42ವರ್ಷಗಳ ಕೋಮಾದಿಂದ ಚಿರನಿದ್ರೆಗೆ ಜಾರಿದ ಅರುಣಾ
ಮುಂಬೈ, ಮೇ.18: ಸುಮಾರು 42 ವರ್ಷಗಳಿಂದ ಮರಣಶಯ್ಯೆಯಲ್ಲಿದ್ದ ಕನ್ನಡತಿ ನರ್ಸ್ ಅರುಣಾ ರಾಮಚಂದ್ರ ಶಾನಭಾಗ ಅವರಿಗೆ ಚಿರನಿದ್ರೆ ಪ್ರಾಪ್ತಿಯಾಗಿದೆ. ಕೆಇಎಂ ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಇಹಲೋಕ ವೇದನೆ ಮುಗಿಸಿದ್ದಾರೆ.
1973ರ ನವೆಂಬರ್ 27ರಂದು 27ರ ಹರೆಯದ ಯುವತಿ ಕೆಇಎಂ ಆಸ್ಪತ್ರೆಯ ಸ್ಟಾಫ್ ನರ್ಸ್ ಅರುಣಾ ಅವರ ಮೇಲೆ ಅದೇ ಆಸ್ಪತ್ರೆಯ ವಾರ್ಡ್ ಬಾಯ್ ಸೋಹನ್ ಲಾಲ್ ವಾಲ್ಮೀಕಿ ಅತ್ಯಾಚಾರ ಎಸಗಿದ್ದ.
ನಾಯಿಗಳನ್ನು ಕಟ್ಟಿಹಾಕುವಂಥ ಸರಪಳಿಯಿಂದ ಆಕೆಯಕುತ್ತಿಗೆ ಕಟ್ಟಿ ಅತ್ಯಾಚಾರವೆಸಗಿದ್ದ. ಅತ್ಯಾಚಾರದಿಂದ ಘಾಸಿಗೊಂಡ ಅರುಣಾಳ ಮಿದುಳಿನಲ್ಲಿ ರಕ್ತಸ್ರಾವವಾಗಿ ದೃಷ್ಟಿ ಕುಂಠಿತವಾಗಿದ್ದಲ್ಲದೆ, ಮಾತನಾಡುವ ಶಕ್ತಿ ಹಾಗೂ ಪರಿಸರದ ಬಗ್ಗೆ ಸಂವೇದನೆಯನ್ನೂ ಘಾಸಿಗೊಳಿಸಿತು. ಆಸ್ಪತ್ರೆಯಲ್ಲಿ ವೈದ್ಯರು ಮತ್ತು ದಾದಿಯರ ಸಹಾಯದಿಂದ ಸುಮಾರು 40 ಕ್ಕೂ ಅಧಿಕ ವರ್ಷ ಕೋಮಾ ಅವಸ್ಥೆಯಲ್ಲಿ ಕಾಲ ದೂಡಬೇಕಾಯಿತು.
World's oldest comatose patient Aruna Shanbaug dead
— IANS Tweets (@ians_india) May 18, 2015 ನಾಲ್ಕನೆಯ ನಂಬರಿನ ವಾರ್ಡ್' ನಲ್ಲಿದ್ದ ಅರುಣಾ ಅವರಿಗೆ ಮರಣ ಭಿಕ್ಷೆಯೂ ಸಿಕ್ಕಿರಲಿಲ್ಲ. ಇತ್ತ ಅತ್ಯಾಚಾರಿಗೆ 7 ವರ್ಷ ಶಿಕ್ಷೆಯಾಯಿತು. ಕೊನೆಗೆ 'ಏಡ್ಸ್ ಕಾಯಿಲೆ'ಯಿಂದ ಹತನಾದ. [ದಯಾಮರಣ ಕುರಿತು ಸಣ್ಣಕಥೆ]
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಹಳದೀಪುರದ ಅರುಣಾ ಜನಿಸಿದ್ದು ಜೂನ್, 1, 1948ರಲ್ಲಿ, ಹುಟ್ಟೂರಿನ ಶಾಲೆಯಲ್ಲೇ ಕಲಿತ ಅರುಣಾಗೆ ರೋಗಿಗಳಿಗೆ ಶುಶ್ರೂಷೆ ಮಾಡುವ ಉದ್ದೇಶದಿಂದ ಮುಂಬೈಗೆ ಬಂದು 'ಕೆ.ಇ.ಎಮ್ ಆಸ್ಪತ್ರೆ'ಯಲ್ಲಿ ನರ್ಸ್ ಕೆಲಸಕ್ಕೆ ಸೇರಿದ್ದರು. ವೈವಾಹಿಕ ಜೀವನಕ್ಕೆ ಪಾದಾರ್ಪಣೆ ಮಾಡುವ ಸಿದ್ಧತೆಯಲ್ಲಿದ್ದ ಅರುಣಾ ಮೇಲೆ ಅತ್ಯಾಚಾರದ ಮಾರಕವಾಗಿ ಪರಿಣಮಿಸಿತು.

ದಯಾ ಮರಣವೂ ಸಿಗಲಿಲ್ಲ
ಅರುಣಾ ಶಾನಭಾಗ್ ಅನುಭವಿಸುತ್ತಿರುವ ಮಾನಸಿಕ ವೇದನೆ ನೋಡಲಾರದೆ ಆಕೆ ಸ್ನೇಹಿತೆ ಪಿಂಕಿ ವಿನಾನಿ ಅವರು ದಯಾಮರಣ ಕೋರಿ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದ್ದರು.. ಆದರೆ, ನ್ಯಾಯಾಲಯದಿಂದ ದಯಾಮರಣಕ್ಕೆ ಅವಕಾಶ ಸಿಗಲಿಲ್ಲ. ಕೊನೆಗೂ ಅರುಣಾ ಶಾನಭಾಗ್ ಕ್ರೂರ ನರಕದ ಬದುಕಿಗೆ ಮುಕ್ತಿ ಸಾವಿನ ಮೂಲಕ ಸಿಕ್ಕಿದೆ.
|
ಕೆಇಎಂ ಆಸ್ಪತ್ರೆ ಸಹದ್ಯೋಗಿಗಳಿಗೆ ಒಂದು ನಮನ
ಅರುಣಾಳನ್ನು ನೋಡಿಕೊಂಡ ಕೆಇಎಂ ಆಸ್ಪತ್ರೆ ಸಹದ್ಯೋಗಿಗಳಿಗೆ ಒಂದು ನಮನ.
|
ಎಲ್ಲೆಡೆಯಿಂದ ಅರುಣಾಗಾಗಿ ಕಂಬನಿ ಧಾರೆ ಹರಿದಿದೆ.
ಮೈಕ್ರೋ ಬ್ಲಾಗಿಂಗ್ ತಾಣ ಟ್ವಿಟ್ಟರ್ ನಲ್ಲಿ ಅರುಣಾಗಾಗಿ ಕಂಬನಿ ಧಾರೆ ಹರಿದಿದೆ.
|
ಕೊನೆಗೂ ದೇವರು ದಯಾ ಮರಣ ಕರುಣಿಸಿದ
ಬದುಕಿದ್ದಾಗ ಆಕೆಗೆ ನ್ಯಾಯ ಸಿಗಲಿಲ್ಲ. ಕೊನೆಗೂ ದೇವರು ದಯಾ ಮರಣ ಕರುಣಿಸಿದ
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications