ಆದರ್ಶ ಹಗರಣ: ಶಿಂಧೆಗೆ ಸಿಬಿಐನಿಂದ ಕ್ಲೀನ್ ಚಿಟ್
ಮುಂಬೈ, ಸೆ.19: ಆದರ್ಶ ಹೌಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಸುಶೀಲ್ ಕುಮಾರ್ ಶಿಂಧೆ ಅವರಿಗೆ ಸಿಬಿಐ ಗುರುವಾರ (ಸೆ.19) ಕ್ಲೀನ್ ಚಿಟ್ ನೀಡಿದೆ.
ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದಾಗ ಶಿಂಧೆ ಅವರು ಅಧಿಕಾರ ದುರಪಯೋಗ ಮಾಡಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪ್ರಮುಖ ಸಾಕ್ಷ್ಯಗಳು ಸಿಗದಿದ್ದ ಕಾರಣ ಅವರನ್ನು ಪ್ರಕರಣದಿಂದ ಕೈ ಬೀಡಲಾಗುತ್ತಿದೆ ಎಂದು ಬಾಂಬೆ ಹೈಕೋರ್ಟ್ ಗೆ ಸಿಬಿಐ ಅಫಿಡವಿಟ್ ಸಲ್ಲಿಸಿದೆ.
ಆದರ್ಶ ಬಹುಮಹಡಿ ಕಟ್ಟಡ ನಿರ್ಮಾಣದಲ್ಲಿ ಹಲವಾರು ನಿಯಮಗಳ ಉಲ್ಲಂಘನೆಯಾಗಿದೆ. 6 ಅಂತಸ್ತುಗಳ ನಿರ್ಮಾಣವಾಗಬೇಕಿದ್ದ ಕಟ್ಟಡವನ್ನು ಯಾವುದೇ ಪೂರ್ವಾನುಮತಿ ಇಲ್ಲದೇ 31 ಅಂತಸ್ತುಗಳಿಗೆ ಏರಿಸಲಾಗಿದೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ಪರ್ವಿನ್ ವಾಟೆಗ್ನೋಂಕರ್ ಮುಂಬೈ ಹೈಕೋರ್ಟ್ ಗೆ ಅರ್ಜಿ ಸಲ್ಲಿದ್ದರು.

ಈ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಈ ಪ್ರಕರಣದಲ್ಲಿ ಶಿಂಧೆ ಅವರ ಪಾತ್ರವಿಲ್ಲ ಎಂದು ಹೇಳಿ ಕೋರ್ಟಿಗೆ ವರದಿ ಸಲ್ಲಿಸಿದೆ. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಶಿಂಧೆ ಅವರು ಹೆಸರನ್ನು ನಮೂದಿಸಲು ಯಾವುದೇ ಪೂರಾವೆಗಳು ಇಲ್ಲ. ಹೀಗಾಗಿ ಅವರನ್ನು ಪ್ರಕರಣದಿಂದ ಕೈ ಬಿಡಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
ಆದರ್ಶ ಆಯೋಗದಿಂದ ಮಾಜಿ ಸಚಿವ ಕನ್ನೈಯಲಾಲ್ ಗಿಡ್ವಾಣಿ ಅವರಿಂದ ತೆರವುಗೊಂಡಿದ್ದ ಸ್ಧಾನಕ್ಕೆ ಲೇಟ್ ಮೇಜರ್ ಎನ್. ಡಬ್ಲೂ. ಖಾನ್ಕೋಜಿ ಅವರನ್ನು ನೇಮಕ ಮಾಡಿ ಎಂದು ಶಿಂಧೆ ಸೂಚಿಸಿದ್ದರು ಎಂದು ವಾಟೆಗ್ನೊಂಕರ್ ದೂರಿದ್ದರು.
ಆದರ್ಶ ಸೊಸೈಟಿಯ ಸದಸ್ಯರನ್ನಾಗಿ ಮಾಡವಂತೆ ಸೂಚಿಸಲು ಖಾನ್ಕೋಜಿ ಹಾಗೂ ಶಿಂಧೆ ಅವರ ನಡುವೆ ಕೌಟುಂಬಿಕ ಸಂಬಂಧವಿಲ್ಲ. ಹೀಗಾಗಿ ಗಿಡ್ವಾಣಿ ಸ್ಥಾನಕ್ಕೆ ಖಾನ್ಕೋಜಿ ಅವರನ್ನು ನೇಮಿಸುವ ಸಂಬಂಧ ಯಾವುದೇ ಪೂರಾವೆಗಳು ಇಲ್ಲ ಎಂದು ಹಿರಿಯ ಸಿಬಿಐ ಅಧಿಕಾರಿ ಕೆ. ಬಾಬು ತಿಳಿಸಿದ್ದಾರೆ.
ಶಿಂಧೆ ಅವರು ಸುಮಾರು 51 ಕ್ಕೂ ಅಧಿಕ ಬೇನಾಮಿ ಸದಸ್ಯರ ಹೆಸರನ್ನು ಸೇರಿಸಿದ್ದಾರೆ ಎಲ್ಲರೂ ಸೊಸೈಟಿ ಫಲಾನುಭವಿಗಳಾಗಿದ್ದಾರೆ ಎಂದು ಹೇಳಿರುವ ಆರೋಪದಲ್ಲಿ ಹುರುಳಿಲ್ಲ ಎಂದು ಅಫಿಡವಿಟ್ ನಿಂದ ಕಂಡು ಬಂದಿದೆ ಎಂದು ಜಸ್ಟೀಸ್ ಪಿವಿ ಹರ್ದಾಸ್ ಹಾಗೂ ಪಿಎನ್ ದೇಶಮುಖ್ ಅವರು ಪ್ರಕರಣದ ವಿಚಾರಣೆಯಲ್ಲಿ ಸೆ.26ಕ್ಕೆ ಮುಂದೂಡಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications