ಪತ್ನಿಯಿಂದಲೇ ಪತಿಯ ಹತ್ಯೆ: ನಿಜವಾದ ಕಾರಣವೇನು?
ಮುಂಬೈ, ಏಪ್ರಿಲ್ 25: ಉತ್ತರ ಪ್ರದೇಶ ಮತ್ತು ಉತ್ತರಾಖಂಡ್ ನ ಮಾಜಿ ಮುಖ್ಯಮಂತ್ರಿ ದಿ. ಎನ್ ಡಿ ತಿವಾರಿ ಅವರ ಪುತ್ರ ರೋಹಿತ್ ಶೇಖರ್ ತಿವಾರಿ ಅವರ ಹತ್ಯೆ ಪ್ರಕರಣ ದಿನೇ ದಿನೇ ಹೊಸ ಹೊಸ ತಿರುವು ಪಡೆಯುತ್ತಿದೆ.
ಕುಡಿದ ಮತ್ತಿನಲ್ಲಿದ್ದ ಪತಿಯನ್ನು ದಿಂಬಿನಿಂದ ಉಸಿರುಗಟ್ಟಿಸಿ ಕೊಂದ ನಂತರ ಅಪೂರ್ವ ತಿವಾರಿ 'ವೈವಾಹಿಕ ಬದುಕಿನಲ್ಲಿ ಸಮಾಧಾನವಿಲ್ಲದಿರುವುದೇ ಈ ಕೊಲೆಗೆ ಕಾರಣ' ಎಂದಿದ್ದರು. ಆದರೆ ಕೊಲೆಗೆ ಇವಿಷ್ಟೇ ಕಾರಣವಲ್ಲ ಎಂದು ಮೃತ ರೋಹಿತ್ ತಾಯಿ ಉಜ್ವಲ ಶರ್ಮಾ ಹೇಳಿದ್ದಾರೆ.
"ಅಪೂರ್ವ ಅವರಿಗೆ ವಿವಾಹೇತರ ಸಂಬಂಧ ಇತ್ತು. ಮತ್ತು ಅವರು ರೋಹಿತ್ ಅವರ ಆಸ್ತಿಯ ಮೇಲೆ ಕಣ್ಣು ಹಾಕಿದ್ದರು. ಹಣದ ಆಸೆ ಮತ್ತು ಅನೈತಿಕ ಸಂಬಂಧವೇ ಈ ಹತ್ಯೆಗೆ ಕಾರಣ" ಎಂದು ಉಜ್ವಲ ಶರ್ಮಾ ಹೇಳಿದ್ದಾರೆ.

ರೋಹಿತ್ ಶೇಖರ್ ತಿವಾರಿ ಅವರು ಏಪ್ರಿಲ್ 16 ರಂದು ಅಪರಾಹ್ನ 4 ಗಂಟೆಯ ವೇಳೆಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಅವರ ಬೆಡ್ ರೂಮಿನಲ್ಲಿ ಪತ್ತೆಯಾಗಿದ್ದರು. ಮೂಗಿನಲ್ಲಿ ರಕ್ತಸೋರುತ್ತಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ರವಾನಿಸಲಾಯಿತಾದರೂ, ಅವರು ದಾರಿಯಲ್ಲೇ ಅಸುನೀಗಿದ್ದರು. ಮೇಲ್ನೋಟಕ್ಕೆ ಇದನ್ನು ಹೃದಯಾಘಾತ ಎಂದು ವೈದ್ಯರು ತಿಳಿಸಿದ್ದರು.
ಆದರೆ ಅಸಲಿ ಕಾರಣ ಬೇರೆಯೇ ಇದೆ ಎಂಬ ಅನುಮಾನ ಅವರನ್ನು ಕೂಲಂಕಷವಾಗಿ ವೈದ್ಯಕೀಯ ಪರೀಕ್ಷೆನಡೆಸಿದಾಗ ಆರಂಭವಾಗಿತ್ತು. ವೈದ್ಯಕೀಯ ವರದಿ, ಇದು ಸಹಜ ಸಾವಲ್ಲ ಎಂದಿತ್ತು. ಕೂಡಲೇ ತನಿಖೆ ಆರಂಭಿಸಿದ ಪೊಲೀಸರು, ರೋಹಿತ್ ಪತ್ನಿ ಅಪೂರ್ವ ಮತ್ತು ಮನೆಕೆಲಸದವರನ್ನು ವಿಚಾರಣೆಗೊಳಪಡಿಸಿದ್ದರು.
ವಿಚಾರಣೆಯ ಸಂದರ್ಭದಲ್ಲಿ ಅಪೂರ್ವ, ತಾವೇ ಪತಿಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದರು. "ವೈವಾಹಿಕ ಜೀವನ ಸಮಾಧಾನಕರವಾಗಿರಲಿಲ್ಲವಾದ್ದರಿಂದ ಮತ್ತು ಪತಿಯ ಕುಡಿತದ ಚಟದಿಂದ ಬೇಸತ್ತಿದ್ದರಿಂದ ಅವರನ್ನು ಕೊಂದೆ" ಎಂದು ಅಪೂರ್ವ ಒಪ್ಪಿಕೊಂಡಿದ್ದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications