ಆದರ್ಶ ಹಗರಣ: ಶಿಂಧೆಗೆ ಸಿಬಿಐನಿಂದ ಕ್ಲೀನ್ ಚಿಟ್
ಮುಂಬೈ, ಸೆ.19: ಆದರ್ಶ ಹೌಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಸಿಬಿಐ ಗುರುವಾರ (ಸೆ.19) ಕ್ಲೀನ್ ಚಿಟ್ ನೀಡಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗ ಶಿಂಧೆ ಅವರು ಅಧಿಕಾರ ದುರಪಯೋಗ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪ್ರಮುಖ ಸಾಕ್ಷ್ಯಗಳು ಸಿಗದಿದ್ದ ಕಾರಣ ಅವರನ್ನು ಪ್ರಕರಣದಿಂದ ಕೈ ಬೀಡಲಾಗುತ್ತಿದೆ ಎಂದು ಬಾಂಬೆ ಹೈಕೋರ್ಟ್ ಗೆ ಸಿಬಿಐ ಅಫಿಡವಿಟ್ ಸಲ್ಲಿಸಿದೆ.
ಆದರ್ಶ ಬಹುಮಹಡಿ ಕಟ್ಟಡ ನಿರ್ಮಾಣದಲ್ಲಿ ಹಲವಾರು ನಿಯಮಗಳ ಉಲ್ಲಂಘನೆಯಾಗಿದೆ. 6 ಅಂತಸ್ತುಗಳ ನಿರ್ಮಾಣವಾಗಬೇಕಿದ್ದ ಕಟ್ಟಡವನ್ನು ಯಾವುದೇ ಪೂರ್ವಾನುಮತಿ ಇಲ್ಲದೇ 31 ಅಂತಸ್ತುಗಳಿಗೆ ಏರಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪರ್ವಿನ್ ವಾಟೆಗ್ನೋಂಕರ್ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದರು.

ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಈ ಪ್ರಕರಣದಲ್ಲಿ ಶಿಂಧೆ ಅವರ ಪಾತ್ರವಿಲ್ಲ ಎಂದು ಹೇಳಿ ಕೋರ್ಟಿಗೆ ವರದಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಶಿಂಧೆ ಅವರು ಹೆಸರನ್ನು ನಮೂದಿಸಲು ಯಾವುದೇ ಪೂರಾವೆಗಳು ಇಲ್ಲ. ಹೀಗಾಗಿ ಅವರನ್ನು ಪ್ರಕರಣದಿಂದ ಕೈ ಬಿಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಆದರ್ಶ ಆಯೋಗದಿಂದ ಮಾಜಿ ಸಚಿವ ಕನ್ನೈಯಲಾಲ್ ಗಿಡ್ವಾಣಿ ಅವರಿಂದ ತೆರವುಗೊಂಡಿದ್ದ ಸ್ಧಾನಕ್ಕೆ ಲೇಟ್ ಮೇಜರ್ ಎನ್. ಡಬ್ಲೂ. ಖಾನ್ಕೋಜಿ ಅವರನ್ನು ನೇಮಕ ಮಾಡಿ ಎಂದು ಶಿಂಧೆ ಸೂಚಿಸಿದ್ದರು ಎಂದು ವಾಟೆಗ್ನೊಂಕರ್ ದೂರಿದ್ದರು.
ಆದರ್ಶ ಸೊಸೈಟಿಯ ಸದಸ್ಯರನ್ನಾಗಿ ಮಾಡವಂತೆ ಸೂಚಿಸಲು ಖಾನ್ಕೋಜಿ ಹಾಗೂ ಶಿಂಧೆ ಅವರ ನಡುವೆ ಕೌಟುಂಬಿಕ ಸಂಬಂಧವಿಲ್ಲ. ಹೀಗಾಗಿ ಗಿಡ್ವಾಣಿ ಸ್ಥಾನಕ್ಕೆ ಖಾನ್ಕೋಜಿ ಅವರನ್ನು ನೇಮಿಸುವ ಸಂಬಂಧ ಯಾವುದೇ ಪೂರಾವೆಗಳು ಇಲ್ಲ ಎಂದು ಹಿರಿಯ ಸಿಬಿಐ ಅಧಿಕಾರಿ ಕೆ. ಬಾಬು ತಿಳಿಸಿದ್ದಾರೆ.
ಶಿಂಧೆ ಅವರು ಸುಮಾರು 51 ಕ್ಕೂ ಅಧಿಕ ಬೇನಾಮಿ ಸದಸ್ಯರ ಹೆಸರನ್ನು ಸೇರಿಸಿದ್ದಾರೆ ಎಲ್ಲರೂ ಸೊಸೈಟಿ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಅಫಿಡವಿಟ್ ನಿಂದ ಕಂಡು ಬಂದಿದೆ ಎಂದು ಜಸ್ಟೀಸ್ ಪಿವಿ ಹರ್ದಾಸ್ ಹಾಗೂ ಪಿಎನ್ ದೇಶಮುಖ್ ಅವರು ಪ್ರಕರಣದ ವಿಚಾರಣೆಯಲ್ಲಿ ಸೆ.26ಕ್ಕೆ ಮುಂದೂಡಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications