ಮುಂಬೈನಲ್ಲಿ 72 ವರ್ಷದ ಆರ್ಟಿಐ ಕಾರ್ಯಕರ್ತ ಕೊಲೆ
ಮುಂಬೈ, ಅಕ್ಟೋಬರ್ 17: ಇಲ್ಲಿನ ಸಾಂತಾಕ್ರೂಜ್ ಉಪನಗರದಲ್ಲಿ 72 ವರ್ಷದ ಆರ್ಟಿಐ ಕಾರ್ಯಕರ್ತರೊಬ್ಬರನ್ನು ಅಪರಿಚಿತ ದುಷ್ಕರ್ವಿುಗಳ ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ. ಶನಿವಾರ ರಾತ್ರಿ ಹತ್ಯೆಗೀಡಾದ ಹಿರಿಯ ನಾಗರಿಕರನ್ನು ಭುಪೇಂದ್ರ ವಿರಾ ಎಂದು ಗುರುತಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೋಮವಾರದಂದು ಇಬ್ಬರನ್ನು ಬಂಧಿಸಿದ್ದಾರೆ.
ಭೂ ಮಾಫಿಯಾ ವಿರುದ್ಧ ಕಳೆದ ಕೆಲ ವರ್ಷಗಳಿಂದ ಭುಪೇಂದ್ರ ವಿರಾ ಅವರು ಹೋರಾಟ ನಡೆಸುತ್ತಿದ್ದರು. ಶನಿವಾರ ರಾತ್ರಿ ಸುಮಾರು 9 ಗಂಟೆ ಸಮಯದಲ್ಲಿ ಭುಪೇಂದ್ರ ಅವರ ಮನೆಗೆ ನುಗ್ಗಿದ ದುಷ್ಕರ್ವಿುಗಳು, ಏಕಾಏಕಿ ಗುಂಡು ಹಾರಿಸಿ ಕೊಂದಿದ್ದಾರೆ.
ವಕೋಲಾ ಪೊಲೀಸ್ ಠಾಣೆ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದು ಸೋಮವಾರದಂದು 53 ವರ್ಷ ವಯಸ್ಸಿನ ಅಮ್ಜದ್ ಖಾನ್, 78 ವರ್ಷ ವಯಸ್ಸಿನ ರಝಾಕ್ ಖಾನ್ ಎಂಬುವವರನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.
ಈ ಪೈಕಿ ರಝಾಕ್ ಅವರು ಬೃಹನ್ ಮುಂಬೈ ಕಾರ್ಪೊರೇಷನ್ ನ ಮಾಜಿ ಕಾರ್ಪೊರೇಟರ್ ಆಗಿದ್ದರು ಎಂದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಇದು ಭೂ ವಿವಾದದ ಕಾರಣಕ್ಕೆ ನಡೆದ ಹತ್ಯೆ ಎಂದು ಕಂಡು ಬರುತ್ತದೆ ಎಂದು ಮುಂಬೈನ ಡಿಸಿಪಿ ಅಶೋಕ್ ದುಧೆ ಅವರು ಹೇಳಿದ್ದಾರೆ.(ಪಿಟಿಐ)

ಮುಂಬೈನ ಮಾಜಿ ಕಾರ್ಪೊರೇಟರ್ ಬಂಧನ
ಸಾಂತಾಕ್ರೂಜ್ ನ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದ ರಾಝಾಕ್ ಅವರ ಭೂ ಅವ್ಯವಹಾರದ ವಿರುದ್ಧ ಕೂಡಾ ವೀರಾ ಅವರು ಹೋರಾಟ ಮಾಡಿದ್ದರು. ಸಾಂತಾಕ್ರೂಜ್ ಉಪನಗರದಲ್ಲಿನ ಅನಧಿಕೃತ ಕಟ್ಟಡಗಳು, ಭೂ ಒತ್ತುವರಿ, ಅವ್ಯವಹಾರಗಳನ್ನು ಬಯಲಿಗೆಳೆದಿದ್ದರು.

ಭೂ ಮಾಫಿಯಾಕ್ಕೆ ಬಲಿ
ಭೂ ಮಾಫಿಯಾಕ್ಕೆ ಬಲಿ: ಭುಪೇಂದ್ರ ಅವರ ಹತ್ಯೆಯನ್ನು ಖಂಡಿಸಿರುವ ಎಎಪಿ ನಾಯಕಿ, ಸಾಮಾಜಿಕ ಕಾರ್ಯಕರ್ತೆ ಅಂಜಲಿ ದಮಾನಿಯಾ ಅವರು ಪ್ರತಿಕ್ರಿಯಿಸಿ, ಇದು ಭೂಮಾಫಿಯಾದಲ್ಲಿ ತೊಡಗಿರುವವರ ಕೃತ್ಯವೇ ಆಗಿದ್ದು, ಹಂತಕರನ್ನು ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ
|
ವೃತ್ತಿಪರ ಹಂತಕರಿಂದಲೆ ಹತ್ಯೆ ಶಂಕೆ
ಸೈಲೆಂಸರ್ ಬಳಸಿದ ಗನ್ ಮೂಲಕ ಗುಂಡು ಹಾರಿಸಿ ವೀರಾ ಅವರನ್ನು ಹತ್ಯೆ ಮಾಡಲಾಗಿದೆ. ಇದು ವೃತ್ತಿಪರ ಹಂತಕರ ಕೃತ್ಯ.
|
ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ಐಆರ್
ವೀರಾ ಅವರ ಹತ್ಯೆಗೆ ಸಂಬಂಧಿಸಿದಂತೆ ಮಾಜಿ ಕಾರ್ಪೊರೇಟರ್ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ ಅಂಜಲಿ
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications