ಕೊವಿಡ್-19 ಭೀತಿ ನಡುವೆ ಶಾಲಾಗಳು ಶುರುವಾಗುವುದು ಯಾವಾಗ?
ಮುಂಬೈ, ಜೂನ್.15: ನೊವೆಲ್ ಕೊರೊನಾ ವೈರಸ್ ಭೀತಿ ನಡುವೆಯೂ ಮಹಾರಾಷ್ಟ್ರದಲ್ಲಿ ಶೈಕ್ಷಣಿಕ ವರ್ಷ ಆರಂಭಿಸಲು ರಾಜ್ಯ ಸರ್ಕಾರವು ತೀರ್ಮಾನಿಸಿದೆ. ಪ್ರಾಯೋಗಿಕ ಯೋಜನೆ ಆಧಾರದ ಮೇಲೆ ಡಿಜಿಟಲ್ ಮತ್ತು ಆನ್ ಲೈನ್ ಕ್ಲಾಸ್ ಗಳನ್ನು ಆರಂಭಿಸುವ ಬಗ್ಗೆ ಸಿಎಂ ಉದ್ಧವ್ ಠಾಕ್ರೆ ತಿಳಿಸಿದ್ದಾರೆ.
Recommended Video
ಸೋಮವಾರ ರಾಜ್ಯ ಶಿಕ್ಷಣ ಸಚಿವರ ಜೊತೆಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಡಿಯೋ ಸಂವಾದ ನಡೆಸಿದರು. ಈ ವೇಳೆ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಕೊರೊನಾ ವೈರಸ್ ಮುಕ್ತವಾಗಿರುವ ಪ್ರದೇಶಗಳಲ್ಲಿ ಶಾಲೆಗಳನ್ನು ಪುನಾರಂಭಿಸಲು ಸರ್ಕಾರವು ತೀರ್ಮಾನಿಸಿದೆ.
ಕಳೆದ ಒಂದು ತಿಂಗಳಿನಿಂದ ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳಲ್ಲಿ ಶಾಲೆಗಳು ಎಂದಿನಂತೆ ಆರಂಭವಾಗುತ್ತದೆ. ಉಳಿದಂತೆ ಬೇರೆ ಜಿಲ್ಲೆಗಳಲ್ಲಿ ಆನ್ ಲೈನ್ ಮೂಲಕ ತರಗತಿಗಳನ್ನು ಆರಂಭಿಸಲು ಸರ್ಕಾರವು ನಿರ್ಧರಿಸಿದೆ.

ವಿದ್ಯಾರ್ಥಿಗಳಿಗೆ ಎಷ್ಟು ಗಂಟೆಗಳ ಕಾಲ ತರಬೇತಿ
ಸರ್ಕಾರದ ನಿಯಮದ ಪ್ರಕಾರ ನಿರ್ದಿಷ್ಟ ಅವಧಿವರೆಗೂ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುವುದಕ್ಕೆ ತೀರ್ಮಾನಿಸಲಾಗಿದೆ. 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ದಿನದಲ್ಲಿ ಒಂದು ಗಂಟೆಗಳ ಕಾಲ ತರಗತಿಯನ್ನು ನಡೆಸುವುದು. 6 ರಿಂದ 8ನೇ ತರಗತಿ ವಿದ್ಯಾರ್ಥಿಗಳಿಗೆ ದಿನದಲ್ಲಿ ಎರಡು ಗಂಟೆ ತರಬೇತಿ ನೀಡುವುದು. 9 ರಿಂದ 12ನೇ ತರಗತಿ ವಿದ್ಯಾರ್ಥಿಗಳು ದಿನದಲ್ಲಿ ಗರಿಷ್ಠ 3 ಗಂಟೆಗಳ ಕಾಲ ಆನ್ ಲೈನ್ ಕ್ಲಾಸ್ ಗೆ ಹಾಜರಾಗುವಂತೆ ಸೂಚಿಸಲಾಗಿದೆ.

2ನೇ ತರಗತಿವರೆಗಿನ ವಿದ್ಯಾರ್ಥಿಗಳಿಗಿಲ್ಲ ತರಬೇತಿ
ಪ್ರಾಥಮಿಕ ಪೂರ್ವ ತರಗತಿಗಳಿಂದ 2ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಬೇತಿ ನೀಡುವುದನ್ನು ಸರ್ಕಾರವೇ ನಿಷೇಧಿಸಿದೆ. ಬದಲಿಗೆ ರೇಡಿಯೋ ಮತ್ತು ಟಿವಿಗಳಲ್ಲಿ ಮಕ್ಕಳಿಗೆ ತರಬೇತಿಯನ್ನು ನೀಡುವಂತೆ ಸರ್ಕಾರವೇ ಸೂಚನೆ ನೀಡಿದೆ.

ಮಹಾರಾಷ್ಟ್ರದಲ್ಲಿ ಶಾಲಾ-ಕಾಲೇಜು ಪುನಾರಂಭ
ಮಹಾರಾಷ್ಟ್ರದಲ್ಲಿ ಜುಲೈ ತಿಂಗಳಿನಿಂದ ಶಾಲಾ-ಕಾಲೇಜು ಪುನಾರಂಭಿಸಲು ಸರ್ಕಾರವು ತೀರ್ಮಾನಿಸಿದೆ. ಆರಂಭಿಕ ಹಂತದಲ್ಲಿ ಕಳೆದ ಒಂದು ತಿಂಗಳಿನಿಂದ ಒಂದೇ ಒಂದು ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗದ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳನ್ನು ತೆರೆಯುವುದಕ್ಕಷ್ಟೇ ಅನುಮತಿ ನೀಡಲಾಗಿದೆ.

ಒಂದೊಂದು ತಿಂಗಳು ಒಂದೊಂದು ತರಗತಿ ಶುರು
ಮೂರ್ನಾಲ್ಕು ಹಂತಗಳಲ್ಲಿ ಶಾಲಾ-ಕಾಲೇಜುಗಳನ್ನು ಪುನಾರಂಭಿಸಲು ಸರ್ಕಾರವು ತೀರ್ಮಾನಿಸಿದೆ. ಮೊದಲ ಹಂತದಲ್ಲಿ ಜುಲೈನಲ್ಲಿ 9 ರಿಂದ 12ರವರೆಗೆ ತಗರತಿಗಳನ್ನು ಆರಂಭಿಸಲಾಗುತ್ತದೆ. ಆಗಸ್ಟ್ ನಲ್ಲಿ 6 ರಿಂದ 8ನೇ ತರಗತಿವರೆಗೂ ಶಾಲೆಗಳನ್ನು ತೆರೆಯಲಾಗುತ್ತದೆ. ಸಪ್ಟೆಂಬರ್ ನಲ್ಲಿ 1 ರಿಂದ 5ನೇ ತರಗತಿವರೆಗೂ ಶಾಲೆಗಳನ್ನು ಪುನಾರಂಭಿಸಲು ಸರ್ಕಾರವು ನಿರ್ಧರಿಸಿದೆ. ತರಗತಿಗಳು ಆರಂಭಿಸುವವರೆಗೂ ಆನ್ ಲೈನ್ ಕ್ಲಾಸ್ ಗಳನ್ನು ನಡೆಸುವುದಕ್ಕೆ ಸರ್ಕಾರವು ಸೂಚನೆ ನೀಡಿದೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ












Click it and Unblock the Notifications