿದ್ದು ಇದು ಕೈ ಮಿಲಾಯಿಸುವ ಹಂತಕ್ಕೆ ತಲುಪಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಯಾಸೀನ್ ಹೊಟೇಲ್ ಒಳಭಾಗದಿಂದ ತರಕಾರಿ ಕೊಯ್ಯುವ ಚೂರಿ ತಂದು ನೌಫಲ್ ನ ಬೆನ್ನಿಗೆ ಇರಿದಿದ್ದಾನೆ ಎಂದು ತಿಳಿದು ಬಂದಿದೆ.

Youth stabbed by a hotel owner in petty quarel

ಹೋಟೆಲ್ ಮೇಲೆ ದಾಳಿ: ವಿಷಯ ತಿಳಿದು ಸ್ಥಳದಲ್ಲಿ ಜಮಾಯಿಸಿದ ಪಾಣೆಮಂಗಳೂರು ಮತ್ತು ನೆಹರುನಗರದ ಆಕ್ರೋಶಿತ ಯುವಕರು ಹೊಟೇಲ್ ನ ಗಾಜುಗಳನ್ನು ಪುಡಿಗೈದಿದ್ದಾರೆ. ಈ ಸಂದರ್ಭದಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಮಾಹಿತಿ ತಿಳಿದು ತಕ್ಷಣ ಹೆಚ್ಚುವರಿ ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ದೌಡಾಯಿಸಿದ ಬಂಟ್ವಾಳ ನಗರ ಠಾಣೆ ಎಸ್ಸೈ ನಂದಕುಮಾರ್ ಸ್ಥಳದಲ್ಲಿ ಜಮಾಯಿಸಿದ ಯುವಕರನ್ನು ಚದುರಿಸಿ ಹೊಟೇಲ್ ಬಾಗಿಲು ಮುಚ್ಚಿಸಿ ಪರಿಸ್ಥಿತಿ ಹತೋಟಿಗೆ ತಂದರು.

ಚೂರಿ ಇರಿತಕ್ಕೊಳಗಾದ ನೌಫಲ್ ಗೆ ತುಂಬೆ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆಯ ಬಳಿಕ ಇದೀಗ ನೌಫಲ್ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+