ಮುಂಬೈ ಸ್ಫೋಟದ ಪಾತಕಿ ಅಬು ಸಲೇಂಗೆ ಜೂನ್ 16 'ಡಿ' ಡೇ
1993ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಫಿ ಭೂಗತ ಪಾತಕಿ ಅಬು ಸಲೇಂ ಹಾಗೂ ಇತರ 6 ಮಂದಿ ಭವಿಷ್ಯ ಜೂನ್ 16ರಂದು ನಿರ್ಧಾರವಾಗಲಿದೆ. ಮುಂಬೈನ ವಿಶೇಷ ನ್ಯಾಯಾಲಯ ಜೂನ್ 16ಕ್ಕೆ ಅಂತಿಮ ತೀರ್ಪು ಪ್ರಕಟಿಸಲಿದೆ.
ಮುಂಬೈ, ಮೇ 30: 1993ರ ಮುಂಬೈ ಸರಣಿ ಸ್ಫೋಟದ ಪ್ರಮುಖ ಆರೋಫಿ ಭೂಗತ ಪಾತಕಿ ಅಬು ಸಲೇಂ ಹಾಗೂ ಇತರ 6 ಮಂದಿ ಭವಿಷ್ಯ ಜೂನ್ 16ರಂದು ನಿರ್ಧಾರವಾಗಲಿದೆ. ಮುಂಬೈನ ವಿಶೇಷ ನ್ಯಾಯಾಲಯ ಜೂನ್ 16ಕ್ಕೆ ಅಂತಿಮ ತೀರ್ಪು ಪ್ರಕಟಿಸಲಿದೆ.
1995ರಲ್ಲಿ ನಡೆದ ಬಿಲ್ಡರ್ ಪ್ರದೀಪ್ ಜೈನ್ ಹತ್ಯೆ ಪ್ರಕರಣದಲ್ಲಿ ಅಬು ಸಲೇಂಗೆ ಜೀವಾವಧಿ ಶಿಕ್ಷೆಯಾಗಿದೆ. ಸದ್ಯ ಪಾತಕಿ ರಾಯ್ಗಡದ ತಲೋಜಾ ಸೆಂಟ್ರಲ್ ಜೈಲಿನಲ್ಲಿದ್ದಾನೆ.
ಸರಣಿ ಸ್ಫೋಟ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ಟಾಡಾ ಕೋರ್ಟ್ ನ್ಯಾಯಾಧೀಶರಾದ ಜಿ.ಎ.ಸನಪ್ ಅವರು ಎಲ್ಲಾ 7 ಆರೋಪಿಗಳ ಹಾಜರಾತಿಯಲ್ಲಿ ಅಂತಿಮ ತೀರ್ಪು ಪ್ರಕಟಣೆ ದಿನಾಂಕ ಘೋಷಿಸಿದರು.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಸಂಜಯ್ ದತ್, ಯಾಕೂಬ್ ಮೆಮನ್ ಸೇರಿ 100 ಮಂದಿ ಅಪರಾಧಿಗಳೆಂದು ವಿಶೇಷ ನ್ಯಾಯಾಲಯ ತೀರ್ಪು ನೀಡಿತ್ತು. 2015ರಲ್ಲಿ ಯಾಕೂಬ್ ಮೆಮನ್ ನನ್ನು ಗಲ್ಲಿಗೇರಿಸಲಾಗಿದೆ. ಸಂಜಯ್ ದತ್ 2016ರ ಫೆಬ್ರವರಿಯಲ್ಲಿ ಜೈಲಿನಿಂದ ಬಿಡುಗಡೆಯಾಗಿದ್ದಾರೆ.
1993ರ ಮಾರ್ಚ್ 12ರಂದು ಮುಂಬೈನ ವಿವಿಧೆಡೆ ಸರಣಿ ಬಾಂಬ್ ಸ್ಫೋಟ ಸಂಭವಿಸಿ, 257 ಮಂದಿ ಸಾವನ್ನಪ್ಪಿ, 700 ಜನರು ಗಾಯಗೊಂಡಿದ್ದರು. ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾಗೂ ಆತನ ಬಲಗೈ ಬಂಟ ಟೈಗರ್ ಮೆಮೊನ್ ಈ ಕೃತ್ಯ ನಡೆಸಿದ್ದರು.
ಸುಮಾರು 3000 ಕೆಜಿ ಆರ್ ಡಿ ಎಕ್ಸ್ ಪೂರೈಕೆ ಮಾಡಿದ ಆರೋಪ ಅಬು ಸಲೇಂ ಮೇಲಿದೆ. ಪೋರ್ಚುಗಲ್ ನಲ್ಲಿ ತಲೆ ಮರೆಸಿಕೊಂಡಿದ್ದ ಅಬು ಸಲೇಂನನ್ನು 2005ರಲ್ಲಿ ಭಾರತಕ್ಕೆ ಕರೆ ತರಲಾಗಿತ್ತು.(ಐಎಎನ್ಎಸ್)
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ











Click it and Unblock the Notifications