ಆದಿಪುರುಷ್ ಸಿನಿಮಾ ವೀಕ್ಷಿಸಿದ ಹನುಮ- ಹೆಚ್ಚಾಯ್ತು ದೇವರ ಮೇಲಿನ ನಂಬಿಕೆ!
ಇಂದು ಪ್ರಭಾಸ್ ಅಭಿನಯದ ಹಾಗೂ ಐತಿಹಾಸಿಕ ಕಥೆಯನ್ನು ಹೊಂದಿರುವ ಸಿನಿಮಾ 'ಆದಿಪುರುಷ್' ರಿಲೀಸ್ ಆಗಿದೆ. ರಾಮಾಯಣದಲ್ಲಿ ಬರುವ ರಾಮ-ಲಕ್ಷ್ಮಣ, ಸೀತೆ ಕಥೆಯನ್ನು ಈ ಸಿನಿಮಾ ಆಧರಿಸಿದೆ. ಸಿನಿಮಾಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು ದೇಶದಾದ್ಯಂತ ಐದು ಭಾಷೆಗಳಲ್ಲಿ ಸಿನಿಮಾ ತೆರೆ ಕಂಡಿದೆ.
ಸಿನಿಮಾ ತೆರೆ ಕಂಡ ಮೊದಲನೇ ದಿನವೇ ವಿಚಿತ್ರ ಘಟನೆಯೊಂದು ನಡೆದಿದೆ. ಸಿನಿಮಾ ಮಂದಿರದಲ್ಲಿ ವಾನರವೊಂದು ಸಿನಿಮಾವನ್ನು ವೀಕ್ಷಣೆ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ನೈಜ ಘಟನೆಯನ್ನು ಕಂಡು ಜನ ಆಶ್ಚರ್ಯಗೊಂಡಿದ್ದಾರೆ.

ಇಂದು ಬೆಳಿಗ್ಗೆ 5.30ರಿಂದ ದೇಶಾದ್ಯಂತ ಥಿಯೇಟರ್ಗಳಲ್ಲಿ ಆದಿಪುರುಷ್ ಸಿನಿಮಾ ರೀಲಿಸ್ ಆಗಿದೆ. ನಂಬಿಕೆ ಪ್ರಕಾರ ರಾಮಾಯಾಣ ಕಥೆ, ನಾಟಕ ಹಾಗೂ ಸಿನಿಮಾ ಪ್ರದರ್ಶನದ ವೇಳೆ ಹನುಮನಿಗಾಗಿ ಒಂದು ಸ್ಥಾನವನ್ನು ಕಾಯ್ದಿರಿಸಲಾಗುತ್ತದೆ. ಅಂದರೆ ಎಲ್ಲಿ ರಾಮನೋ ಅಲ್ಲಿ ಹನುಮ ಇರುತ್ತಾನೆ ಎನ್ನುವ ನಂಬಿಕೆ ಇದೆ. ಹೀಗಾಗಿ ರಾಮಾಯಣ ಕಥೆಯನ್ನು ಆಧರಿಸಿದ ಆದಿಪುರುಷ್ ಸಿನಿಮಾ ರಿಲೀಸ್ ಆದಾಗಲೂ ಎಲ್ಲಾ ಚಿತ್ರಮಂದಿರಗಳಲ್ಲಿ ಒಂದು ಸ್ಥಾನವನ್ನು ಕಾಯ್ದಿರಿಸಲಾಗಿದೆ. ಈ ಸ್ಥಳದಲ್ಲಿ ಯಾರೂ ಕೂಡ ಕುಳಿತುಕೊಳ್ಳುವಂತಿಲ್ಲ. ಈ ಸ್ಥಳ ಹನುಮನಿಗಾಗೇ ಇರುವ ಸ್ಥಳ ಎಂಬ ನಂಬಿಕೆ ಇದೆ.
ಹೀಗಾಗಿ ಎಲ್ಲಾ ಚಿತ್ರಮಂದಿಗರಗಳಲ್ಲೂ ಆದಿಪುರುಷ್ ಸಿನಿಮಾ ಪ್ರದರ್ಶನದ ವೇಳೆ ಒಂದು ಸ್ಥಾನವನ್ನು ಕಾಯ್ದಿರಿಸಲಾಗಿದೆ. ಈ ವೇಳೆ ವಾನರವೊಂದು ಚಿತ್ರಮಂದಿರದ ಒಂದು ಕಿಂಡಿಯಲ್ಲಿ ಕುಳಿತು ಸಿನಿಮಾ ನೋಡಿದ್ದು ಕಂಡು ಬಂದಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಅಷ್ಟಕ್ಕೂ ಈ ವಿಡಿಯೋ ಎಲ್ಲಿಯದ್ದು ಎನ್ನುವ ಮಾಹಿತಿ ಲಭ್ಯವಾಗಿಲ್ಲ. ಆದರೂ ವಾನರ ಸಿನಿಮಾ ವೀಕ್ಷಣೆ ಮಾಡಿದ್ದು ಜನರಲ್ಲಿ ದೇವರ ಮೇಲಿನ ಭಕ್ತಿಯನ್ನು ಇಮ್ಮಡಿಗೊಳಿಸಿದೆ.
ರಾಮಾಯಣದಲ್ಲಿ ಹನುಮನ ಪಾತ್ರ:
ರಾಮಾಯಣದಲ್ಲಿ ರಾಮ-ಲಕ್ಷ್ಮಣ ಹಾಗೂ ಸೀತೆ ವನವಾಸಕ್ಕೆ ಹೋಗುತ್ತಾರೆ. ದಟ್ಟವಾದ ಕಾಡಿನಲ್ಲಿ ಪ್ರಯಾಣ ಬೇಳಿದ್ದ ವೇಳೆ ರಾವಣ ಎನ್ನುವ ರಾಕ್ಷಸನ ಕಣ್ಣು ಸೀತಾಮಾತೆಯ ಮೇಲೆ ಬೀಳುತ್ತದೆ. ಸೀತೆಯನ್ನು ಪಡೆಯುವ ಆಸೆಯಿಂದ ರಾವಣ ರಾಮನ ವೇಷ ಧರಿಸಿ ಸೀತೆಯನ್ನು ಅಪಹರಿಸುತ್ತಾನೆ. ಆಗ ರಾಮನ ಸಹಾಯಕ್ಕಾಗಿ ನಿಂತವನೇ ಹನುಮ. ಸೀತಾಮಾತೆಯನ್ನು ಅಡಗಿಸಿಟ್ಟ ಸ್ಥಳಕ್ಕೆ ಹನುಮ ತಲುಪಿ ಆಕೆಯನ್ನು ಕರೆತರಲು ರಾಮನಿಗೆ ಸಹಾಯ ಮಾಡುತ್ತಾನೆ. ನಂತರ ರಾಮ ರಾವಣನೊಂದಿಗೆ ಹೋರಾಡಿ ಗೆಲ್ಲುತ್ತಾನೆ. ಇದು ರಾಮಾಯಣದಲ್ಲಿ ಬರುವ ಕಥೆ. ಇದೇ ಕಥೆಯನ್ನು 'ಆದಿಪುರಷ್' ಸಿನಿಮಾ ಆಧರಿಸಿದೆ.

ಈ ಸಿನಿಮಾ ನೋಡಿದ ಜನ ಉತ್ತಮ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಭಾಸ್ ಐತಿಹಾಸಿಕ ಕಥೆಗಳನ್ನು ಆಧರಿಸಿದ ಸಿನಿಮಾಗಳನ್ನು ಮಾಡುವಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡ ನಟ. ಇದಕ್ಕಾಗಿ ಅವರು ಸಾವಿರಾರು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಪ್ರಭಾಸ್ ಅಭಿನಯದ ಯಾವುದೇ ಐತಿಹಾಸಿಕ ಸಿನಿಮಾ ಪ್ಲಾಪ್ ಆಗಿದ್ದು ತೀರಾ ಕಡಿಮೆ. ಬಾಹುಬಲಿ ದ ಬಿಗಿನಿಂಗ್, ಬಾಹುಬಲಿ ದ ಕನ್ಕ್ಲೂಝನ್ ನಂತಹ ಹಿಟ್ ಸಿನಿಮಾಗಳಲ್ಲಿ ನಟಿಸಿರುವ ಪ್ರಭಾಸ್ ಸದ್ಯ ಆದಿಪುರುಷ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದು ಸಿನಿಪ್ರಿಯರ ಮನ ಮುಟ್ಟಲಿದಿಯಾ ಅನ್ನೋದನ್ನ ಕಾದು ನೋಡಬೇಕಿದೆ.
-
Jr NTR: ನಟ ಜ್ಯೂನಿಯರ್ ಎನ್ಟಿಆರ್ ಬೆಂಗಳೂರು ಭೇಟಿ ವೇಳೆ ಅಭಿಮಾನಿಗಳ ನೂಕುನುಗ್ಗಲು; ಆಸ್ಪತ್ರೆಯ ಎಸ್ಕಲೇಟರ್ ಧ್ವಂಸ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications