ಸುಜಯ್ ನಂತರ ಕಾಂಗ್ರೆಸ್ಸಿಗೆ 'ಕೈ' ಕೊಟ್ಟ ಶಾಸಕ ಕಾಳಿದಾಸ
ಮುಂಬೈ, ಮಾರ್ಚ್ 13: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ದೇಶದ ಇತರೆಡೆಯಂತೆ ಮಹಾರಾಷ್ಟ್ರದಲ್ಲೂ ಪಕ್ಷಾಂತರ ಪರ್ವ ಮುಂದುವರೆದಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿಯಿಂದಾಗಿ ಆಂತರಿಕ ಸಂಘರ್ಷ ಹೆಚ್ಚಾಗುತ್ತಿದೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದ ಶಾಸಕರು, ಮುಖಂಡರು, ಬಿಜೆಪಿಯತ್ತ ವಾಲುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ಸಿಗೆ ಮುಜುಗರ ತಂದಿತ್ತ ಸುಜಯ್ ಪಾಟೀಲ್
ಕಾಂಗ್ರೆಸ್ ವಿಪಕ್ಷ ನಾಯಕರ ಮಗ ಸುಜಯ್ ಅವರು ಬಿಜೆಪಿ ಸೇರ್ಪಡೆಯಾದ ಬೆನ್ನಲ್ಲೇ 7 ಬಾರಿ ಶಾಸಕರಾಗಿರುವ ಕಾಳಿದಾಸ್ ಕೊಲಂಬ್ಕರ್ ಅವರು ಸಿಎಂ ದೇವೇಂದ್ರ ಫಡ್ನವೀಸ್ ಗುಣಗಾನ ಮಾಡಿದ್ದಾರೆ. ಕಾಂಗ್ರೆಸ್ ಸೇರುವುದಕ್ಕೂ ಮುನ್ನ ಕಾಳಿದಾಸ್ ಅವರು ಶಿವಸೇನಾ ಕಾರ್ಯಕರ್ತರಾಗಿದ್ದರು ಎಂಬುದು ವಿಶೇಷ.
Congress MLA K Kolambkar: I've worked for Congress for 10 yrs.Congress didn't do any work in my area. After D.Fadnavis took over as CM, I told him about work needed to be done in my area& he completed those works. Then, whose photo should I put? Those who work or those who don't? pic.twitter.com/GH6Dovu5Gu
— ANI (@ANI) March 13, 2019
ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಕಾಳಿದಾಸ ಕೊಲಂಬಕರ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಮುಂಬೈನ ವಡಾಲಾ ಕ್ಷೇತ್ರದಿಂದ ಆಯ್ಕೆಯಾಗಿರುವ ಕಾಳಿದಾಸ ಅವರು ದಾದರ್ ನಲ್ಲಿರುವ ತಮ್ಮ ಕಚೇರಿಯಲ್ಲಿ ಸಿಎಂ ಫಡ್ನವೀಸ್ ಹೊಗಳುವ ಬ್ಯಾನರ್ ಹಾಕಿಕೊಂಡಿದ್ದಾರೆ. ವಿಶೇಷವೆಂದರೆ ಕಾಂಗ್ರೆಸ್ಸಿನ ತಿಲಕ್ ಭವನ್ ಕಚೇರಿಯ ಎದುರೇ ಕಾಳಿದಾಸ್ ಅವರ ಕಚೇರಿ ಇದೆ.
7 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಕೊಲಂಬಕರ್ ಅವರು ಕ್ಷೇತ್ರದ ಅಭಿವೃದ್ಧಿಗಾಗಿ ಬಿಜೆಪಿ ಸಿಎಂ ದೇವೇಂದ್ರ ಫಡ್ನವೀಸ್ ಅವರ ಜತೆ ಸಾಗುವುದು ಅನಿವಾರ್ಯ, ನಾನು 10 ವರ್ಷ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿದಿದ್ದೇನೆ. ಆದರೆ, ನನ್ನ ಕ್ಷೇತ್ರದ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಅಡ್ಡಪಡಿಸಿದರು. ನಾನು ಅಭಿವೃದ್ಧಿಗೆ ನೆರವಾಗುವವರ ಜತೆ ಸಾಗಲು ಬಯಸಿದ್ದೇನೆ ಎಂದು ಎಎನ್ ಐ ಜತೆ ಮಾತನಾಡುತ್ತಾ ವಡಾಲ- ನಾಯ್ ಗಾಂವ್ ಕ್ಷೇತ್ರದ ಶಾಸಕ ಕಾಳಿದಾಸ್ ಹೇಳಿದರು.
'ಮೋದಿ ನಿವೃತ್ತಿ ಘೋಷಿಸಿದರೆ, ಆ ಕ್ಷಣವೇ ರಾಜಕೀಯ ತೊರೆಯುವೆ'
ಮಹಾರಾಷ್ಟ್ರ ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಹಿರಿಯ ಮುಖಂಡ ರಾಧಾಕೃಷ್ಣ ವಿಖೆ ಪಾಟೀಲ್ ಅವರ ಪುತ್ರ ಸುಜಯ್ ವಿಖೆ ಪಾಟೀಲ್ ಬಿಜೆಪಿ ಸೇರಿದ್ದರು. ಮಹಾರಾಷ್ಟ್ರ ಸಚಿವ. ಬಿಜೆಪಿ ಮುಖಂಡ ಗಿರೀಶ್ ಮಹಾಜನ್ ಅವರು, ಪಕ್ಷಾಂತರ ಪರ್ವದ ಬಗ್ಗೆ ಪ್ರತಿಕ್ರಿಯಿಸಿ, ಇದು ಇನ್ನು ಆರಂಭ, ಇನ್ನು ಅನೇಕ ಮುಖಂಡರು ಬಿಜೆಪಿಯತ್ತ ಬರಲಿದ್ದಾರೆ ಎಂದಿದ್ದಾರೆ.