2006ರ ಮುಂಬೈ ಸರಣಿ ಸ್ಫೋಟ : ಐವರಿಗೆ ಗಲ್ಲು ಶಿಕ್ಷೆ
ಮುಂಬೈ, ಸೆಪ್ಟೆಂಬರ್ 30 : 2006ರಲ್ಲಿ ಸಂಭವಿಸಿದ ಮುಂಬೈ ಉಪನಗರ ಸರಣಿ ರೈಲು (7/11) ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಅಪರಾಧಿಗಳಿಗೆ ವಿಶೇಷ ಕೋರ್ಟ್ ಗಲ್ಲು ಶಿಕ್ಷೆ ವಿಧಿಸಿದೆ. 7 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಬುಧವಾರ ಆದೇಶ ಹೊರಡಿಸಿದೆ.
ಮುಂಬೈನ ವಿಶೇಷ ಮೋಕಾ (ಸಂಘಟಿತ ಅಪರಾಧಗಳ ನಿಯಂತ್ರಣ ಕಾಯ್ದೆ) ನ್ಯಾಯಾಲಯದ ನ್ಯಾಯಾಧೀಶ ವೈ.ಶಿಂಧೆ ಅವರು ಈ ಕುರಿತು ಬುಧವಾರ ತೀರ್ಪು ನೀಡಿದ್ದಾರೆ. ಸೆಪ್ಟೆಂಬರ್ 10ರಂದು ಸ್ಫೋಟ ಪ್ರಕರಣದಲ್ಲಿ 12 ಆರೋಪಿಗಳು ತಪ್ಪಿತಸ್ಥರು ಎಂದು ಕೋರ್ಟ್ ಆದೇಶ ನೀಡಿತ್ತು. ಇಂದು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಲಾಗಿದೆ. [ಮುಂಬೈ ಬಾಂಬ್ ಸ್ಫೋಟ : 12 ಜನರು ದೋಷಿ]

2006ರ ಜುಲೈ 11ರಂದು ನಡೆದ ಸ್ಫೋಟದಲ್ಲಿ 188 ಜನರು ಮೃತಪಟ್ಟಿದ್ದರು ಮತ್ತು 829 ಜನರು ಗಾಯಗೊಂಡಿದ್ದರು. ಏಳು ರೈಲುಗಳಲ್ಲಿ ಆರ್ಡಿಎಕ್ಸ್ ಬಾಂಬ್ಗಳನ್ನು ಸ್ಫೋಟಿಸಲಾಗಿತ್ತು. ಈ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಕೋರ್ಟ್ ಖುಲಾಸೆಗೊಳಿಸಿದೆ.
2007ರಲ್ಲಿ ಈ ಸ್ಫೋಟ ಪ್ರಕರಣದ ವಿಚಾರಣೆಗೆ ವಿಶೇಷ ಕೋರ್ಟ್ ರಚನೆ ಮಾಡಲಾಗಿತ್ತು. ವಿಚಾರಣೆ ಸಂದರ್ಭದಲ್ಲಿ 8 ಜನರಿಗೆ ಗಲ್ಲು ಶಿಕ್ಷೆ ಮತ್ತು 4 ಜನರಿಗೆ ಜೀವಾವಧಿ ಶಿಕ್ಷೆ ನೀಡಬೇಕು ಎಂದು ಪ್ರಾಸಿಕ್ಯೂಷನ್ ವಾದ ಮಂಡನೆ ಮಾಡಿತ್ತು.
ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಕಮಲ್ ಅಹ್ಮದ್ ಅನ್ಸಾರಿ (37), ತನ್ವೀರ್ ಅಹ್ಮದ್ ಅನ್ಸಾರಿ (37), ಮೊಹಮ್ಮದ್ ಫೈಸಲ್ ಶೇಕ್(36), ಸಿದ್ದಿಕಿ (30), ಮೊಹಮ್ಮದ್ ಮಜೀದ್ ಶಫಿ (32), ಶೇಕ್ ಆಲಂ ಶೇಕ್(41), ಮೊಹಮ್ಮದ್ ಸಾಜಿದ್ ಅನ್ಸಾರಿ (34), ಮುಝಾಮಿಲ್ ಶೇಕ್ (27), ಸೋಹೈಲ್ ಮೆಹಮೂದ್ ಶೇಕ್(43), ಜಮೀರ್ ಅಹ್ಮದ್ ಶೇಕ್ (36), ನವೀದ್ ಹುಸೈನ್ ಖಾನ್ (30) ಮತ್ತು ಅಸೀಫ್ ಖಾನ್ (38) ಅಪರಾಧಿಗಳಾಗಿದ್ದಾರೆ.
ಗಲ್ಲು ಶಿಕ್ಷೆಗೆ ಗುರಿಯಾದವರು : ಕಮಲ್ ಅಹ್ಮದ್ ಅನ್ಸಾರಿ, ಮೊಹಮ್ಮದ್ ಫೈಸಲ್ ಶೇಕ್, ಸಿದ್ದಿಕ್ಕಿ, ನವೀದ್ ಹುಸೈನ್ ಖಾನ್, ಅಸೀಫ್ ಖಾನ್.

ಜೀವಾವಧಿ ಶಿಕ್ಷೆ : ತನ್ವೀರ್ ಅಹ್ಮದ್ ಅನ್ಸಾರಿ, ಮೊಹಮ್ಮದ್ ಮಜೀದ್ ಶಫಿ, ಶೇಕ್ ಆಲಂ ಶೇಕ್, ಮೊಹಮ್ಮದ್ ಸಾಜಿದ್ ಅನ್ಸಾರಿ, ಮುಝಾಮಿಲ್ ಶೇಕ್, ಸೋಹೈಲ್ ಮೆಹಮೂದ್ ಶೇಕ್
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications