ವೈದ್ಯಕೀಯ ಪರೀಕ್ಷೆಯಲ್ಲಿ ಅವಳಲ್ಲ "ಅವನು" ಎಂದು ವರದಿ: ನ್ಯಾಯಾಲಯದಲ್ಲಿ ಮಹಿಳೆಗೆ ಸಿಕ್ಕಿತು ಜಯ
ಮುಂಬೈ, ಮೇ 14: ವಿಶೇಷ ಪ್ರಕರಣವೊಂದರಲ್ಲಿ ವೈದ್ಯಕೀಯ ಪರೀಕ್ಷೆಯಲ್ಲಿ 'ಪುರುಷ' ಎಂದು ಘೋಷಿಸಿದ್ದ ಮಹಿಳೆಗೆ ಪೊಲೀಸ್ ಉದ್ಯೋಗ ನೀಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಹೈಕೋರ್ಟ್ ತೀರ್ಪು ನೀಡಿದೆ. ಎರಡು ತಿಂಗಳೊಳಗೆ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದೆ.
ಈ ಪ್ರಕರಣದಲ್ಲಿ ಅನುಕಂಪದ ದೃಷ್ಟಿಯಿಂದ ಮಹಿಳೆಗೆ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಅಲ್ಲದ ಬೇರೆ ಉದ್ಯೋಗ ಕೊಡಲು ನಿರ್ಧರಿಸಿದೆ ಎಂದು ಕಳೆದ ವಾರ ಮಹಾರಾಷ್ಟ್ರ ಸರ್ಕಾರದ ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಕೋರ್ಟ್ಗೆ ಹೇಳಿಕೆ ನೀಡಿದ್ದರು. ಈ ಬೆನ್ನಲ್ಲೇ ನ್ಯಾಯಮೂರ್ತಿ ರೇವತಿ ಮೋಹಿತೆ ದೇರೆ ಮತ್ತು ಮಾಧವ್ ಜಮಾದಾರ್ ಅವರನ್ನೊಳಗೊಂಡ ಹೈಕೋರ್ಟ್ ಪೀಠ ಮಹಿಳೆಗೆ ಪೊಲೀಸ್ ಉದ್ಯೋಗ ನೀಡಲು ಆದೇಶ ನೀಡಿದೆ.
ಮಹಿಳೆಯ ವಿದ್ಯಾರ್ಹತೆಗಳನ್ನು ಗಮನದಲ್ಲಿಟ್ಟುಕೊಂಡು ನಾಸಿಕ್ ವಿಶೇಷ ಐಜಿ ರಾಜ್ಯ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಶಿಫಾರಸ್ಸು ಮಾಡುವುದಾಗಿ ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ತಿಳಿಸಿದ್ದಾರೆ.

ಅರ್ಜಿದಾರ ಮಹಿಳೆಗೆ ಉದ್ಯೋಗದ ನಿಯಮ ಮತ್ತು ಪ್ರಯೋಜನಗಳು ಪ್ರಮಾಣಿತ ಕಾರ್ಯವಿಧಾನದ ಮೂಲಕ ನೇಮಕಗೊಳ್ಳುವ ಅವರ ಹಂತದ ಇತರ ಉದ್ಯೋಗಿಗಳಿಗೆ ಸಮಾನವಾಗಿರುತ್ತದೆ ಎಂದು ಪೀಠಕ್ಕೆ ತಿಳಿಸಿದ್ದಾರೆ. ಅಡ್ವೊಕೇಟ್ ಜನರಲ್ ಮುಖಾಂತರ ಮಹಾರಾಷ್ಟ್ರ ಸರ್ಕಾರದ ಸಲ್ಲಿಕೆಯನ್ನು ಅಂಗೀಕರಿಸಿರುವ ಪೀಠ ಮಹಿಳೆಯ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲು ಎರಡು ತಿಂಗಳ ಕಾಲಾವಕಾಶ ನೀಡಿದೆ.
ಪ್ರಕರಣ ಕುರಿತು ಅಭಿಪ್ರಾಯ ವ್ಯಕ್ತಪಡಿಸಿರುವ ಹೈಕೋರ್ಟ್ ಪೀಠ "ಇದೊಂದು ಅತ್ಯಂತ ದುರದೃಷ್ಟ ಸಂಗರಿ. ಪ್ರಕರಣದಲ್ಲಿ ಅರ್ಜಿದಾರರ ಯಾವುದೇ ತಪ್ಪು ಕಂಡುಬಂದಿಲ್ಲ, ಅವರು ಮಹಿಳೆಯಾಗಿ ತಮ್ಮ ವೃತ್ತಿಜೀವನವನ್ನು ಮುಂದುವರೆಸಲಿದ್ದಾರೆ" ಎಂದು ಹೇಳಿದೆ.

ಏನಿದು ಪ್ರಕರಣ?
ಪರಿಶಿಷ್ಟ ಜಾತಿ ವರ್ಗದ ಅಡಿಯಲ್ಲಿ ನಾಸಿಕ್ ಗ್ರಾಮೀಣ ಪೊಲೀಸ್ ನೇಮಕಾತಿಗೆ 2018ರಲ್ಲಿ 23 ವರ್ಷದ ಮಹಿಳೆ ಅರ್ಜಿ ಸಲ್ಲಿಸಿದ್ದರು. ಲಿಖಿತ, ದೈಹಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದ ಮಹಿಳೆ ಇನ್ನೇನು ಕೆಲಸ ಸಿಕ್ಕೇಬಿಟ್ಟಿತು ಎನ್ನುವ ಖುಷಿಯಲ್ಲಿದ್ದರು. ಆದರೆ ನಂತರ ನಡೆದ ವೈದ್ಯಕೀಯ ಪರೀಕ್ಷೆಯ ಸಂದರ್ಭದಲ್ಲಿ ಮಹಿಳೆಗೆ ಗರ್ಭಾಶಯ ಮತ್ತು ಅಂಡಾಶಯಗಳಿಲ್ಲ ಎಂದು ವರದಿ ನೀಡಿತ್ತು. ಮತ್ತೊಂದು ಪರೀಕ್ಷೆಯಲ್ಲಿ ಮಹಿಳೆಗೆ ಗಂಡು ಮತ್ತು ಹೆಣ್ಣು ವರ್ಣತಂತು ಹೊಂದಿದ್ದು, ಮಹಿಳೆಯನ್ನು "ಪುರುಷ" ಎಂದು ವರದಿ ನೀಡಿತ್ತು.
ನ್ಯಾಯಕ್ಕಾಗಿ ಕೋರ್ಟ್ಗೆ ಮೆಟ್ಟಿಲು ಹತ್ತಿದ್ದ ಮಹಿಳೆ
ವೈದ್ಯಕೀಯ ಪರೀಕ್ಷೆ ವರದಿಯಿಂದ ಸಿಕ್ಕಿದ್ದ ಕೆಲಸ ಕಳೆದುಕೊಂಡಿದ್ದ ಮಹಿಳೆ ನ್ಯಾಯಕ್ಕಾಗಿ ಕೋರ್ಟ್ ಮೊರೆ ಹೋಗಿದ್ದರು. ಸುಧೀರ್ಘ ವಿಚಾರಣೆ ನಡೆಸಿದ ಬಾಂಬೆ ಹೈಕೋರ್ಟ್ ಮಹಿಳೆಗೆ ಪೊಲೀಸ್ ಇಲಾಖೆಯಲ್ಲಿ ಉದ್ಯೋಗ ಕೊಡುವಂತೆ ಆದೇಶ ನೀಡಿದೆ. ಈ ಮೂಲಕ ಪೊಲೀಸ್ ಆಗಬೇಕೆಂಬ ತನ್ನ ಕನಸನ್ನು ಮಹಿಳೆ ನನಸು ಮಾಡಿಕೊಂಡಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications