ಪಾಕ್ ವಶದಲ್ಲಿರುವ ಅಭಿನಂದನ್ ಸುರಕ್ಷತೆಗಾಗಿ ಪುತ್ತೂರಿನಲ್ಲಿ ವಿಶೇಷ ಪೂಜೆ
ಮಂಗಳೂರು, ಫೆಬ್ರವರಿ 28: ಪಾಕ್ ವಶದಲ್ಲಿರುವ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ವಾಪಸ್ ಕರೆತರುವಂತೆ ಆಗ್ರಹಿಸಿ ದೇಶದಾದ್ಯಂತ ಅಭಿಯಾನ ಆರಂಭವಾಗಿದೆ. ಅಭಿನಂದನ್ ಅವರು ಸುರಕ್ಷಿತವಾಗಿ ವಾಪಸ್ ಬರಲೆಂದು ದೇಶದಾದ್ಯಂತ ಜನರು ಪ್ರಾರ್ಥಿಸುತ್ತಿದ್ದಾರೆ.
ಅಭಿನಂದನ್ ಅವರನ್ನು ವಾಪಸ್ ಕರೆತರಲು ಪ್ರಧಾನಿ ಮೋದಿಯವರು ಮಾತುಕತೆ ನಡೆಸಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ. ಪಾಕಿಸ್ತಾನದಲ್ಲಿ ಬಂಧಿಯಾಗಿರುವ ವಾಯುಪಡೆ ವಿಂಗ್ ಕಮಾಂಡರ್ ಅಭಿನಂದನ್ ಅವರ ಜತೆ ಪಾಕ್ ಅಮಾನವೀಯವಾಗಿ ನಡೆದುಕೊಳ್ಳುತ್ತಿದೆ ಎಂದು ಆಕ್ರೋಶ ವ್ಯಕ್ತವಾಗುತ್ತಿದೆ.

ಈ ನಡುವೆ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ಕೂಡಲೇ ಬಿಡುಗಡೆಗೊಳಿಸಬೇಕೆಂದು ಮತ್ತು ಅವರ ಸುರಕ್ಷತೆಗಾಗಿ ಯುವಭಾರತ್ ಸಂಘಟನೆ ವತಿಯಿಂದ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.












Click it and Unblock the Notifications