ಮಹಾರಾಷ್ಟ್ರದಲ್ಲಿ 9000 ಪಕ್ಷಿಗಳ ಕೊಲೆಗೆ ಕಾರಣವಾದ ಹಕ್ಕಿಜ್ವರ!
ಮುಂಬೈ, ಜನವರಿ.11: ದೇಶದಲ್ಲಿ ಕೊರೊನಾವೈರಸ್ ಸೋಂಕಿ ಹಾವಳಿ ಕೊಂಚ ತಗ್ಗುತ್ತಿರುವ ಬೆನ್ನಲ್ಲೇ ಹಲವು ರಾಜ್ಯಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಹಕ್ಕಿಜ್ವರ ಆತಂಕ ಹುಟ್ಟಿಸುತ್ತಿದೆ. ನವದೆಹಲಿಯಲ್ಲಿ 8 ಹಕ್ಕಿಗಳ ಮಾದರಿ ಪರೀಕ್ಷಾ ವರದಿ ಬಳಿಕೆ ರಾಜ್ಯದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದನ್ನು ರಾಜ್ಯ ಪಶು ಸಂಗೋಪನಾ ಇಲಾಖೆಯು ದೃಢಪಡಿಸಿದೆ.
ಮಹಾರಾಷ್ಟ್ರ ಮುಂಬೈನ ಪರ್ಭಾನಿಯಲ್ಲಿ 9000 ಬಗೆಯ ಹಕ್ಕಿಗಳನ್ನು ಕೊಲ್ಲಲಾಗಿದೆ. ಈ ಪೈಕಿ ಕೆಲವು ಪಕ್ಷಿಗಳ ಮಾದರಿಯಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದು ದೃಢಪಟ್ಟಿದೆ. ಲಾತೂರ್ ಮತ್ತು ಅಮರಾವತಿಯಲ್ಲಿ ಹಕ್ಕಿಗಳ ಸಾವಿನ ಬಗ್ಗೆ ವರದಿಯಾಗಿದೆ.
ಮುಂಬೈ ಛೇಂಬರ್ ನಲ್ಲಿ 11 ಕಾಗೆಗಳು ಪ್ರಾಣ ಬಿಟ್ಟಿದ್ದು, ಹಕ್ಕಿಜ್ವರದ ಆತಂಕವನ್ನು ಮತ್ತಷ್ಟು ಹೆಚ್ಚುವಂತೆ ಮಾಡಿದೆ. ಮುಂಬೈನ ಹಲವು ಪ್ರದೇಶಗಳಲ್ಲಿ ಸಂಚರಿಸಿದ ನಂತರದಲ್ಲಿ ಹಕ್ಕಿಗಳು ಛೇಂಬರ್ ಬಳಿ ಸಾವನ್ನಪ್ಪಿದ್ದು, ಈ ಪೈಕಿ ಎರಡು ಪಕ್ಷಿಗಳ ಮಾದರಿಯನ್ನು ಪರೀಕ್ಷೆಗೆ ಕಳುಹಿಸಿ ಕೊಡಲಾಗಿದೆ.

ಮುಂಬೈನಲ್ಲಿ ಪಕ್ಷಿಗಳ ಮಾರಾಟ ನಿಷೇಧ
ಮಹಾರಾಷ್ಟ್ರ ಮುಂಬೈನ ಪರ್ಭಾನಿಯಲ್ಲಿ ಹಕ್ಕಿಜ್ವರದಿಂದಲೇ 800 ಕೋಳಿಗಳು ಸಾವನ್ನಪ್ಪಿರುವುದು ದೃಢಪಟ್ಟಿದೆ. ಈ ಹಿನ್ನೆಲೆ ಜಿಲ್ಲಾಡಳಿತವು 9000 ಹಕ್ಕಿಗಳನ್ನು ಕೊಂದು ಹಾಕಲಾಗಿದೆ. ಪರ್ಭಾನಿಯ ಸುತ್ತಮುತ್ತ 10 ಕಿ.ಮೀ ವ್ಯಾಪ್ತಿಯಲ್ಲಿ ಪಕ್ಷಿಗಳ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಡಳಿತವು ಆದೇಶ ಹೊರಡಿಸಿದೆ.

ಜಿಲ್ಲಾಡಳಿತದಿಂದ ನಿಷೇಧಿತ ಪ್ರದೇಶ ಘೋಷಣೆ
ಮಹಾರಾಷ್ಟ್ರದ ಹಲವು ಗ್ರಾಮೀಣ ಭಾಗಗಳಲ್ಲಿ ಹಕ್ಕಿಜ್ವರದಿಂದ ಪಕ್ಷಿಗಳು ಸಾವನ್ನಪ್ಪುತ್ತಿವೆ. ಈ ಹಿನ್ನೆಲೆ ಅಂಥ ಪ್ರದೇಶಗಳನ್ನು ಗುರುತಿಸಲಾಗಿದ್ದು, ನಿಷೇಧಿತ ಪ್ರದೇಶ ಎಂದು ಜಿಲ್ಲಾಡಳಿತವು ಘೋಷಿಸಿದೆ. ಲಾತೂರಿನಲ್ಲಿ 400 ಕೋಳಿಗಳು, ಅಮರಾವತಿಯಲ್ಲಿ 40 ಕೋಳಿಗಳು ಸತ್ತಿದ್ದು, ಮಾದರಿಗಳನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ರವಾನಿಸಲಾಗಿದೆ.

"ಮನುಷ್ಯರಿಗೆ ಹರಡುವುದಿಲ್ಲ ಹಕ್ಕಿಜ್ವರ"
ನೂರಾರು ಹಕ್ಕಿಗಳನ್ನು ಬಲಿ ತೆಗೆದುಕೊಳ್ಳುತ್ತಿರುವ ಹಕ್ಕಿಜ್ವರವು ಮನುಷ್ಯರಲ್ಲೂ ಕಾಣಿಸಿಕೊಳ್ಳುತ್ತದೆಯೇ ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿನ್ನೂ ಸಿಕ್ಕಿಲ್ಲ. ಸದ್ಯದ ಮಟ್ಟಿಗೆ ಹಕ್ಕಿಜ್ವರವು ಮನುಷ್ಯರಲ್ಲಿ ಕಾಣಿಸಿಕೊಂಡಿಲ್ಲ. ಜನರಿಗೆ ಈ ಸೋಂಕು ಹರಡುವುದಿಲ್ಲ ಎಂದು ಹೇಳಲಾಗುತ್ತಿದೆ. ಮನುಷ್ಯರಿಗೆ ಹಕ್ಕಿಜ್ವರದಿಂದ ಯಾವುದೇ ಆಪತ್ತು ಇಲ್ಲ ಎಂದು ಪರ್ಭಾನಿ ಜಿಲ್ಲಾಧಿಕಾರಿ ದೀಪಕ್ ಮುಲ್ಗಿಕರ್ ತಿಳಿಸಿದ್ದಾರೆ.

ಹಕ್ಕಿಜ್ವರದ ಭೀತಿ ಎದುರಿಸುತ್ತಿರುವ ರಾಜ್ಯಗಳು
ನವದೆಹಲಿ, ಕೇರಳ, ಹರಿಯಾಣ, ಪಂಜಾಬ್, ಮಧ್ಯಪ್ರದೇಶ, ಉತ್ತರ ಪ್ರದೇಶ ಮತ್ತು ಗುಜರಾತ್ ರಾಜ್ಯಗಳಲ್ಲಿ ಈಗಾಗಲೇ ಹಕ್ಕಿಜ್ವರದ ಭೀತಿ ಎದುರಾಗಿದೆ. ಈ ರಾಜ್ಯಗಳಲ್ಲಿ ಸಾವನ್ನಪ್ಪಿರುವ ಹಕ್ಕಿಗಳಲ್ಲಿ ಸೋಂಕು ಕಾಣಿಸಿಕೊಂಡಿರುವುದು ವೈದ್ಯಕೀಯ ತಪಾಸಣೆಯಲ್ಲೂ ದೃಢಪಟ್ಟಿದೆ. ಈ ಹಿನ್ನೆಲೆ ಉತ್ತರ ಪ್ರದೇಶದ ಕಾನ್ಫುರ್ ನಲ್ಲಿರುವ ಮೃಗಾಲಯ ಮತ್ತು ದಕ್ಷಿಣ ದೆಹಲಿಯಲ್ಲಿರುವ ಪ್ರಸಿದ್ಧ ಹೌಜ್ ಖಾಸ್ ಮೃಗಾಲಯವನ್ನು ಬಂದ್ ಮಾಡಲಾಗಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications