1993 ಮುಂಬೈ ಸ್ಫೋಟ ಆರೋಪಿ ದೊಸ್ಸಾಗೆ ವಿಧಿಯೇ ನೀಡಿತು ಮರಣದಂಡನೆ!
ಮುಂಬೈ, ಜೂನ್ 28: ಇಂದು (ಜೂನ್ 28) ಬೆಳಗ್ಗೆ ತಾನೇ ಎದೆನೋವಿನಿಂದ ಮುಂಬೈಯ ಜೆ.ಜೆ.ಆಸ್ಪತ್ರೆಗೆ ಸೇರಿದ್ದ 1993 ರ ಮುಂಬೈ ಸ್ಪೋಟದ ಆರೋಪಿ ಮುಸ್ತಫಾ ದೊಸ್ಸಾ ಆಸ್ಪತ್ರೆಯಲ್ಲೇ ಸಾವಿಗೀಡಾಗಿದ್ದಾನೆ. ಅನಿಯಂತ್ರಿತ ಮಧುಮೇಹ ಮತ್ತು ರಕ್ತದೊತ್ತಡದಿಂದ ಬಳಲುತ್ತಿದ್ದ ಮುಸ್ತಫಾ ಬೆಳಗ್ಗೆ ಎದೆನೋವು ಮತ್ತು ಸೋಂಕಿನಿಂದಾಗಿ ಆಸ್ಪತ್ರೆ ಸೇರಿದ್ದ.
ತನಗೆ ಹೃದಯ ಸಂಬಂಧಿ ಕಾಯಿಲೆ ಇದೆಯೆಂದೂ, ತನಗೆ ಬೈಪಾಸ್ ಸರ್ಜರಿಗೆ ಒಳಗಾಗಬೇಕಿದೆ ಎಂದೂ ಆತ ನ್ಯಾಯಾಲಯಕ್ಕೆ ತಿಳಿಸಿದ್ದ. 1993 ರ ಮಾರ್ಚ್ 12 ರಂದು ಮುಂಬೈನ ವಿವಿಧೆಡೆ ಸ್ಫೋಟಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 257 ಮಂದಿ ಸಾವನ್ನಪ್ಪಿ, 700 ಕ್ಕೂ ಅಧಿಕ ಜನ ಗಂಭೀರ ಗಾಯಗೊಂಡಿದ್ದರು. ಈ ಸಂಬಂಧ ಪ್ರಕರಣದ ವಿಚಾರಣೆ ನಡೆಸಿದ್ದ ಮುಂಬೈನ ಟಾಡಾ ನ್ಯಾಯಾಲಯ ಇತ್ತೀಚೆಗಷ್ಟೆ ದೊಸ್ಸಾನನ್ನು ಆರೋಪಿ ಎಂದು ಘೋಷಿಸಿತ್ತು.

ಮುಂಬೈ ಸ್ಫೋಟದ ರೂವಾರಿಗಳಿಂದ ಆಜ್ಞೆ ಪಡೆದು ಪ್ರಮುಖ ಆರೋಪಿಗಳಿಗೆ ಶಸ್ತ್ರಾಸ್ತ್ರ ಹಾಗೂ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಿದ ಆರೋಪವನ್ನು ಮುಸ್ತಫಾ ದೊಸ್ಸಾ ಎದುರಿಸುತ್ತಿದ್ದ. ಇದೀಗ ಆತನ ಹೇಯ ಕೃತ್ಯಕ್ಕೆ ನ್ಯಾಯಾಲಯ ಶಿಕ್ಷೆ ಘೋಷಿಸುವ ಮೊದಲು ಆತನೇ ಅನಾರೋಗ್ಯದಿಂದ ಸಾವಿಗೀಡಾಗಿದ್ದು, ಆತನಿಗೆ ವಿಧಿಯೇ ಮರಣದಂಡನೆ ವಿಧಿಸಿದಂತಾಗಿದೆ!
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications