ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ: ಜಮೀರ್ ಅಹಮದ್

|
Google Oneindia Kannada News

ಮಂಗಳೂರು, ಅಕ್ಟೋಬರ್.18: ಮಾಜಿ ಮುಖ್ಯಂತ್ರಿ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಅವರ ರಾಜಕೀಯ ನಿವೃತ್ತಿಯನ್ನ ಜನ ಒಪ್ಪೊಲ್ಲ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಸಿದ್ದರಾಮಯ್ಯ!

ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮುಂದಿನ ಚುನಾವಣೆಗೆ ಸ್ಪರ್ಧಿಸುವುದರ ಬಗ್ಗೆ ಸ್ಪಷ್ಟಪಡಿಸಿದರು.

 ಚುನಾವಣೆ ಸ್ಪರ್ಧೆ ವಿಚಾರ, ಹೈಕಮಾಂಡ್ ನಿರ್ಧರಿಸಲಿದೆ: ಸಿದ್ದರಾಮಯ್ಯ ಚುನಾವಣೆ ಸ್ಪರ್ಧೆ ವಿಚಾರ, ಹೈಕಮಾಂಡ್ ನಿರ್ಧರಿಸಲಿದೆ: ಸಿದ್ದರಾಮಯ್ಯ

ಸಿದ್ದರಾಮಯ್ಯ ಚುನಾವಣೆಗೆ ನಿಲ್ಲದಿದ್ದರೆ ಜನ ಬಿಡಬೇಕಲ್ಲ. ಅದನ್ನು ಜನ ಒಪ್ಪುವುದುದಿಲ್ಲ. ರಾಜಕೀಯದಿಂದ ಯಾವ ರಾಜಕಾರಣಿ ಈವರೆಗೆ ನಿವೃತ್ತಿಯಾಗಿದ್ದಾರೆ? ಮಾಜಿ ಪ್ರಧಾನಿ ದೇವೇಗೌಡರು ಈ ಹಿಂದೆ ಚುನಾವಣೆಗೆ ನಿಲ್ಲುವುದಿಲ್ಲ ಎಂದಿದ್ದರು ಆದರೆ ಮತ್ತೆ ಚುನಾವಣೆಗೆ ನಿಂತರು. ತಮ್ಮ ನಿಲುವನ್ನು ಬದಲಾಯಿಸಿದರು.

Zameer Ahmed said Siddaramaiah will contest the next election

ಅದೇ ರೀತಿ ಸಿದ್ದರಾಮಯ್ಯ ಅವರು ತಮ್ಮ ನಿರ್ಧಾರವನ್ನು ಬದಲಾಯಿಸಲಿದ್ದಾರೆ. ನಮಗೂ ಸಿದ್ದರಾಮಯ್ಯ ಅವರು ಬೇಕೇ ಬೇಕು ಎಂದು ಹೇಳಿದ ಅವರು ಕೇಂದ್ರ ಸಚಿವ ಸ್ಥಾನಕ್ಕೆ ಅಕ್ಬರ್ ಈ ಹಿಂದೆಯೇ ರಾಜೀನಾಮೆ ನೀಡಬೇಕಿತ್ತು. ಇಷ್ಟೆಲ್ಲಾ ವಿವಾದ ಆದ ಮೇಲೆ ಛೀಮಾರಿ ಹಾಕಿಸಿಕೊಂಡು ರಾಜೀನಾಮೆ ಕೊಡಬೇಕಾಗಿತ್ತಾ? ಎಂದು ಪ್ರಶ್ನಿಸಿದರು.

 ಜಿಟಿಡಿ-ಸಾರಾ ಮಹೇಶ್ ನಡುವೆಯೇ ಕಿತ್ತಾಟ ನಡೆಯುತ್ತಿದೆ: ಶೋಭಾ ಕರಂದ್ಲಾಜೆ ಜಿಟಿಡಿ-ಸಾರಾ ಮಹೇಶ್ ನಡುವೆಯೇ ಕಿತ್ತಾಟ ನಡೆಯುತ್ತಿದೆ: ಶೋಭಾ ಕರಂದ್ಲಾಜೆ

ಲೈಂಗಿಕ ಕಿರುಕುಳ ಆರೋಪ ಬರುತ್ತಿದ್ದಂತೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರೆ ಅವರಿಗೆ ಸ್ವಲ್ಪವಾದರೂ ಗೌರವ ಇರುತ್ತಿತ್ತು ಎಂದು ಜಮೀರ್ ಅಹಮದ್ ಛೇಡಿಸಿದರು.

English summary
Minister Zameer Ahmed Khan said that Siddaramaiah will contest the next election
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X