ಏರ್ಇಂಡಿಯಾ ಗಗನಸಖಿಗೆ ಹಿರಿಯ ಅಧಿಕಾರಿಯಿಂದ ಕಪಾಳಮೋಕ್ಷ
ಮುಂಬೈ, ಮಾರ್ಚ್ 23: ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಸ್ಯಹಾರಿ ಪ್ರಯಾಣಿಕರೊಬ್ಬರಿಗೆ ಪ್ರಮಾದದಿಂದ ಮಾಂಸಾಹಾರ ಖಾದ್ಯ ಸರ್ವ್ ಮಾಡಿದ ಗಗನಸಖಿಗೆ ಆಕೆಯ ಹಿರಿಯ ಅಧಿಕಾರಿ ಕಪಾಳಕ್ಕೆ ಭಾರಿಸಿದ್ದಾರೆ. ಮಾರ್ಚ್ 17 ರಂದು ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.
ನವ ದೆಹಲಿಯಿಂದ - ಫ್ರಾಂಕ್ಫರ್ಟ್ಗೆ ಹೊರಟಿದ್ದ AI 121 ವಿಮಾನದಲ್ಲಿ ಈ ರೀತಿಯ ಘಟನೆ ನಡೆದಿದೆ. ಅಲ್ಲಿನ ಒಬ್ಬ ಗಗನಸಖಿ ಬ್ಯುಸಿನೆಸ್ ವಿಭಾಗದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರಿಗೆ ಪ್ರಮಾದವಶಾತ್ ಸಸ್ಯಾಹಾರದ ಬದಲಿಗೆ ಮಾಂಸಾಹಾರ ನೀಡಿದ್ದರು, ಆದರೆ ಕೂಡಲೆ ಎಚ್ಚೆತ್ತುಕೊಂಡು ಊಟವನ್ನು ಬದಲಾಯಿಸಿಕೊಟ್ಟು ಕ್ಷಮಾಪಣೆ ಕೋರಿದ್ದರು. ಈ ಬಗ್ಗೆ ಆ ಪ್ರಯಾಣಿಕರೂ ಕೂಡ ಯಾವುದೇ ದೂರು ನೀಡಿರಲಿಲ್ಲ.
ಆದರೆ ಘಟನೆ ಬಗ್ಗೆ ತಿಳಿದ ಹಿರಿಯ ಅಧಿಕಾರಿ ವಿಮಾನದ ಅತಿಥೇಯ ಸಿಬ್ಬಂದಿಗಳ ಹಿರಿಯ ಅಧಿಕಾರಿ ಗಗನಸಖಿಯನ್ನು ಕರೆದು ವಾಗ್ವಾದ ನಡೆಸಿ ಕಪಾಳಕ್ಕೆ ಹೊಡೆದಿದ್ದರು. ಆಗ ಪ್ರತಿಭಟಿಸದಿದ್ದ ಗಗನಸಖಿ ಆ ನಂತರ ಏರ್ಲೈನ್ಸ್ ನೌಕರರ ರಕ್ಷಣೆ ವಿಭಾಗದಲ್ಲಿ ದೂರು ನೀಡಿದ್ದರು.

ಏರ್ ಇಂಡಿಯಾ ವಿಮಾನಯಾನದ ಆಡಳಿತವು ಘಟನೆ ಬಗ್ಗೆ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲಿ ಆ ಹಿರಿಯ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವಿಮಾನಯಾನ ಸಂಸ್ಥೆಯ ಅಧಿಕಾರಿಗಳು ಹೇಳಿದ್ದಾರೆ.
ಈ ಮುಂಚೆ ಸಹ ಇಂತಹುದೇ ಒಂದು ಘಟನೆ ಮುಂಬೈನಿಂದ ವರದಿಯಾಗಿತ್ತು. ಆದರೆ ಆ ಪ್ರಕರಣದಲ್ಲಿ ಸಿಬ್ಬಂದಿಯೋರ್ವ ಪ್ರಯಾಣಿಕನ ಮೇಲೆ ತೀವ್ರವಾಗಿ ಹಲ್ಲೆ ಮಾಡಿದ್ದ. ಈ ಘಟನೆ ಸದನದಲ್ಲಿಯೂ ಪ್ರಸ್ತಾಪವಾಯಿತು.
ಇದಕ್ಕೆ ಮುಂಚೆ ಶಿವಸೇನೆ ಪಕ್ಷದ ಸಂಸದ ರವೀಂದ್ರ ಗಾಯಕ್ವಾಡ್ ಏರ್ ಇಂಡಿಯಾದ ಸಿಬ್ಬಂದಿಗೆ ಚಪ್ಪಲಿಯಿಂದ ಹೊಡೆದದ್ದು ದೇಶಾದ್ಯಂತ ಚರ್ಚೆಯಾಗಿತ್ತು. ರವೀಂದ್ರ ಗಾಯಕ್ವಾಡ್ ವಿರುದ್ಧ ಏರ್ ಇಂಡಿಯಾ ಸೇರಿದಂತೆ ಹಲವು ವಿಮಾನಯಾನ ಸಂಸ್ಥೆಗಳು ಪ್ರತಿಭಟನೆ ಮಾಡಿದವು. ಅವರಿಗೆ ತಮ್ಮ ವಿಮಾನದಲ್ಲಿ ಪ್ರಯಾಣಿಸಲು ಅವಕಾಶ ನಿರಾಕರಿಸಿದ್ದವು.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications