ಅನುಭವವಿಲ್ಲದ ಆದಿತ್ಯ ಠಾಕ್ರೆ ಸಿಎಂ ಆದ್ರೆ ಅವಮಾನ :ರಾಮದಾಸ್ ಅತಾವಳೆ
ಮುಂಬೈ, ನವೆಂಬರ್ 2: ಏನೂ ಅನುಭವವಿಲ್ಲದ ಆದಿತ್ಯ ಠಾಕ್ರೆ ಮುಖ್ಯಮಂತ್ರಿಯಾದರೆ ಅದು ನಮಗೆ ಮಾಡುವ ಅವಮಾನ ಎಂದು ಕೇಂದ್ರ ಸಚಿವ ರಾಮ್ದಾದ ಅತಾವಳೆ ಹೇಳಿದ್ದಾರೆ.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರದ ಮುಖ್ಯಮಂತ್ರಿ ಬಿಜೆಪಿಯವರು ಆಗಿರಬೇಕು. ಶಿವಸೇನೆ ಮುಖಂಡ ಆದಿತ್ಯ ಠಾಕ್ರೆ ಸಿಎಂ ಆದರೆ ಅವರಿಗೆ ಯಾವುದೇ ಅನುಭವವಿಲ್ಲದ ಕಾರಣ ಅದು ಹಿರಿಯ ನಾಯಕರಿಗೆ ಮಾಡಿದ ಅವಮಾನ ಎಂದು ಹೇಳಿದ್ದಾರೆ.
'ಮುಖ್ಯಮಂತ್ರಿ ಬಿಜೆಪಿಯವರಾಗಿರಬೇಕು. ದೇವೇಂದ್ರ ಫಡ್ನವೀಸ್ ಅವರಿಗೆ ಅವಕಾಶ ನೀಡಬೇಕು. ಆದಿತ್ಯ ಠಾಕ್ರೆ ಅವರಿಗೆ ಯಾವುದೇ ಅನುಭವವಿಲ್ಲ. ಅವರು ಸಿಎಂ ಆದರೆ ಅದು ನಮಗೆ ಅವಮಾನವಾಗುತ್ತದೆ' ಎಂದಿದ್ದಾರೆ.

ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಶಿವಸೇನೆ ರಾಜಿ ಮಾಡಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಆ ಮೂಲಕ ಈಗ ಶಿವಸೇನಾ ಮತ್ತು ಬಿಜೆಪಿ ನಡುವೆ ಸಿಎಂ ಹುದ್ದೆಗಾಗಿ ನಡೆದಿರುವ ಗದ್ದಲದಲ್ಲಿ ಮಹಾರಾಷ್ಟ್ರ ಸಿಎಂಗೆ ಫಡ್ನವೀಸ್ ಅವರ ಉಮೇದುವಾರಿಕೆಯನ್ನು ಅಥವಾಳೆ ಬೆಂಬಲಿಸಿದ್ದಾರೆ. ಅವರ ಪಕ್ಷವು ಎನ್ಡಿಎ ಸರ್ಕಾರದ ಮಿತ್ರ ಪಕ್ಷವಾಗಿದೆ.
ಮಹಾಯುತಿ (ಬಿಜೆಪಿ-ಶಿವಸೇನೆ ಮೈತ್ರಿ) ಸ್ಪಷ್ಟ ಬಹುಮತವನ್ನು ಪಡೆದಿದೆ. ದೇವೇಂದ್ರ ಫಡ್ನವೀಸ್ ಅವರು ಬಿಜೆಪಿ ಶಾಸಕಾಂಗ ನಾಯಕರಾಗಿ ಆಯ್ಕೆಯಾದರು. ಮುಖ್ಯಮಂತ್ರಿಯವರ ಹೆಸರನ್ನು ಬೆಂಬಲಿಸಲು ನಾವು ನಿರ್ಧರಿಸಿದ್ದೇವೆ, ಏಕೆಂದರೆ ಅವರು ನಮಗೆ ಏಕೈಕ ಮುಂಚೂಣಿಯಲ್ಲಿದ್ದಾರೆ ಎಂದರು.
-
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ












Click it and Unblock the Notifications