30 ವರ್ಷದ ಹಿಂದೆ ಪಡೆದಿದ್ದ 200 ರೂ. ಸಾಲ ತಿರಿಸೋಕೆ ಭಾರತಕ್ಕೆ ಬಂದ ಕೀನ್ಯಾ ಸಂಸದ!
ಮುಂಬೈ, ಜುಲೈ 11: ಮೂವತ್ತು ವರ್ಷದ ಹಿಂದೆ ತೆಗೆದುಕೊಂಡಿದ್ದ ಇನ್ನೂರು ರೂಪಾಯಿಯನ್ನು ವಾಪಸ್ ನೀಡುವುದಕ್ಕೆ ವ್ಯಕ್ತಿಯೊಬ್ಬರು ಕೀನ್ಯಾದಿಂದ ಭಾರತಕ್ಕೆ ಬರೋದು ಅದ್ರೇನು? ಪ್ರಾಮಾಣಿಕತೆಯ ಪರಾಕಾಷ್ಠೆ ಎನ್ನಬೇಕೆ?
ತೀರಾ ವಿರಳ ಎಂಬಂಥ ಈ ಘಟನೆ ನಡೆದಿದ್ದು, ಮಹಾರಾಷ್ಟ್ರದ ಔರಂಗಾಬಾದಿನಲ್ಲಿ!
30 ವರ್ಷಗಳ ಹಿಂದೆ ವ್ಯಕ್ತಿಯೊಬ್ಬರಿಂದ ಪಡೆದಿದ್ದ 200 ರೂಪಾಯಿ ಸಾಲವನ್ನು ಮರುಪಾವತಿಸಲು ಕೀನ್ಯಾದ ರಿಚರ್ಡ್ ಟಾಂಗ್ ಐ ಎಂಬ ಸಂಸದ(ನ್ಯಾರಿಬರಿ ಚಾಚೆ ಕ್ಷೇತ್ರದ ಸಂಸದ)ರೊಬ್ಬರು ಭಾರತಕ್ಕೆ ಬಂದಿದ್ದರು. ತಮ್ಮ ಕುಟುಂಬ ಸಮೇತ ಬಂದು, ಔರಂಗಾಬಾದಿನ ಎಪ್ಪತ್ತು ವರ್ಷ ವಯಸ್ಸಿನ ಕಾಶಿನಾಥ್ ಗವಾಲಿ ಎಂಬುವವರ ಮನೆ ಬಾಗಿಲು ತಟ್ಟಿದಾಗ ಕಾಶಿನಾಥ್ ಅವರಿಗೆ ಗುರುತು ಹತ್ತುವುದಾದರೂ ಹೇಗೆ? ಅರವತ್ತಾಗಿ ದಶಕ ಕಳೆದಿರುವಾಗ ಮೂವತ್ತು ವರ್ಷದ ಹಿಂದಿನ ನೆನಪು ಎಲ್ಲಿಂದ ಬರಬೇಕು?

ಆದರೂ ರಿಚರ್ಡ್ ಪಟ್ಟು ಬಿಡದೆ ಹಳೇ ಘಟನೆಗಳನ್ನೆಲ್ಲ ನೆನಪಿಸಿ, ಕಾಶಿನಾಥ್ ಅವರಿಗೆ ಹಿಂದಿನ ಘಟಣೆಗಳನ್ನು ನೆನಪಿಸಿದರು. ಸಂಕಷ್ಟದಲ್ಲಿದ್ದ ಆಫ್ರಿಕನ್ ನಾಗರಿಕ ರಿಚರ್ಡ್ ಅವರಿಗೆ ಪ್ರತಿಫಲದ ಅಪೇಕ್ಷೆ ಇಲ್ಲದೆ ಕಾಶಿನಾಥ್ ಅವರು ಮಾಡಿದ್ದ ಸಹಾಯವನ್ನು ಮನಸಾರೆ ಕೊಂಡಾಡಿ ಆಗ ತೆಗೆದುಕೊಂಡಿದ್ದ ಸಾಲವನ್ನು ವಾಪಸ್ ನೀಡಿದ್ದಾರೆ. ಜೊತೆಗೆ ತಮ್ಮ ಕುಟುಂಬದೊಂದಿಗೆ ಕಾಶಿನಾಥ್ ಅವರ ಮನೆಯಲ್ಲಿ ಕೆಲಕಾಲ ಕಳೆದಿದ್ದಾರೆ.
ಮೂವತ್ತು ವರ್ಷದ ಹಿಂದಿನ 200 ರೂಪಾಯಿ ಎಂದರೆ ಕಡಿಮೆ ಮೌಲ್ಯದ್ದೇನಲ್ಲ ಎಂಬುದು ಬೇರೆ ಮಾತು. ಆದರೆ ಹಣದ ಮುಖ ನೋಡದೆ ವಿದೇಶಿಯನೊಬ್ಬನಿಗೆ ನೆರವು ನೀಡಿದ ಕಾಶಿನಾಥ್, ಅದನ್ನು ಇಂದಿನವರೆಗೂ ನೆನಪಿಟ್ಟುಕೊಂಡು ಮರುಪಾವತಿಸಲು ಅಷ್ಟು ದೂರದಿಂದ ಬಂದ ರಿಚರ್ಡ್ ರಂಥವರು ಮಾನವೀಯತೆ, ಪ್ರಾಮಾಣಿಕತೆಯ ಅಸ್ತಿತ್ವವನ್ನು ಸಾಬೀತುಪಡಿಸಿದ್ದಾರೆ!
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications