ಬಾಲಿಕಾ ವಧು ಖ್ಯಾತಿ ನಟ ಸಿದ್ದಾರ್ಥ್ ಕಾರು ಅಪಘಾತ
ಮುಂಬೈ, ಜುಲೈ 22: ಹಿಂದಿ ಕಿರುತೆರೆಯ ಮೆಗಾ ಧಾರಾವಾಹಿ 'ಬಾಲಿಕಾ ವಧು' ಖ್ಯಾತಿಯ ನಟ ಸಿದ್ಧಾರ್ಥ್ ಶುಕ್ಲಾ ಅವರ ಬಿಎಂಡಬ್ಲ್ಯು ಎಕ್ಸ್ 5 ಕಾರು ಅಪಘಾತಕ್ಕೆ ಒಳಗಾಗಿದ್ದು, ಲೋಖಂಡವಾಲ, ಓಶಿವಾರ ನಾಗರೀಕರ ಅಸೋಸಿಯೇಷನ್ ಅವರು ಘಟನಾ ಸ್ಥಳದ ಚಿತ್ರಗಳನ್ನು ಟ್ವೀಟ್ ಮಾಡಿದ್ದಾರೆ.
ಮುಂಬೈನ ಓಶಿವಾರ ಪ್ರದೇಶದಲ್ಲಿ ಬಿಎಂಡಬ್ಲ್ಯು ಎಕ್ಸ್ 5 ಎಸ್ಯುವಿ ಕಾರ್ ಮುಂಜಾನೆ 6 ಗಂಟೆ ಸುಮಾರಿಗೆ ಮೂರು ಕಾರುಗಳಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಈ ಘಟನೆಯಲ್ಲಿ ಮೂವರಿಗೆ ಗಾಯಗಳಾಗಿವೆ. ಶುಕ್ಲಾರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದಾರೆ. ಶುಕ್ಲಾ ಅವರು ಕುಡಿದಿರಲಿಲ್ಲ ಎಂದು ಹೇಳಲಾಗಿದೆ.

ಆದರೆ, ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿದ್ದಕ್ಕಾಗಿ ಶುಕ್ಲಾ ಅವರ ವಿರುದ್ಧ ಪ್ರಕರಣ ದಾಖಲಾಗಿದೆ. ಆದರೆ, ಪ್ರತ್ಯಕ್ಷದರ್ಶಿಗಳ ಪ್ರಕಾರ, ಶುಕ್ಲಾ ಅವರು ಅಪಘಾತವಾದ ಬಳಿಕ ಕಾರಿನಿಂದ ಕೆಳಗಿಳಿದು, ತೂರಾಡುತ್ತಾ ದೂರ ಸರಿದರು.
— ANDHERI LOKHANDWALA OSHIWARA CITIZEN'S ASSOCIATION (@Lokhandwala_Bom) July 21, 2018
ಬಾಲಿಕಾ ವಧು ಮತ್ತು ಬಬುಲ್ ಕಾ ಆಂಗನ್ ಚುಟ್ಟೆ ನಾ ಟೆಲಿವಿಷನ್ ಧಾರಾವಾಹಿಗಳಲ್ಲಿನ ಪಾತ್ರಗಳ ಮೂಲಕ ಜನಪ್ರಿಯತೆ ಗಳಿಸಿರುವ ಶುಕ್ಲಾ ಅವರು 2008ರಿಂದ ಕಿರುತೆರೆಯಲ್ಲಿ ಜನಪ್ರಿಯತೆ ಗಳಿಸಿದ್ದಾರೆ.ಹಂಟಿ ಶರ್ಮಾ ಕಿ ದುಲ್ಹನಿಯ ಮತ್ತು ಸೂರ್ಮಾ ಚಿತ್ರದಲ್ಲೂ ನಟಿಸಿದ್ದರು. 2014ರಲ್ಲಿ ಸಿದ್ದಾರ್ಥ್ ಅವರು ಇದೇ ರೀತಿ ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಅಪಘಾತ ಮಾಡಿದ್ದರು.
Major accident at Shreeji restaurant junction Oshiwara Andheri west. Kindly avoid link road from adarsh Nagar junction. pic.twitter.com/mgKyAroubL
— ANDHERI LOKHANDWALA OSHIWARA CITIZEN'S ASSOCIATION (@Lokhandwala_Bom) July 21, 2018
— ANDHERI LOKHANDWALA OSHIWARA CITIZEN'S ASSOCIATION (@Lokhandwala_Bom) July 22, 2018
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications