ದಶಕದ ಬಳಿಕ ಮತ್ತೊಮ್ಮೆ ರಾಜಕೀಯಕ್ಕೆ ಸಂಜಯ್ ದತ್ ಎಂಟ್ರಿ
ಮುಂಬೈ, ಆಗಸ್ಟ್ 26: ಸರಿ ಸುಮಾರು 10 ವರ್ಷಗಳ ಬಳಿಕ ನಟ ಸಂಜಯ್ ದತ್ ರಾಜಕೀಯ ಮರು ಪ್ರವೇಶ ಮಾಡುತ್ತಿದ್ದಾರೆ. ಈ ಹಿಂದೆ ಸಮಾಜವಾದಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಂಜಯ್ ದತ್ ಮೊದಲ ಯತ್ನದಲ್ಲಿ ಸಫಲರಾಗಿರಲಿಲ್ಲ.
"ಈಗ ರಾಜಕೀಯ ರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಸಮಾಜ ಪಕ್ಷ (ಆರ್ಎಸ್ಪಿ)ಕ್ಕೆ ಸೆಪ್ಟೆಂಬರ್ 25ರಂದು ಅಧಿಕೃತವಾಗಿ ಸೇರಲಿದ್ದಾರೆ" ಎಂದು ಪಕ್ಷದ ಸ್ಥಾಪಕ ಮಹದೇವ್ ಜಂಕರ್ ಹೇಳಿದ್ದಾರೆ.
ರಾಷ್ಟ್ರೀಯ ಸಮಾಜ ಪಕ್ಷದ ಸಂಸ್ಥಾಪಕ(RSP) ಹಾಗೂ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮಹದೇವ್ ಜಂಕರ್ ಈ ಬಗ್ಗೆ ಮಾತನಾಡಿ, "ಸಿನಿಮಾ ಮಾಧ್ಯಮದಲ್ಲಿರುವ ರಾಜಕೀಯ ಆಸಕ್ತಿಯುಳ್ಳವರಿಗೆ ನಮ್ಮ ಪಕ್ಷದ ಆಹ್ವಾನ ನೀಡಿದೆ. ಸಂಜಯ್ ದತ್ ಅವರು ಸೆ.25ರಂದು ಆರ್ ಎಸ್ ಪಿ ಸೇರಲಿದ್ದಾರೆ" ಎಂದರು.
Recommended Video
2014ರಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮಿತ್ರಪಕ್ಷವಾಗಿದ್ದ ಆರ್ ಎಸ್ಪಿ 6 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆರ್ ಎಸ್ ಪಿಯ ರಾಹುಲ್ ಕುಲ್ ಅವರು ದಂಡ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಧಂಗರ್ ಸಮುದಾಯ ನಂಬಿಕೊಂಡಿರುವ ಆರ್ ಎಸ್ ಪಿ
2009ರ ಲೋಕಸಭೆ ಚುನಾವಣೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಸ್ಪರ್ಧಿಸಿದ್ದ ಜಂಕರ್ ಅವರು ಸೋಲು ಕಂಡಿದ್ದರು. ಈಗ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೀಟುಗಳನ್ನು ನೀಡಬೇಕು ಎಂದು ಆರ್ ಎಸ್ ಪಿ ಬೇಡಿಕೆಯಿಟ್ಟಿದೆ. ಧಂಗರ್ ಕುರುಬ ಜನಾಂಗದ ಮತಗಳನ್ನು ನಂಬಿಕೊಂಡಿರುವ ಆರ್ ಎಸ್ ಪಿಗೆ ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿ ಕೂಡಾ ಆಸಕ್ತಿ ಹೊಂದಿದೆ ಎಂಬ ಸುದ್ದಿಯಿದೆ. ಧಂಗರ್ ಸಮುದಾಯವರನ್ನು ಪರಿಶಿಷ್ಟ ಪಂಗಡ ಕೆಟಗರಿಗೆ ಸೇರಿಸುವಂತೆ ಆರ್ ಎಸ್ಪಿ ಆಗ್ರಹಿಸುತ್ತಿದೆ. ಸದ್ಯ ವಿಮುಕ್ತ ಜಾತಿ ಅಲೆಮಾರಿ ಬುಡಕಟ್ಟು (VJNT) ಎಂದು ಈ ಸಮುದಾಯವನ್ನು ಗುರುತಿಸಲಾಗುತ್ತಿದೆ.

ಸಂಜಯ್ ದತ್ ರಾಜಕೀಯ ಇನ್ನಿಂಗ್ಸ್
2009ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋದಿಂದ ಸ್ಪರ್ಧಿಸಿದ್ದ ಸಂಜಯ್ ದತ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂಥ ಸನ್ನಿವೇಶ ಎದುರಾಗಿತ್ತು. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಅಪರಾಧಿ ಎನಿಸಿಕೊಂಡಿದ್ದರು. ಆದರೆ, ಸಮಾಜ ವಾದಿ ಪಕ್ಷದ ಪರ ಗುರುತಿಸಿಕೊಂಡಿದ್ದ ಸಂಜಯ್ ದತ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಂತರ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಲ್ಲದೆ, ಪಕ್ಷವನ್ನು ತೊರೆದರು.

ಕಾಂಗೆಸ್ ನಿಷ್ಠವಾಗಿರುವ ದತ್ ಕುಟುಂಬ
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಜಯ್ ದತ್ ಅವರು ಚುನಾವಣೆ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಸುದ್ದಿ ಹಬ್ಬಿತ್ತು. ಆದರೆ, ಸುದ್ದಿಯನ್ನು ಅಲ್ಲಗೆಳೆದಿದ್ದರು. ಮುಂಬೈ ಪಶ್ಚಿಮ ಕ್ಷೇತ್ರದಿಂದ ಸಂಜಯ್ ದತ್ ತಂದೆ ಸುನೀಲ್ ದತ್ ಅವರು ಐದು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದರು. ಯುಪಿಎ 1 ಸರ್ಕಾರದಲ್ಲಿ ಕ್ರೀಡಾ ಮತ್ತು ಯುವಜನ ಖಾತೆ ಸಚಿವರಾಗಿದ್ದರು.
2004ರಿಂದ ಮೇ 2005ರ ತನಕ ಸಚಿವರಾಗಿದ್ದ ದತ್ ಅವರು ನಿಧನರಾಗುವ ತನಕ ಸಂಜಯ್ ದತ್ ಅವರು ರಾಜಕೀಯ ರಂಗ ಸೇರ್ಪಡೆಗೆ ಬೆಂಬಲಿಸಿರಲಿಲ್ಲ. ಸಂಜಯ್ ದತ್ ಸೋದರಿ ಪ್ರಿಯಾ ದತ್ ಕಾಂಗ್ರೆಸ್ ನ ವಿವಿಧ ಹುದ್ದೆಗಳಿದ್ದವರು, ಮುಂಬೈನಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು.

ಸಂಜು ಚಿತ್ರದ ಬಗ್ಗೆ ಆರೆಸ್ಸೆಸ್ ಆಕ್ಷೇಪ
ಸಂಜಯ್ ದತ್ ಗೆ ಒಳ್ಳೆ ಇಮೇಜ್ ತಂದು ಕೊಡುವ ಉದ್ದೇಶದಿಂದ ಅವರ ಬದುಕಿನ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ರಾಜಕುಮಾರ್ ಹಿರಾನಿ 'ಸಂಜು' ಚಿತ್ರವನ್ನು ಹೊರ ತರಲಾಗಿದೆ ಎಂದು ಆರೆಸ್ಸೆಸ್ ತನ್ನ ಮುಖವಾಣಿ' ಪಾಂಚಜನ್ಯ' ದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು. ಹಿರಾನಿಗೆ ಪ್ರಶ್ನೆಗಳ ಸುರಿಮಳೆಗೈದು, ಸಂಜಯ್ ದತ್ ಚಿತ್ರವನ್ನು ಮಾಡಿರುವ ಉದ್ದೇಶವೇನು? ಈ ಚಿತ್ರದಿಂದ ಯುವಜನತೆಗೆ ಯಾವ ಸಂದೇಶ ನೀಡುತ್ತಿದ್ದೀರಿ? ಖಳಪಾತ್ರವನ್ನು ಮಾದರಿಯಾಗಿ ಯುವ ಜನತೆ ಸ್ವೀಕರಿಸುವುದಿಲ್ಲವೇ? ಅಪರಾಧ, ದೇಶದ್ರೋಹ ಕೃತ್ಯಗಳ ವೈಭವೀಕರಣ ಎಷ್ಟು ಸರಿ? ಸಂಜಯ್ ಅವರನ್ನು ಸಾಚಾ ಎಂದು ತೋರಿಸಲು ಅವರ ಪರ ಪ್ರಚಾರಕ್ಕಾಗಿ ಈ ಚಿತ್ರವನ್ನು ಬಳಸಿದ್ದು ಸರಿಯೇ ಎಂದು ಕೇಳಲಾಗಿತ್ತು.
-
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ












Click it and Unblock the Notifications