ಯೆರವಾಡ ಜೈಲಿನಿಂದ ಸಂಜಯ್ ದತ್ ಬಿಡುಗಡೆ
ಪುಣೆ, ಫೆಬ್ರವರಿ 25 : 1993ರ ಮುಂಬೈ ಸರಣಿ ಬಾಂಬ್ ಸ್ಫೋಟದ ಆರೋಪ ಸಾಬೀತಾಗಿ ಜೈಲು ಸೇರಿದ್ದ ಬಾಲಿವುಡ್ ನಟ ಸಂಜಯ್ ದತ್ ಅವರು ಗುರುವಾರ ಬಿಡುಗಡೆಗೊಂಡರು. ನೂರಾರು ಅಭಿಮಾನಿಗಳು, ಆಪ್ತರು ಸಂಜಯ್ ದತ್ ಅವರನ್ನು ಬರಮಾಡಿಕೊಂಡರು.
ಪುಣೆಯ ಯೆರವಾಡ ಜೈಲಿನಿಂದ ಗುರುವಾರ ಬೆಳಗ್ಗೆ 8.30ರ ಸುಮಾರಿಗೆ ಹೊರಬಂದ ಸಂಜಯ್ ದತ್ ಅವರನ್ನು ಪತ್ನಿ ಮಾನ್ಯತಾ ಬರಮಾಡಿಕೊಂಡರು. 1993ರ ಮಾರ್ಚ್ 12ರಂದು ಮುಂಬೈನಲ್ಲಿ ನಡೆದ ಸರಣಿ ಬಾಂಬ್ ಸ್ಫೋಟ ಪ್ರಕರಣದಲ್ಲಿ ಅಪರಾಧಿಯಾಗಿದ್ದ 56 ವರ್ಷ ವಯಸ್ಸಿನ ಸಂಜಯ್ ದತ್ ಅವರು 42 ತಿಂಗಳು ಶಿಕ್ಷೆ ಅನುಭವಿಸಿದ್ದಾರೆ. [ಸಂಜಯ್ ದತ್ ಗೆ ಕ್ಷಮಾದಾನ ಏಕೆ ಸಿಗಲಿಲ್ಲ?]

ವಿಚಾರಣಾಧೀನ ಕೈದಿಯಾಗಿ ಸಂಜಯ್ ದತ್ ಅವರು 18 ತಿಂಗಳು ಕಾಲ ಜೈಲುವಾಸ ಅನುಭವಿಸಿದ್ದರು. ನಂತರ 2013ರಲ್ಲಿ ಸುಪ್ರೀಂಕೋಟ್ ಆದೇಶದಂತೆ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು. ನಂತರ ಪುಣೆಯ ಯೆರವಾಡ ಜೈಲಿನಲ್ಲಿ 42 ತಿಂಗಳುಗಳ ಕಾಲ ಶಿಕ್ಷೆ ಅನುಭವಿಸಿದ್ದಾರೆ. [ಸಂಜಯ್ ದತ್ ಕೈಗೆ ಬಾಂಬ್ ನೀಡಿರಲಿಲ್ಲ: ಅಬು ಸಲೇಂ]
Actor Sanjay Dutt released from Pune's Yerwada Jail. pic.twitter.com/u98HYmtX2D
— ANI (@ANI_news) February 25, 2016
ಜೈಲಿಗೆ ಸೆಲ್ಯೂಟ್ : ಜೈಲಿನಿಂದ ಹೊರಬಂದ ಸಂಜಯ್ ದತ್ ತಲೆಬಾಗಿ ಜೈಲಿಗೆ ನಮಸ್ಕರಿಸಿ ಸೆಲ್ಯೂಟ್ ಹೊಡೆದರು. ಯೆರವಾಡ ಜೈಲಿನಿಂದ ಪತ್ನಿ ಮಾನ್ಯತಾ ಜೊತೆ ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿದ ಸಂಜಯ್ ದತ್, ಅಲ್ಲಿಂದ ಮುಂಬೈಗೆ ತೆರಳಿದ್ದಾರೆ. ಮುಂಬೈನಲ್ಲಿ ತಾಯಿ ಸಮಾಧಿ ಸ್ಥಳಕ್ಕೆ ಭೇಟಿ ನೀಡಲಿರುವ ದತ್, ನಂತರ ದೇವರ ದರ್ಶನ ಪಡೆಯಲಿದ್ದಾರೆ.
WATCH: Actor Sanjay Dutt released from Pune's Yerwada Central Jail in the 1993 Mumbai bomb blasts casehttps://t.co/Rt5kH3VD4I
— ANI (@ANI_news) February 25, 2016
ಅವಧಿಗೆ ಮುನ್ನವೇ ಬಿಡುಗಡೆ : ಸಂಜಯ್ ದತ್ ಅವರ ಶಿಕ್ಷೆಯ ಅವಧಿ ಪೂರ್ಣಗೊಳ್ಳುವ ಮೊದಲೇ ಸನ್ನಡತೆ ಆಧಾರದ ಮೇಲೆ ಅವರನ್ನು ಬಿಡುಗಡೆ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರ ದತ್ ಬಿಡುಗಡೆಗೊಳಿಸುವ ನಿರ್ಧಾರವನ್ನು ಕೈಗೊಂಡಿರುವುದನ್ನು ವಿರೋಧಿಸಿ ಸಾಮಾಜಿಕ ಕಾರ್ಯಕರ್ತ ಪ್ರದೀಪ್ ಭಾಲೇಕರ್ ಎಂಬುವವರು ಬಾಂಬೆ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಸಂಜಯ್ ದತ್ ಶಿಕ್ಷೆಯನ್ನು ಕಡಿಮೆ ಮಾಡಬಾರದು, ಅವರನ್ನು ವಶಕ್ಕೆ ಪಡೆದು 5ವರ್ಷಗಳ ಶಿಕ್ಷೆ ಅವಧಿ ಪೂರ್ಣಗೊಂಡ ನಂತರವೇ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications