ಮಂಗಳೂರು: ಕಸದಲ್ಲೂ ಲಕ್ಷ್ಮೀಯನ್ನು ಕಾಣುವ ವಿನೂತನ ಯೋಜನೆ ಜಾರಿಗೆ ಚಿಂತನೆ
ಮಂಗಳೂರು, ಜುಲೈ 30 : ನಮ್ಮಲ್ಲಿ ದೈವಿಶಕ್ತಿಗಳ ಮೆಲೆ ನಂಬಿಕೆ ಹೆಚ್ಚು. ಪ್ರತಿಯೊಬ್ಬರೂ ತಾವು ಸಿರಿ ಸಂಪತ್ತಿನಿಂದ ಚೆನ್ನಾಗಿರಬೇಕು ಎಂದು ಲಕ್ಷ್ಮೀದೇವಿಯನ್ನು ಆರಾಧಿಸುತ್ತಾರೆ. ಲಕ್ಷ್ಮೀ ನೆಲೆನಿಂತಲ್ಲಿ ಸಂಪತ್ತು ತುಂಬಿ ತುಳುಕುತ್ತದೆ ಎಂಬ ನಂಬಿಕೆಯೂ ಇದೆ.
ಲಕ್ಷ್ಮೀದೇವಿ ಎಂತಹವರನ್ನು ಇಷ್ಟ ಪಡುತ್ತಾಳೆ ಎಂದರೆ ಯಾರು ತಾವು ಗಳಿಸಿದ ಹಣ, ಆಸ್ತಿ, ಸಂಪತ್ತನ್ನು ಬಡವರಿಗೆ, ನಿರ್ಗತಿಕರಿಗೆ ದಾನ ಮಾಡುತ್ತಾರೋ ಅವರ ಮೇಲೆ ದೇವಿಯ ಆಶೀರ್ವಾದವೂ ಸದಾ ಇರುತ್ತದೆ ಎಂದು ಹೇಳಲಾಗುತ್ತದೆ. ಅಂತಹವರ ಮನೆಯಲ್ಲಿ ಲಕ್ಷ್ಮೀದೇವಿ ಉಳಿದುಕೊಂಡು ಇನ್ನಷ್ಟು ಹೆಚ್ಚು ಸಿರಿ ಸಂಪತ್ತನ್ನು ಕರುಣಿಸುತ್ತಾಳೆ ಎಂಬ ನಂಬಿಕೆಯೂ ಗಾಢವಾಗಿದೆ.
ಈ ನಂಬಿಕೆಯನ್ನೇ ಸ್ವಚ್ಛತೆಗಾಗಿ ಬಳಸಿಕೊಳ್ಳಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತಿ ಮುಂದಾಗಿದೆ. ಯಾರಿಗೂ ಬೇಡವಾದ ಕಸದಲ್ಲೂ ಲಕ್ಷ್ಮೀಯನ್ನು ಕಾಣಬೇಕೆಂಬ ಪರಿಕಲ್ಪನೆಯಲ್ಲಿ ಕಸ ಲಕ್ಷ್ಮೀ ಎಂಬ ವಿನೂತನ ಯೋಜನೆ ಪರಿಚಯಿಸಲು ಮುಂದಾಗಿದೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈ ಕಸ ಲಕ್ಷ್ಮೀ ಯೋಜನೆ ಜಾರಿಗೆ ತರಲು ಸಿದ್ಧತೆ ನಡೆಸಲಾಗುತ್ತಿದೆ.
ಜಿಲ್ಲಾ ಪಂಚಾಯತ್ ನ ಸ್ವಚ್ಛ ಭಾರತ್ ಯೋಜನೆ ಅಡಿಯಲ್ಲೇ ಈ ಕಸ ಲಕ್ಷ್ಮೀ ಯೋಜನೆ ಜಾರಿಗೆ ಚಿಂತಿಸಲಾಗಿದೆ. ಆ ಮೂಲಕ ಎಲ್ಲೆಂದರಲ್ಲಿ ಕಸ ಎಸೆಯುವ ಜನರಲ್ಲಿ ಜಾಗೃತಿ ಮೂಡಿಸಲು ಜಿಲ್ಲಾ ಪಂಚಾಯತ್ ಮುಂದಾಗಿದೆ.
ಕಸ ಎಂಬುದು ಯಾರಿಗೂ ಬೇಡವಾದ ವಸ್ತು. ಆದರೆ ಈ ಕಸದಿಂದಲೇ ಸಂಪನ್ಮೂಲವನ್ನು ಕ್ರೂಢೀಕರಿಸಬಹುದು ಎಂಬುದನ್ನು ಜನರಿಗೆ ವಿವರಿಸುವುದೇ ಈ ಯೋಜನೆಯ ಉದ್ದೇಶವಾಗಿದೆ.
ಅಂಗನವಾಡಿಗಳಲ್ಲಿ ಪ್ಲಾಸ್ಟಿಕ್ ಸಂಗ್ರಹಿಸುವ ಯೋಜನೆಗಳಿಗೆ ಹಲವಾರು ಗ್ರಾಮಗಳಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಸಾರ್ವಜನಿಕರು ತ್ಯಾಜ್ಯವೆಂದು ದೂರ ಎಸೆಯುವ ಪ್ಲಾಸ್ಟಿಕ್ ಸಂಗ್ರಹಿಸಿ ಅಂಗನವಾಡಿಗಳು ಒಂದಿಷ್ಟು ಹಣ ಸಂಗ್ರಹಿಸಿ ಒಂದಂಶವನ್ನು ಅಂಗನವಾಡಿ ಅಭಿವೃದ್ಧಿಗೆ ಬಳಸಿಕೊಳ್ಳುವ ವ್ಯವಸ್ಥೆ ಈಗ ಜಾರಿಯಲ್ಲಿದೆ.
ಅಂಗನವಾಡಿಗೆ ದೊರೆಯುವ ಹಣ ಸಾರ್ವಜನಿಕರೂ ಗಳಿಸಬಹುದಲ್ಲವೇ? ಎಂಬ ಚಿಂತನೆಯೊಂದಿಗೆ ಈ ಕಸ ಲಕ್ಷ್ಮಿ ಯೋಜನೆ ಜಾರಿಗೆ ಸಿದ್ಧತೆ ನಡೆದಿದೆ. ಈ ಯೋಜನೆಯ ರೂಪು ರೇಷೆ ಇನ್ನಷ್ಟೇ ಸಿದ್ದಗೊಳ್ಳಬೇಕಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications