ದಶಕದ ಬಳಿಕ ಮತ್ತೊಮ್ಮೆ ರಾಜಕೀಯಕ್ಕೆ ಸಂಜಯ್ ದತ್ ಎಂಟ್ರಿ
ಮುಂಬೈ, ಆಗಸ್ಟ್ 26: ಸರಿ ಸುಮಾರು 10 ವರ್ಷಗಳ ಬಳಿಕ ನಟ ಸಂಜಯ್ ದತ್ ರಾಜಕೀಯ ಮರು ಪ್ರವೇಶ ಮಾಡುತ್ತಿದ್ದಾರೆ. ಈ ಹಿಂದೆ ಸಮಾಜವಾದಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದ ಸಂಜಯ್ ದತ್ ಮೊದಲ ಯತ್ನದಲ್ಲಿ ಸಫಲರಾಗಿರಲಿಲ್ಲ.
"ಈಗ ರಾಜಕೀಯ ರಂಗಕ್ಕೆ ರೀ ಎಂಟ್ರಿ ಕೊಡುತ್ತಿದ್ದು, ಮಹಾರಾಷ್ಟ್ರದಲ್ಲಿ ಬಿಜೆಪಿಯ ಮಿತ್ರಪಕ್ಷವಾಗಿರುವ ರಾಷ್ಟ್ರೀಯ ಸಮಾಜ ಪಕ್ಷ (ಆರ್ಎಸ್ಪಿ)ಕ್ಕೆ ಸೆಪ್ಟೆಂಬರ್ 25ರಂದು ಅಧಿಕೃತವಾಗಿ ಸೇರಲಿದ್ದಾರೆ" ಎಂದು ಪಕ್ಷದ ಸ್ಥಾಪಕ ಮಹದೇವ್ ಜಂಕರ್ ಹೇಳಿದ್ದಾರೆ.
ರಾಷ್ಟ್ರೀಯ ಸಮಾಜ ಪಕ್ಷದ ಸಂಸ್ಥಾಪಕ(RSP) ಹಾಗೂ ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ ಮಹದೇವ್ ಜಂಕರ್ ಈ ಬಗ್ಗೆ ಮಾತನಾಡಿ, "ಸಿನಿಮಾ ಮಾಧ್ಯಮದಲ್ಲಿರುವ ರಾಜಕೀಯ ಆಸಕ್ತಿಯುಳ್ಳವರಿಗೆ ನಮ್ಮ ಪಕ್ಷದ ಆಹ್ವಾನ ನೀಡಿದೆ. ಸಂಜಯ್ ದತ್ ಅವರು ಸೆ.25ರಂದು ಆರ್ ಎಸ್ ಪಿ ಸೇರಲಿದ್ದಾರೆ" ಎಂದರು.
Recommended Video
2014ರಲ್ಲಿ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಎನ್ಡಿಎ ಮಿತ್ರಪಕ್ಷವಾಗಿದ್ದ ಆರ್ ಎಸ್ಪಿ 6 ಅಭ್ಯರ್ಥಿಗಳನ್ನು ಕಣಕ್ಕಿಳಿಸಿತ್ತು. ಆರ್ ಎಸ್ ಪಿಯ ರಾಹುಲ್ ಕುಲ್ ಅವರು ದಂಡ್ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು.

ಧಂಗರ್ ಸಮುದಾಯ ನಂಬಿಕೊಂಡಿರುವ ಆರ್ ಎಸ್ ಪಿ
2009ರ ಲೋಕಸಭೆ ಚುನಾವಣೆಯಲ್ಲಿ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ವಿರುದ್ಧ ಸ್ಪರ್ಧಿಸಿದ್ದ ಜಂಕರ್ ಅವರು ಸೋಲು ಕಂಡಿದ್ದರು. ಈಗ ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸೀಟುಗಳನ್ನು ನೀಡಬೇಕು ಎಂದು ಆರ್ ಎಸ್ ಪಿ ಬೇಡಿಕೆಯಿಟ್ಟಿದೆ. ಧಂಗರ್ ಕುರುಬ ಜನಾಂಗದ ಮತಗಳನ್ನು ನಂಬಿಕೊಂಡಿರುವ ಆರ್ ಎಸ್ ಪಿಗೆ ಸೀಟು ಹಂಚಿಕೆ ವಿಷಯದಲ್ಲಿ ಬಿಜೆಪಿ ಕೂಡಾ ಆಸಕ್ತಿ ಹೊಂದಿದೆ ಎಂಬ ಸುದ್ದಿಯಿದೆ. ಧಂಗರ್ ಸಮುದಾಯವರನ್ನು ಪರಿಶಿಷ್ಟ ಪಂಗಡ ಕೆಟಗರಿಗೆ ಸೇರಿಸುವಂತೆ ಆರ್ ಎಸ್ಪಿ ಆಗ್ರಹಿಸುತ್ತಿದೆ. ಸದ್ಯ ವಿಮುಕ್ತ ಜಾತಿ ಅಲೆಮಾರಿ ಬುಡಕಟ್ಟು (VJNT) ಎಂದು ಈ ಸಮುದಾಯವನ್ನು ಗುರುತಿಸಲಾಗುತ್ತಿದೆ.

ಸಂಜಯ್ ದತ್ ರಾಜಕೀಯ ಇನ್ನಿಂಗ್ಸ್
2009ರ ಲೋಕಸಭೆ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿಯಾಗಿ ಲಕ್ನೋದಿಂದ ಸ್ಪರ್ಧಿಸಿದ್ದ ಸಂಜಯ್ ದತ್ ಅವರು ಸ್ಪರ್ಧೆಯಿಂದ ಹಿಂದೆ ಸರಿಯುವಂಥ ಸನ್ನಿವೇಶ ಎದುರಾಗಿತ್ತು. ಅಕ್ರಮ ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಅಪರಾಧಿ ಎನಿಸಿಕೊಂಡಿದ್ದರು. ಆದರೆ, ಸಮಾಜ ವಾದಿ ಪಕ್ಷದ ಪರ ಗುರುತಿಸಿಕೊಂಡಿದ್ದ ಸಂಜಯ್ ದತ್ ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿದ್ದರು. ನಂತರ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಲ್ಲದೆ, ಪಕ್ಷವನ್ನು ತೊರೆದರು.

ಕಾಂಗೆಸ್ ನಿಷ್ಠವಾಗಿರುವ ದತ್ ಕುಟುಂಬ
2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಸಂಜಯ್ ದತ್ ಅವರು ಚುನಾವಣೆ ಸ್ಪರ್ಧಿಸುವ ಸಾಧ್ಯತೆ ಬಗ್ಗೆ ಸುದ್ದಿ ಹಬ್ಬಿತ್ತು. ಆದರೆ, ಸುದ್ದಿಯನ್ನು ಅಲ್ಲಗೆಳೆದಿದ್ದರು. ಮುಂಬೈ ಪಶ್ಚಿಮ ಕ್ಷೇತ್ರದಿಂದ ಸಂಜಯ್ ದತ್ ತಂದೆ ಸುನೀಲ್ ದತ್ ಅವರು ಐದು ಬಾರಿ ಸಂಸತ್ತಿಗೆ ಆಯ್ಕೆಯಾಗಿದ್ದರು. ಯುಪಿಎ 1 ಸರ್ಕಾರದಲ್ಲಿ ಕ್ರೀಡಾ ಮತ್ತು ಯುವಜನ ಖಾತೆ ಸಚಿವರಾಗಿದ್ದರು.
2004ರಿಂದ ಮೇ 2005ರ ತನಕ ಸಚಿವರಾಗಿದ್ದ ದತ್ ಅವರು ನಿಧನರಾಗುವ ತನಕ ಸಂಜಯ್ ದತ್ ಅವರು ರಾಜಕೀಯ ರಂಗ ಸೇರ್ಪಡೆಗೆ ಬೆಂಬಲಿಸಿರಲಿಲ್ಲ. ಸಂಜಯ್ ದತ್ ಸೋದರಿ ಪ್ರಿಯಾ ದತ್ ಕಾಂಗ್ರೆಸ್ ನ ವಿವಿಧ ಹುದ್ದೆಗಳಿದ್ದವರು, ಮುಂಬೈನಿಂದ ಸಂಸತ್ತಿಗೆ ಆಯ್ಕೆಯಾಗಿದ್ದರು.

ಸಂಜು ಚಿತ್ರದ ಬಗ್ಗೆ ಆರೆಸ್ಸೆಸ್ ಆಕ್ಷೇಪ
ಸಂಜಯ್ ದತ್ ಗೆ ಒಳ್ಳೆ ಇಮೇಜ್ ತಂದು ಕೊಡುವ ಉದ್ದೇಶದಿಂದ ಅವರ ಬದುಕಿನ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ರಾಜಕುಮಾರ್ ಹಿರಾನಿ 'ಸಂಜು' ಚಿತ್ರವನ್ನು ಹೊರ ತರಲಾಗಿದೆ ಎಂದು ಆರೆಸ್ಸೆಸ್ ತನ್ನ ಮುಖವಾಣಿ' ಪಾಂಚಜನ್ಯ' ದಲ್ಲಿ ಆಕ್ಷೇಪ ವ್ಯಕ್ತಪಡಿಸಿತ್ತು. ಹಿರಾನಿಗೆ ಪ್ರಶ್ನೆಗಳ ಸುರಿಮಳೆಗೈದು, ಸಂಜಯ್ ದತ್ ಚಿತ್ರವನ್ನು ಮಾಡಿರುವ ಉದ್ದೇಶವೇನು? ಈ ಚಿತ್ರದಿಂದ ಯುವಜನತೆಗೆ ಯಾವ ಸಂದೇಶ ನೀಡುತ್ತಿದ್ದೀರಿ? ಖಳಪಾತ್ರವನ್ನು ಮಾದರಿಯಾಗಿ ಯುವ ಜನತೆ ಸ್ವೀಕರಿಸುವುದಿಲ್ಲವೇ? ಅಪರಾಧ, ದೇಶದ್ರೋಹ ಕೃತ್ಯಗಳ ವೈಭವೀಕರಣ ಎಷ್ಟು ಸರಿ? ಸಂಜಯ್ ಅವರನ್ನು ಸಾಚಾ ಎಂದು ತೋರಿಸಲು ಅವರ ಪರ ಪ್ರಚಾರಕ್ಕಾಗಿ ಈ ಚಿತ್ರವನ್ನು ಬಳಸಿದ್ದು ಸರಿಯೇ ಎಂದು ಕೇಳಲಾಗಿತ್ತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications