ಯೆರವಾಡ ಜೈಲಿನಿಂದ ಸಂಜಯ್ ದತ್ ಬಿಡುಗಡೆ
ಪುಣೆ, ಫೆಬ್ರವರಿ 25 : 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪ ಸಾಬೀತಾಗಿ ಜೈಲು ಸೇರಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಬಿಡುಗಡೆಗೊಂಡರು. ನೂರಾರು ಅಭಿಮಾನಿಗಳು, ಆಪ್ತರು ಸಂಜಯ್ ದತ್ ಅವರನ್ನು ಬರಮಾಡಿಕೊಂಡರು.
ಪುಣೆಯ ಯೆರವಾಡ ಜೈಲಿನಿಂದ ಗುರುವಾರ ಬೆಳಗ್ಗೆ 8.30ರ ಸುಮಾರಿಗೆ ಹೊರಬಂದ ಸಂಜಯ್ ದತ್ ಅವರನ್ನು ಪತ್ನಿ ಮಾನ್ಯತಾ ಬರಮಾಡಿಕೊಂಡರು. 1993ರ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದ 56 ವರ್ಷ ವಯಸ್ಸಿನ ಸಂಜಯ್ ದತ್ ಅವರು 42 ತಿಂಗಳು ಶಿಕ್ಷೆ ಅನುಭವಿಸಿದ್ದಾರೆ. [ಸಂಜಯ್ ದತ್ ಗೆ ಕ್ಷಮಾದಾನ ಏಕೆ ಸಿಗಲಿಲ್ಲ?]

ವಿಚಾರಣಾಧೀನ ಕೈದಿಯಾಗಿ ಸಂಜಯ್ ದತ್ ಅವರು 18 ತಿಂಗಳು ಕಾಲ ಜೈಲುವಾಸ ಅನುಭವಿಸಿದ್ದರು. ನಂತರ 2013ರಲ್ಲಿ ಸುಪ್ರೀಂಕೋಟ್ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ನಂತರ ಪುಣೆಯ ಯೆರವಾಡ ಜೈಲಿನಲ್ಲಿ 42 ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಿದ್ದಾರೆ. [ಸಂಜಯ್ ದತ್ ಕೈಗೆ ಬಾಂಬ್ ನೀಡಿರಲಿಲ್ಲ: ಅಬು ಸಲೇಂ]
Actor Sanjay Dutt released from Pune's Yerwada Jail. pic.twitter.com/u98HYmtX2D
— ANI (@ANI_news) February 25, 2016
ಜೈಲಿಗೆ ಸೆಲ್ಯೂಟ್ : ಜೈಲಿನಿಂದ ಹೊರಬಂದ ಸಂಜಯ್ ದತ್ ತಲೆಬಾಗಿ ಜೈಲಿಗೆ ನಮಸ್ಕರಿಸಿ ಸೆಲ್ಯೂಟ್ ಹೊಡೆದರು. ಯೆರವಾಡ ಜೈಲಿನಿಂದ ಪತ್ನಿ ಮಾನ್ಯತಾ ಜೊತೆ ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿದ ಸಂಜಯ್ ದತ್, ಅಲ್ಲಿಂದ ಮುಂಬೈಗೆ ತೆರಳಿದ್ದಾರೆ. ಮುಂಬೈನಲ್ಲಿ ತಾಯಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿರುವ ದತ್, ನಂತರ ದೇವರ ದರ್ಶನ ಪಡೆಯಲಿದ್ದಾರೆ.
WATCH: Actor Sanjay Dutt released from Pune's Yerwada Central Jail in the 1993 Mumbai bomb blasts casehttps://t.co/Rt5kH3VD4I
— ANI (@ANI_news) February 25, 2016
ಅವಧಿಗೆ ಮುನ್ನವೇ ಬಿಡುಗಡೆ : ಸಂಜಯ್ ದತ್ ಅವರ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಸನ್ನಡತೆ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ ದತ್ ಬಿಡುಗಡೆಗೊಳಿಸುವ ನಿರ್ಧಾರವನ್ನು ಕೈಗೊಂಡಿರುವುದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಭಾಲೇಕರ್ ಎಂಬುವವರು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸಂಜಯ್ ದತ್ ಶಿಕ್ಷೆಯನ್ನು ಕಡಿಮೆ ಮಾಡಬಾರದು, ಅವರನ್ನು ವಶಕ್ಕೆ ಪಡೆದು 5ವರ್ಷಗಳ ಶಿಕ್ಷೆ ಅವಧಿ ಪೂರ್ಣಗೊಂಡ ನಂತರವೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
-
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications