26/11 ಮುಂಬೈ ದಾಳಿಯ ಉಗ್ರ ಕಸಬ್ ಗೂ ಬೆಂಗಳೂರಿಗೂ ನಂಟು!
ಮುಂಬೈ, ಫೆಬ್ರವರಿ.18: ಜಾಗತಿಕ ಮಟ್ಟದಲ್ಲಿ ಸದ್ದು ಮಾಡಿದ 26/11 ಮುಂಬೈ ದಾಳಿಯಲ್ಲಿ ಸಿಕ್ಕಿಬಿದ್ದ ಉಗ್ರ ಅಜ್ಮಲ್ ಕಸಬ್ ನನ್ನು ಹಿಂದೂ ಉಗ್ರನಂತೆ ಬಿಂಬಿಸಲು ಪಾಕಿಸ್ತಾನ್ ಮೂಲದ ಉಗ್ರ ಸಂಘಟನೆ ಲಷ್ಕರ್-ಇ-ತೈಬಾ ಸಂಚು ರೂಪಿಸಿತ್ತು ಎಂಬ ವಿಚಾರ ಇದೀಗ ಬೆಳಕಿಗೆ ಬಂದಿದೆ.
ಮುಂಬೈ ದಾಳಿ ಪ್ರಕರಣದ ತನಿಖೆ ನಡೆಸಿದ ಮುಂಬೈನ ನಿವೃತ್ತ ಪೊಲೀಸ್ ಅಧಿಕಾರಿ ರಾಕೇಶ್ ಮಾರಿಯಾ ತಮ್ಮ ಆತ್ಮಕಥೆ 'Let Me Say It Now' ನಲ್ಲಿ ರೋಚಕ ವಿಚಾರಗಳ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. ಎಲ್ಲವೂ ಅಂದುಕೊಂಡಂತೆ ನಡೆದಿದ್ದರೆ, ಮುಂಬೈ ದಾಳಿಯ ಹಿಂದೆ ಒಬ್ಬ ಹಿಂದೂ ಭಯೋತ್ಪಾದಕ ಇರುವಂತೆ ಬಿಂಬಿಸಲು ಎಲ್ಇಟಿ ಸಂಚು ರೂಪಿಸಿತ್ತು ಎಂದು ಪುಸ್ತಕದಲ್ಲಿ ಬರೆದುಕೊಂಡಿದ್ದಾರೆ.
ಮುಂಬೈ ದಾಳಿಗೆ ಸಂಬಂಧಿಸಿದಂತೆ ಹಲವು ವಿಚಾರಗಳ ಬಗ್ಗೆ ನಿವೃತ್ತ ಪೊಲೀಸ್ ಅಧಿಕಾರಿ ರಾಕೇಶ್ ಮಾರಿಯಾ ಈ ಪುಸ್ತಕದಲ್ಲಿ ತಿಳಿಸಿದ್ದಾರೆ. ಲಷ್ಕರ್-ಇ-ತೈಬಾ ನಡೆಸಿದ ಉಗ್ರ ದಾಳಿಯ ಹಿಂದೆ ನೆರೆಯ ರಾಷ್ಟ್ರ ಪಾಕಿಸ್ತಾನದ ಪಾತ್ರವೂ ಕೂಡಾ ಅಡಗಿತ್ತು ಎಂದು ತಿಳಿಸಿದ್ದಾರೆ.

ಉಗ್ರನಿಗೆ ಬೆಂಗಳೂರಿನ ನಂಟು ಕಲ್ಪಿಸುವ ಸಂಚು
ಮುಂಬೈನಲ್ಲಿ ನೆತ್ತರು ಹರಿಸಿದ ಉಗ್ರ ಅಜ್ಮಲ್ ಕಸಬ್ ಗೆ ಕರ್ನಾಟಕ ರಾಜಧಾನಿ ಬೆಂಗಳೂರಿನ ನಂಟು ಕಲ್ಪಿಸಲು ಲಷ್ಕರ್-ಇ-ತೈಬಾ ಸಂಘಟನೆಯು ಪ್ಲಾನ್ ಮಾಡಿಕೊಂಡಿತ್ತು. ಇದಕ್ಕೆ ಪುಷ್ಟಿ ನೀಡುವಂತಹ ನಕಲಿ ಗುರುತಿನ ಚೀಟಿಯು ಉಗ್ರನ ಬಳಿ ಪತ್ತೆಯಾಗಿತ್ತು. ಬೆಂಗಳೂರಿನ ನಿವಾಸಿ ಸಮೀರ್ ಚೌಧರಿ ಎಂಬ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್ ನ್ನು ಹೊಂದಿದ್ದನು ಎಂದು ತಿಳಿದು ಬಂದಿದೆ.

ಕಸಬ್ ನನ್ನು ಹಿಂದೂ ಉಗ್ರನಂತೆ ಬಿಂಬಿಸಲು ಸ್ಕೆಚ್
ಲಷ್ಕರ್-ಇ-ತೈಬಾ ಹಾಗೂ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ಐ 26/11 ಮುಂಬೈ ದಾಳಿಯ ಯೋಜನೆಯನ್ನು ರೂಪಿಸಿದ್ದವು. ಮೊದಲೇ ರೂಪಿಸಿದ ಪ್ಲಾನ್ ನಂತೆ ಎಲ್ಲವೂ ನಡೆದಿದ್ದರೆ ಅಜ್ಮಲ್ ಕಸಬ್ ನನ್ನು ಒಬ್ಬ ಹಿಂದೂ ಉಗ್ರ ಎಂಬ ರೀತಿಯಲ್ಲಿ ಬಿಂಬಿಸಲಾಗುತ್ತಿತ್ತು ಎಂದು ಪುಸ್ತಕದಲ್ಲಿ ಬಿಂಬಿಸಲಾಗಿದೆ.

ಮೊಣಕೈಗೆ ಕೆಂಪುದಾರ ತೊಟ್ಟುಕೊಂಡಿದ್ದ ಕಸಬ್
ಮುಂಬೈ ದಾಳಿಕೋರ ಅಜ್ಮಲ್ ಕಸಬ್ ನಲ್ಲು ಹಿಂದೂ ಉಗ್ರನಂತೆ ಬಿಂಬಿಸಲು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿತ್ತು. ಅದಕ್ಕಾಗಿ ಮುಸ್ಲಿಂ ಉಗ್ರನಾಗಿದ್ದರೂ ಕೂಡಾ ಆತನು ಮೊಣಕೈಗೆ ಕೆಂಪುದಾರವನ್ನು ಕಟ್ಟಿಕೊಂಡಿದ್ದನು. ಈ ಕೆಂಪುದಾರವು ಹಿಂದೂ ಧರ್ಮದ ಪ್ರತೀಕ ಎಂದು ನಂಬಲಾಗಿದೆ. ಹೀಗಾಗಿಯೇ ಕಸಬ್ ನ ಮೊಣಕೈಯಲ್ಲಿ ದಾರವನ್ನು ಕಟ್ಟಿಕೊಂಡಿದ್ದ ಎಂದು ತಿಳಿದು ಬಂದಿದೆ.

ಮುಂಬೈನಲ್ಲಿ ನಡೆದ ಉಗ್ರ ದಾಳಿಯ ಹಿನ್ನೆಲೆ
ಕಳೆದ 2008ರ ನವೆಂಬರ್ 26ರಂದು ಮುಂಬೈನಲ್ಲಿ ಶಸ್ತ್ರಸಜ್ಜಿತ ಉಗ್ರರು ಗುಂಡಿನ ದಾಳಿ ನಡೆಸಿ 174ಕ್ಕೂ ಅಧಿಕ ಮಂದಿಯನ್ನು ಹತ್ಯೆಗೈದಿದ್ದರು. ನಂತರ ತಾಜ್ ಹೋಟೆಲ್ ನಲ್ಲಿ ಅಡಗಿ ಕುಳಿತ ಉಗ್ರರನ್ನು ಸೇನಾ ಕಾರ್ಯಾಚರಣೆಯನ್ನು ಹೊಡೆದುರುಳಿಸಲಾಗಿದ್ದು, ಈ ಪೈಕಿ ಅಜ್ಮಲ್ ಕಸಬ್ ನನ್ನು ಜೀವಂತವಾಗಿ ಸೆರೆ ಹಿಡಿಯಲಾಗಿತ್ತು. ಅಲ್ಲಿಂದ ನಾಲ್ಕು ವರ್ಷಗಳ ಸುದೀರ್ಘ ವಿಚಾರಣೆ ಹಾಗೂ ಜೈಲುಶಿಕ್ಷೆ ಬಳಿಕ ಉಗ್ರನನ್ನು 2012ರ ನವೆಂಬರ್.21ರಂದು ಗಲ್ಲುಶಿಕ್ಷೆಗೆ ಗುರಿಪಡಿಸಲಾಯಿತು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications