ಬೆಂಕಿ ದುರಂತ : ಪೋಷಕರ ಅತಿಯಾದ ಕಾಳಜಿಗೆ ಬಲಿಯಾದ ಮಗಳು
ಮುಂಬೈ, ಮೇ 14: ದಾದರ್ ಪೊಲೀಸ್ ಠಾಣೆ ಆವರಣದಲ್ಲಿ ಸಂಭವಿಸಿದ ಅಗ್ನಿ ಆಕಸ್ಮಿಕದಲ್ಲಿ ಶ್ರಾವಣಿ ಚವಾಣ್ ಎಂಬ ಯುವತಿಯೊಬ್ಬಳು ಮೃತಪಟ್ಟ ದುರ್ಘಟನೆ ಬಗ್ಗೆ ಓದಿರಬಹುದು. ಈಗ ಶ್ರಾವಣಿ ಸಾವಿಗೆ ಕಾರಣ ತಿಳಿದು ಬಂದಿದೆ.
ಭಾನುವಾರ ಮಧ್ಯಾಹ್ನ 1.40ರ ಸುಮಾರಿಗೆ ದಾದರ್ ಪೊಲೀಸ್ ಠಾಣೆ(ಪಶ್ಚಿಮ) ಸಮೀಪದ ವಸತಿ ಸಮುಚ್ಚಯದಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣವೇ ಅಗ್ನಿಶಾಮಕದಳಕ್ಕೆ ಕರೆ ಬಂದಿದೆ. ನಾಲ್ಕು ಅಗ್ನಿ ಶಾಮಕದಳ ತಂಡ ಘಟನಾ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಲು ಯತ್ನಿಸಿದ್ದರು.

ಗೋಖಲೆ ರಸ್ತೆಯಲ್ಲಿರುವ ಮೂರು ಅಂತಸ್ತಿನ ವಸತಿ ಕಟ್ಟಡದ ಬೆಂಕಿ ದುರಂತದಲ್ಲಿ ಸಿಲುಕಿದ್ದ ಯುವತಿ ಸಾವಿಗೆ ಆಕೆಯ ಪೋಷಕರೇ ಪರೋಕ್ಷವಾಗಿ ಕಾರಣರಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.
ಸೈತಾನ್ ಚೌಕಿ ಪೊಲೀಸ್ ಕಾಲೋನಿಯಲ್ಲಿ ಬೆಂಕಿ ಕಾಣಿಸಿಕೊಂಡಾಗ ಮನೆಯೊಳಗೆ ಇದ್ದ ಶ್ರಾವಣಿ ನಿದ್ದೆಗೆ ಜಾರಿದ್ದರು. ಆದರೆ, ಬೆಂಕಿ, ಹೊಗೆ ಹೆಚ್ಚಾದಂತೆ ಶ್ರಾವಣಿಗೆ ಎಚ್ಚರವಾಗಿದೆ. ಆದರೆ, ತನ್ನ ರೂಮಿನಿಂದ ಹೊರಕ್ಕೆ ಬರಲಾಗದೆ ಒದ್ದಾಡಿದ್ದಾರೆ.
16 ವರ್ಷ ವಯಸ್ಸಿನ ಶ್ರಾವಣಿ ರೂಮಿನಲ್ಲೇ ಇದ್ದು ಓದಿಕೊಳ್ಳಲಿ ಎಂದು ಆಕೆಯ ಪೋಷಕರು ಹೊರಗಿನಿಂದ ಬಾಗಿಲಿಗೆ ಬೀಗ ಹಾಕಿಕೊಂಡು, ಅತಿಯಾದ ಕಾಳಜಿ ತೋರಿಸಿದ್ದಾರೆ. ನಂತರ ಸ್ನೇಹಿತರೊಬ್ಬರ ಮದುವೆ ಮನೆಗೆ ಹೋಗಿದ್ದಾರೆ. ಹೀಗಾಗಿ, ಹೊರಗೆ ಬರಲು ಸಾಧ್ಯವಾಗದ ಶ್ರಾವಣಿ, ಸರಿಯಾದ ಸಮಯಕ್ಕೆ ಅಗತ್ಯ ನೆರವು ಸಿಗದೆ ಬೆಂಕಿಯಲ್ಲಿ ಬೆಂದು ಬೂದಿಯಾಗಿದ್ದಾಳೆ.
ಅಗ್ನಿಶಾಮಕದಳ ಸಿಬ್ಬಂದಿ ಹೇಳಿಕೆ: ಪೊಲೀಸ್ ಕಾಲೋನಿಯ ಫ್ಲಾಟ್ ನಂಬರ್ 37ರಲ್ಲಿ ಚವಾಣ್ ಅವರ ಮನೆ ಇದೆ. ಎಲೆಕ್ಟ್ರಿಕ್ ವೈರಿಂಗ್ ಮೂಲಕ ಬೆಂಕಿ ವೇಗವಾಗಿ ವ್ಯಾಪಿಸಿತ್ತು. ನಮ್ಮ ಸಿಬ್ಬಂದಿ ಅಲ್ಲಿಗೆ ತೆರಳುವಷ್ಟರಲ್ಲಿ ಬೆಂಕಿ ಹೆಚ್ಚಾಗಿ ವ್ಯಾಪಿಸಿತ್ತು. ಫ್ಲಾಟ್ 37 ಹೊರಗಿನಿಂದ ಲಾಗ್ ಆಗಿತ್ತು. ಫ್ಲಾಟ್ ಸಂಖ್ಯೆ 36 ರಿಂದ 38 ರ ಮೂಲಕ ಫ್ಲಾಟ್ 37ರೊಳಗೆ ಹೋಗಲು ಯತ್ನಿಸಿದ್ದು ವಿಫಲವಾಯಿತು ಎಂದು ಮುಂಬೈ ಅಗ್ನಿ ಶಾಮಕ ದಳದ ಸಿಬ್ಬಂದಿ ವಿವರಿಸಿದ್ದಾರೆ.
ಬೆಂಕಿ ಹೊತ್ತಿಕೊಳ್ಳಲು ಕಾರಣ ಏನು ಎಂಬುದು ಇನ್ನು ತಿಳಿದುಬಂದಿಲ್ಲ. ಆದರೆ, ಘಟನಾ ಸ್ಥಳದಲ್ಲಿ ಸೀಮೆಎಣ್ಣೆ ಸೀಸೆಯೊಂದು ಪತ್ತೆಯಾಗಿರುವುದು ಅನುಮಾನಕ್ಕೆ ನಾಂದಿ ಹಾಡಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications