ಚಿತ್ರಕರ್ಮಿ ಅನುರಾಗ್ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲು
ಮುಂಬೈ, ಸೆ. 22: ಹಿಂದಿ ಚಿತ್ರ ನಿರ್ಮಾಪಕ, ನಿರ್ದೇಶಕ, ನಟ ಅನುರಾಗ್ ಕಶ್ಯಪ್ ಅವರ ವಿರುದ್ಧ ನಟಿ ಪಾಯಲ್ ಘೋಶ್ ಅವರು ಅತ್ಯಾಚಾರ ಪ್ರಕರಣ ದಾಖಲಿಸಿದ್ದಾರೆ. ಕೆಲ ದಿನಗಳ ಹಿಂದೆ ಅನುರಾಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ನಟಿ, ಈಗ ಪೊಲೀಸ್ ಠಾಣೆ ಮೆಟ್ಟಿಲೇರಿ ಅಧಿಕೃತವಾಗಿ ದೂರು ದಾಖಲಿಸಿದ್ದಾರೆ.
ಆದರೆ ನಟಿ ಮಾಡಿರುವ #MeToo ಆರೋಪವನ್ನು ಅನುರಾಗ್ ಕಶ್ಯಪ್ ಅಲ್ಲಗೆಳೆದಿದ್ದಾರೆ. ಬಾಲಿವುಡ್ ನಲ್ಲಿ ಅನುರಾಗ್ ಪರ ವಿರೋಧ ಗುಂಪುಗಳಾಗಿವೆ. ನನ್ನ ಮೊದಲ ಪತ್ನಿ, ಎರಡನೇ ಪತ್ನಿ ಅಥವಾ ಪ್ರೇಮಿ ಅಥವಾ ನನ್ನ ಸಿನಿಮಾ ನಟಿ ಅಥವಾ ನಾನು ಬಲ್ಲ ಯಾವುದೇ ನಟಿಯೊಡನೆ ನಾನು ಆ ರೀತಿ ಅಸಭ್ಯವಾಗಿ ನಡೆದುಕೊಂಡಿಲ್ಲ, ಅಂಥ ಕೆಟ್ಟ ಅನುಭವವನ್ನು ಸಹಿಸಲು ಸಾಧ್ಯವೂ ಇಲ್ಲ ಎಂದು ಅನುರಾಗ್ ಕಶ್ಯಪ್ ಅವರು ಸರಣಿ ಟ್ವೀಟ್ ಮಾಡಿ ಪ್ರತಿಕ್ರಿಯಿಸಿದ್ದರು.
ಅನುರಾಗ್ ಅವರು ತನ್ನ ಮುಂದೆ ನಿಂತು ನನ್ನ ಸೆಲ್ವಾರ್ ಕಮೀಜ್ ತೆಗೆದರು. ಬಲವಂತ ಸಂಭೋಗದಲ್ಲಿ ತೊಡಗಿಕೊಂಡರು. ನಾನು ಧಿಕ್ಕರಿಸಿದಾಗ ಇದೆಲ್ಲವೂ ಮಾಮೂಲಿ, ದೈಹಿಕ ಸುಖ ಪಡೆಯಲು ಒಂದು ಕಾಲ್ ಮಾಡಿದರೆ ಸಾಕು ಎಂದು ನನಗೆ ಹೇಳಿದರು ಎಂದು ಆರೋಪಿಸಿದ್ದಾರೆ.
ಅನುರಾಗ್ ವಿರುದ್ಧ ಐಪಿಸಿ ಸೆಕ್ಷನ್ 376, 354, 341, 342 ಅನ್ವಯ ದೂರು ದಾಖಲಿಸಲಾಗಿದ್ದು, ಸಂತ್ರಸ್ತೆಯ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ ಎಂದು ಪಾಯಲ್ ಪರ ವಕೀಲರು ಹೇಳಿದರು.

ಅನುರಾಗ್ ಪರ ತಾಪ್ಸಿ ಪೊನ್ನು, ಸೈಯಾಮಿ ಖೇರ್, ರಾಮ್ ಗೋಪಾಲ್ ವರ್ಮಾ, ಅನುಭವ್ ಸಿನ್ಹಾ, ಕಲ್ಕಿ ಕೋಚ್ಲಿನ್, ಆರ್ತಿ ಬಜಾಜ್(ಇಬ್ಬರು ಅನುರಾಗ್ ಮಾಜಿ ಪತ್ನಿಯರು) ಮಾತನಾಡಿ, ಬೆಂಬಲ ವ್ಯಕ್ತಪಡಿಸಿದ್ದಾರೆ.
And here is the statement from my lawyer @PriyankaKhimani .. on my behalf .. thank You pic.twitter.com/0eXwNnK5ZI
— Anurag Kashyap (@anuragkashyap72) September 20, 2020
ಈ ನಡುವೆ ಅನುರಾಗ್ ಕಶ್ಯಪ್ ಅವರ ವಕೀಲರಾದ ಪ್ರಿಯಾಂಕಾ ಖಿಮಾನಿ ಅವರು ಪತ್ರಿಕಾ ಹೇಳಿಕೆ ಪ್ರಕಟಿಸಿ, ನನ್ನ ಕಕ್ಷಿದಾರರ ಮೇಲೆ ಬಂದಿರುವ ಆರೋಪಗಳು ನಿರಾಧಾರ ಎಂದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications