ಮುಂಬೈ ಕಟ್ಟಡ ದುರಂತ : ಬಲಿಯಾದವರ ಸಂಖ್ಯೆ 32ಕ್ಕೆ ಏರಿಕೆ
ಮುಂಬೈ, ಸೆಪ್ಟೆಂಬರ್ 1: ದೇಶದ ವಾಣಿಜ್ಯನಗರಿ ಮುಂಬೈಯಲ್ಲಿ ಆಗಸ್ಟ್ 31 ರಂದು ಮೂರಂತಸ್ತಿನ ಕಟ್ಟಡವೊಂದು ನೆಲಕ್ಕುರುಳಿದ ಪರಿಣಾಮ 32 ಮಂದಿ ಸಾವಿಗೀಡಾಗಿದ್ದು, 47 ಜನರನ್ನು ರಕ್ಷಿಸಲಾಗಿದೆ.
ಮುಂಬೈಯ ಭೆಂಡಿ ಬಜಾರ್ ಪಾಲಿಗೆ ಆಗಸ್ಟ್ 31 ಕರಾಳ ದಿನ. ಕಳೆದ ಮೂರ್ನಾಲ್ಕು ದಿನದಿಂದ ಮುಂಬೈಯಲ್ಲಿ ನಿರಂತರವಾಗಿ ಸುರಿದ ಮಳೆಗೆ ಇಲ್ಲಿನ ಪಾಕ್ಮೋಡಿಯ ರಸ್ತೆಯ ಜೆಜೆ ಜಂಕ್ಷನ್ ಬಳಿಯ ಬಿಂಡಿ ಬಜಾರ್ ನಲ್ಲಿ ಮೂರಂತಸ್ತಿನ ಕಟ್ಟಡ ಕುಸಿದುಬಿದ್ದಿತ್ತು. ವಿಪತ್ತು ನಿರ್ವಹಣಾ ತಂಡ, ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆ ನಡೆಸಿ 47 ಜನರನ್ನು ರಕ್ಷಿಸಿದ್ದು, 32 ಜನರು ದುರಂತ ಅಂತ್ಯ ಕಂಡಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್, ಈ ಘಟನೆ ಯಾರದೇ ಬೇಜವಾಬ್ದಾರಿಯಿಂದ ಸಂಭವಿಸಿದ್ದರೂ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಷ್ಟೇ ಅಲ್ಲದೆ, ಈ ಘಟನೆಗೆ ಸಂಬಂಧಿಸಿದಂತೆ ಅವರೇ ಖುದ್ದು ಕಾಳಜಿ ವಹಿಸಿ, ಮಾಹಿತಿ ಕಲೆಹಾಕುತ್ತಿದ್ದಾರೆ.
ಜುಲೈ 25 ರಂದು ಸಹ ಮುಂಬೈಯ ಲಾಲ್ ಬಹದ್ದೂರ್ ಶಾಸ್ತ್ರೀ ಮಾರ್ಗದಲ್ಲಿರುವ ದಾಮೋದರ್ ಪಾರ್ಕ್ ಬಳಿಯ ನಾಲ್ಕು ಅಂತಸ್ತಿನ ಎರಡು ಕಟ್ಟಡ ಕುಸಿದು 14 ಮಂದಿ ಸಾವನ್ನಪ್ಪಿದ್ದರು.
Recommended Video


ವಾಣಿಜ್ಯ ರಾಜಧಾನಿಯಲ್ಲಿ ಕಟ್ಟಡ ಕುಸಿತದ ದುರಂತಗಳು ಮತ್ತೆ ಮತ್ತೆ ಸಂಭವಿಸುತ್ತಿರುವುದು ಸಾರ್ವಜನಿಕರಲ್ಲಿ ಆತಂಕವನ್ನುಂಟುಮಾಡಿದೆ. ಅಪಾರ್ಟ್ ಮೆಂಟ್ ಗಳ ಸುರಕ್ಷತೆಯ ಬಗ್ಗೆಯೇ ಜನರಲ್ಲಿ ಅನುಮಾನ ಏಳುವಂತಾಗಿದೆ. ಇತ್ತೀಚೆಗೆ ನಡೆದ ಮಳೆಗಾಲದ ಸರ್ವೆಯೊಂದು ಮುಂಬೈಯಲ್ಲಿರುವ ಸುಮಾರು 791 ಕಟ್ಟಡಗಳನ್ನು ಅಪಾಯಕಾರಿ ಕಟ್ಟಡಗಳು ಎಂದು ಗುರುತಿಸಿ, ಇವು ಜೋರು ಮಳೆ-ಗಾಳಿಯನ್ನು ಎದುರಿಸಲಾರದಷ್ಟು ದುರ್ಬಲವಾಗಿವೆ ಎಂದು ಹೇಳಿದೆ.
ಒಟ್ಟಿನಲ್ಲಿ ಮಾಯಾನಗರಿಯ ಅಸಲಿ ಬಂಡವಾಳ ಜೋರು ಮಳೆಗೆ ಬಯಲಾಗುತ್ತಿದೆ!
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Bengaluru Rent: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಬಾಡಿಗೆ ಮನೆಗಳು ಸಿಗುವ 6 ಪ್ರಮುಖ ಪ್ರದೇಶಗಳು -
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ?












Click it and Unblock the Notifications