ದಕ್ಷಿಣ ಕನ್ನಡ ಜಿಲ್ಲೆಗೆ ಝಿಕಾ ವೈರಸ್ ಆತಂಕ: ಕೇರಳ ಗಡಿಭಾಗದಲ್ಲಿ ಭಾರೀ ಕಟ್ಟೆಚ್ಚರ
ಮಂಗಳೂರು, ಜುಲೈ 13: ಕೊರೊನಾ ಮಹಾಮಾರಿಯ ನಡುವೆ ಇದೀಗ ಝಿಕಾ ವೈರಸ್ ಆತಂಕ ಶುರುವಾಗಿದೆ. ಕೇರಳದಲ್ಲಿ ಈ ವೈರಸ್ನ ಅಟ್ಟಹಾಸ ಶುರುವಾಗಿರುವುದರಿಂದ ಕೇರಳದ ಜೊತೆ ಗಡಿ ಹಂಚಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಲರ್ಟ್ ಘೋಷಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗೆಂದು ಬರುವ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದೆ.
ಕೊರೊನಾ ಮಹಾಮಾರಿ ಸ್ವಲ್ಪ ಕಡಿಮೆಯಾಯಿತು ಎನ್ನುವಷ್ಟರಲ್ಲಿ ಇದೀಗ ಕೇರಳದಲ್ಲಿ ಝಿಕಾ ವೈರಸ್ ಅಟ್ಟಹಾಸ ಮುಂದುವರಿದಿದೆ. ಸದ್ಯ ಕೇರಳದಲ್ಲಿ ಝಿಕಾ ವೈರಸ್ ಸೋಂಕಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಹೀಗಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಡಳಿತ ಅಲರ್ಟ್ ಘೋಷಿಸಿದೆ.
ಪ್ರತಿನಿತ್ಯ ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ನೂರಾರು ರೋಗಿಗಳು ಬರುತ್ತಾರೆ. ಈ ಕಾರಣದಿಂದ ಜಿಲ್ಲೆಯ 8 ಮೆಡಿಕಲ್ ಕಾಲೇಜು, 66 ಪ್ರಾಥಮಿಕ ಆರೋಗ್ಯ ಕೇಂದ್ರ ಸೇರಿದಂತೆ ಎಲ್ಲಾ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ. ಕೇರಳದಿಂದ ಬರುವ ಗರ್ಭಿಣಿಯರನ್ನು ಟೆಸ್ಟ್ಗೆ ಒಳಪಡಿಸುವಂತೆ ಸೂಚನೆ ನೀಡಲಾಗಿದೆ.

ಝಿಕಾ ಸೋಂಕಿನ ಲಕ್ಷಣಗಳು
ಝಿಕಾ ವೈರಸ್ ಸೊಳ್ಳೆಯ ಮೂಲಕ ಹರಡುತ್ತದೆ. ಸೋಂಕು ತಗುಲಿದವರಲ್ಲಿ ಜ್ವರ, ಸ್ನಾಯು ಸೆಳೆತ, ಕೀಲು ನೋವು, ದೇಹದಲ್ಲಿ ತುರಿಕೆ ಮತ್ತು ಉರಿ, ಬಳಲಿಕೆ, ತಲೆ ನೋವಿನ ಲಕ್ಷಣಗಳು ಕಂಡುಬರುತ್ತವೆ. ಇದರಲ್ಲಿ ಗರ್ಭಿಣಿಯರಿಗೆ ಸೋಂಕು ತಗುಲಿದರೆ ಹೆಚ್ಚು ಅಪಾಯಕಾರಿಯಾಗಿದ್ದು, ಗರ್ಭದಲ್ಲಿ ಬೆಳೆಯುತ್ತಿರುವ ಭ್ರೂಣ ಹಾಗೂ ನವಜಾತ ಶಿಶುಗಳಲ್ಲಿ ಅಸಹಜ ಬೆಳವಣಿಗೆ ಮತ್ತು ತಲೆ ಕಿರಿದಾಗುವಿಕೆಯಂತಹ ಸಮಸ್ಯೆಗಳಿಗೆ ಕಾರಣವಾಗುತ್ತದೆ.
ಹೀಗಾಗಿ ಕೇರಳದ ರೋಗಿಗಳ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಜಿಲ್ಲೆಯ ಆಸ್ಪತ್ರೆಗಳಿಗೆ ಟೆಸ್ಟ್ ಮಾಡಿಸಲು ಬರುವ ಗರ್ಭಿಣಿಯರ ಟ್ರಾವೆಲ್ ಹಿಸ್ಟರಿ ಸಂಗ್ರಹಿಸುವುದರ ಜೊತೆಗೆ ಜ್ವರದಿಂದ ಬಳಲುತ್ತಿರುವ ಗರ್ಭಿಣಿಯನ್ನು ಟೆಸ್ಟ್ಗೆ ಒಳಪಡಿಸಬೇಕೆಂದು ತಿಳಿಸಲಾಗಿದೆ.

ದಕ್ಷಿಣ ಕನ್ನಡ ಮತ್ತು ಕೇರಳ ರಾಜ್ಯ ಗಡಿ ಭಾಗದಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ 10 ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದೆ. ವಿಟ್ಲದ ಮೂರು, ಪುತ್ತೂರು ಗ್ರಾಮಾಂತರದ ಮೂರು ಮತ್ತು ಸುಳ್ಯದ ನಾಲ್ಕು ಭಾಗದಲ್ಲಿ ಚೆಕ್ಪೋಸ್ಟ್ ತೆರೆಯಲಾಗಿದೆ.
ಝಿಕಾ ವೈರಸ್ ತೀವ್ರತೆಯ ಬಗ್ಗೆ ಅಧ್ಯಯನ ನಡೆಸಲು ಈಗಾಗಲೇ ಕೇಂದ್ರ ಸರ್ಕಾರ ಕೇರಳಕ್ಕೆ ತಜ್ಞರ ತಂಡ ಕಳುಹಿಸಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕು ಹರಡದಂತೆ ದಕ್ಷಿಣ ಕನ್ನಡ ಜಿಲ್ಲಾಡಳಿತ ನಿಗಾ ಇರಿಸಿದ್ದು, ಸಾರ್ವಜನಿಕರು ಸಹ ಮುನ್ನೆಚರಿಕೆಯನ್ನು ವಹಿಸಬೇಕಾದ ಅಗತ್ಯವಿದೆ.
-
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
"ಕೆಡಿ" ಸಿನಿಮಾದ ಹಾಡು ಅಶ್ಲೀಲವಾಗಿದ್ರೆ ಕೂಡಲೇ ಎಲ್ಲ ಕಡೆ ತೆರವು ಮಾಡಿ: ಸೆನ್ಸಾರ್ ಮಂಡಳಿಗೆ ಕೇಂದ್ರ ಸರ್ಕಾರ ಸೂಚನೆ -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral












Click it and Unblock the Notifications