ಮರಾಠರ ನಂತರ ಬ್ರಾಹ್ಮಣರಿಂದ ಮೀಸಲಾತಿಗಾಗಿ ಪಟ್ಟು
ಮುಂಬೈ, ಜನವರಿ 16: ಮೇಲ್ವರ್ಗದವರಿಗೂ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಮೀಸಲಾತಿಯನ್ನು ಕೇಂದ್ರ ಸರ್ಕಾರ ಕಲ್ಪಿಸಿದ ಬಳಿಕ ವಿವಿಧ ರಾಜ್ಯಗಳಲ್ಲಿ ಶೇಕಡಾವಾರು ಮೀಸಲಾತಿ ಪ್ರಮಾಣದಲ್ಲಿ ಬದಲಾವಣೆ ಕಂಡು ಬಂದಿದೆ. ಈಗ ಮಹಾರಾಷ್ಟ್ರದಲ್ಲಿ ಬ್ರಾಹ್ಮಣರು ಮೀಸಲಾತಿಗಾಗಿ ಆಗ್ರಹಿಸಿ, ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.
ಮೀಸಲಾತಿ ಆಗ್ರಹಿಸಿ ಮರಾಠಿಗರು ಬೃಹತ್ ಪ್ರತಿಭಟನೆ ನಡೆಸಿ, ದೇವೇಂದ್ರ ಫಡ್ನವಿಸ್ ಸರ್ಕಾರಕ್ಕೆ ಚುರುಕು ಮುಟ್ಟಿಸಿದ್ದನ್ನು ಇಲ್ಲಿ ಸ್ಮರಿಸಬಹುದು. ಇದೇ ಮಾದರಿಯಲ್ಲಿ ಜನವರಿ 22ರಂದು ಅಜಾದ್ ಮೈದಾನದಲ್ಲಿ ಬೃಹತ್ ಸಭೆ ನಡೆಸಲಾಗುವುದು, ವಿವಿಧ ಬೇಡಿಕೆಗಳನ್ನು ಆಗ್ರಹಿಸಲಾಗುವುದು ಎಂದು ಸಮಸ್ತ್ ಬ್ರಾಹ್ಮಣ ಸಮಾಜ್ ಹೇಳಿದೆ.
ಕೇಂದ್ರ ಸರ್ಕಾರದ ಮೀಸಲಾತಿ ನೀತಿಯನ್ನು ರಾಜ್ಯಗಳಲ್ಲಿ ಅಳವಡಿಸಲು ಕಾನೂನು ಅಡ್ಡಿಯಾಗುವ ಸಾಧ್ಯತೆಯಿದೆ. ಮಹಾರಾಷ್ಟ್ರದಲ್ಲಿ ಈಗಾಗಲೇ ಮೇಲ್ವರ್ಗದ ಕೆಲವರಿಗೆ ಮೀಸಲಾತಿ ಸಿಕ್ಕಿದೆ. ಆದರೆ,ಬ್ರಾಹ್ಮಣ ಸಮುದಾಯಕ್ಕೆ ಯಾವುದೇ ಪ್ರಯೋಜನವಾಗಿಲ್ಲ ಎಂದು ಸಮಸ್ತ್ ಬ್ರಾಹ್ಮಣ ಸಮಾಜದ ಸಂಚಾಲಕ ವಿಶ್ವಜೀತ್ ದೇಶಪಾಂಡೆ ಹೇಳಿದರು.

ಬ್ರಾಹ್ಮಣ ಸಮುದಾಯದ ಬಹುತೇಕರು ಅರ್ಚಕ ಹುದ್ದೆಯಲ್ಲಿದ್ದಾರೆ. ಕೆಲವು ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿದ್ದಾರೆ. ಆದರೆ, ಆರ್ಥಿಕ ಪರಿಸ್ಥಿತಿ ಎಲ್ಲರದ್ದು ಶೋಚನೀಯವಾಗಿದೆ.
ಆಚರಣೆ ಮಾಡುವವರಿಗೆ ಮಾಸಿಕ 5000ರು ಪಿಂಚಣಿ ಸೇರಿದಂತೆ 15ಕ್ಕೂ ಅಧಿಕ ಬೇಡಿಕೆಗಳಿಗೆ ಆಗ್ರಹಿಸಿ, ಶಾಂತಿಯುವ ಮೆರವಣಿಗೆ ನಡೆಸಲಾಗುವುದು. ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಆರ್ಥಿಕ ನೆರವು, ಹಾಸ್ಟೆಲ್, ಆರ್ಥಿಕ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಕ್ರಮ ಬೇಡಿಕೆ ಪಟ್ಟಿಯಲ್ಲಿವೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications