ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣಾ ನಿಯಂತ್ರಣ ಅದಾನಿ ಗ್ರೂಪ್ಗೆ
ಮುಂಬೈ, ಜು.14: ಭಾರತದ ಖ್ಯಾತ ಉದ್ಯಮಿ, ಬಿಲಿಯನೇರ್ ಗೌತಮ್ ಅದಾನಿ ನೇತೃತ್ವದ ಅದಾನಿ ಗುಂಪು ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣಾ ನಿಯಂತ್ರಣವನ್ನು ಜಿವಿಕೆ ಸಮೂಹದಿಂದ ತನ್ನ ಉಸ್ತುವಾರಿಗೆ ಪಡೆದುಕೊಂಡಿದೆ. ಈ ಮೂಲಕ ದೇಶದ ಅತಿದೊಡ್ಡ ವಿಮಾನ ನಿಲ್ದಾಣ ಮೂಲಸೌಕರ್ಯ ಕಂಪನಿಯಾಗಲು ಅದಾನಿ ಗುಂಪು ಹೆಜ್ಜೆಇಟ್ಟಿದೆ.
ಬಹುರಾಷ್ಟ್ರೀಯ ಕಂಪನಿಯಾದ ಅದಾನಿ ಎಂಟರ್ಪ್ರೈಸಸ್ ಲಿಮಿಟೆಡ್ನ ಸಂಪೂರ್ಣ ಸ್ವಾಮ್ಯದ ಅಂಗಸಂಸ್ಥೆಯಾದ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್ ಈಗ ವಿಮಾನ ನಿಲ್ದಾಣದ 25 ಪ್ರತಿಶತದಷ್ಟು ಪಾಲನ್ನು ಹೊಂದಿದೆ. ನಿರ್ವಹಣೆ ಮತ್ತು ಅಭಿವೃದ್ಧಿ ಹಿನ್ನೆಲೆ ಒಟ್ಟು ಎಂಟು ವಿಮಾನ ನಿಲ್ದಾಣಗಳ ನಿರ್ವಹಣೆ ಹೊಣೆಯನ್ನು ವಹಿಸಿಕೊಂಡಿದೆ. ಅದಾನಿ ಗುಂಪು ದೇಶದ ವಾಯು ಸರಕು ಸಂಚಾರದ ಶೇಕಡ 33 ರಷ್ಟು ನಿಯಂತ್ರಣವನ್ನು ಹೊಂದಿದೆ.
ಈ ಬಗ್ಗೆ ಹೇಳಿಕೆಯಲ್ಲಿ ಪ್ರತಿಕ್ರಿಯಿಸಿರುವ ಅದಾನಿ ಗ್ರೂಪ್, ಮುಂಬೈ ಇಂಟರ್ನ್ಯಾಷನಲ್ ಏರ್ಪೋರ್ಟ್ ಲಿಮಿಟೆಡ್ ಮಂಡಳಿಯ ಸಭೆ ನಡೆದಿದೆ. ಕೇಂದ್ರ ಸರ್ಕಾರ, ಮಹಾರಾಷ್ಟ್ರ ಸರ್ಕಾರ ಮತ್ತು ಮಹಾರಾಷ್ಟ್ರದ ನಗರ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ (ಸಿಡ್ಕೊ) ದಿಂದ ಪಡೆದ ಅನುಮೋದನೆಗಳನ್ನು ಅನುಸರಿಸುತ್ತೇವೆ ಎಂದು ತಿಳಿಸಿದೆ.

ಅದಾನಿ ಗ್ರೂಪ್ ಮುಂದಿನ ತಿಂಗಳು ನವೀ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಮಾಣವನ್ನು ಪ್ರಾರಂಭಿಸಿ ಮುಂದಿನ 90 ದಿನಗಳಲ್ಲಿ ಆರ್ಥಿಕ ಮುಚ್ಚುವಿಕೆಯನ್ನು ಪೂರ್ಣಗೊಳಿಸಲಿದೆ. 2024 ರಲ್ಲಿ ವಿಮಾನ ನಿಲ್ದಾಣವನ್ನು ಕಾರ್ಯಾರಂಭ ಮಾಡಲಿದೆ.
"ನಮ್ಮ ವಿಮಾನ ನಿಲ್ದಾಣ ವಿಸ್ತರಣಾ ಕಾರ್ಯತಂತ್ರವು ನಮ್ಮ ರಾಷ್ಟ್ರದ ಶ್ರೇಣಿ 1 ನಗರಗಳನ್ನು ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳೊಂದಿಗೆ ಮಾದರಿಯಲ್ಲಿ ಪರಿವರ್ತಿಸುವ ಉದ್ದೇಶವನ್ನು ಒಳಗೊಂಡಿದೆ. ಇದು ಭಾರತದ ನಗರ-ಗ್ರಾಮೀಣ ವಿಭಜನೆಯ ಬೇರ್ಪಡಿಸಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಸುಗಮವಾಗಿ ಪ್ರಯಾಣಿಸಲು ಅನುವು ಮಾಡಿಕೊಡಲಿದೆ," ಎಂದು ಅದಾನಿ ಸಮೂಹದ ಅಧ್ಯಕ್ಷರಾದ ಗೌತಮ್ ಅದಾನಿ ಹೇಳಿದರು.
2020 ರಲ್ಲಿ ಲಕ್ನೋ, ಅಹಮದಾಬಾದ್ ಮತ್ತು ಮಂಗಳೂರು ವಿಮಾನ ನಿಲ್ದಾಣದ ಕಾರ್ಯಾಚರಣೆಯನ್ನು ವಹಿಸಿಕೊಂಡ ಅದಾನಿ ಏರ್ಪೋರ್ಟ್ ಹೋಲ್ಡಿಂಗ್ಸ್ ಲಿಮಿಟೆಡ್, ಲಕ್ನೋ, ಅಹಮದಾಬಾದ್, ಮಂಗಳೂರು, ಗುವಾಹಟಿ, ಜೈಪುರ, ಮತ್ತು ತಿರುವನಂತಪುರಂನ ಆರು ವಿಮಾನ ನಿಲ್ದಾಣಗಳನ್ನು ನಿರ್ವಹಿಸಲು ಮತ್ತು ಆಧುನೀಕರಿಸಲಿದೆ.
(ಒನ್ಇಂಡಿಯಾ ಸುದ್ದಿ)
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications