ಕಾಂಗ್ರೆಸ್ ಮುಖಂಡಗೆ ರಿಲಯನ್ಸ್ ನಿಂದ 1 ಸಾವಿರ ಕೋಟಿ ಮಾನನಷ್ಟ ನೋಟಿಸ್
ಮುಂಬೈ, ಏಪ್ರಿಲ್ 4: ಅನಿಲ್ ಅಂಬಾನಿ ನೇತೃತ್ವದ ರಿಲಯನ್ಸ್ ನಿಂದ ಬುಧವಾರ ಮುಂಬೈ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ನಿರುಪಮ್ ಗೆ ಮಾನನಷ್ಟ ಮೊಕದ್ದಮೆಯ ನೋಟಿಸ್ ಕಳುಹಿಸಿದ್ದಾರೆ. ಅದು ಎಷ್ಟು ಮೊತ್ತಕ್ಕೆ ಗೊತ್ತೆ? ಬರೋಬ್ಬರಿ 1 ಸಾವಿರ ಕೋಟಿ ರುಪಾಯಿಗೆ. ಕಂಪೆನಿ ವಿರುದ್ಧ ಸುಳ್ಳು ಹಾಗೂ ಆಧಾರರಹಿತ ಆರೋಪ ಮಾಡಿದ್ದಾರೆ ಎಂಬ ಕಾರಣಕ್ಕೆ ಈ ನೋಟಿಸ್ ಕಳುಹಿಸಲಾಗಿದೆ.
ಇದರ ಜತೆಗೆ ಕಂಪೆನಿಯು ಸಂಜಯ್ ವಿರುದ್ಧ ನಿಂದನೆ ಅರ್ಜಿಯನ್ನು ಸಹ ಬಾಂಬೆ ಹೈ ಕೋರ್ಟ್ ನಲ್ಲಿ ದಾಖಲಿಸಲಿದೆ. ಸಾಲದ ಸುಳಿಯಲ್ಲಿರುವ ರಿಲಯನ್ಸ್ ಇನ್ ಫ್ರಾಸ್ಟ್ರಕ್ಚರ್ ನ ಅದಾನಿ ಟ್ರಾನ್ಸ್ ಮಿಷನ್ ಲಿಮಿಟೆಡ್ ಟೇಕ್ ಓವರ್ ಮಾಡುತ್ತಿರುವುದು ಪ್ರಧಾನಮಂತ್ರಿ ಕಾರ್ಯಾಲಯದ ಸೂಚನೆ ಮೇಲೆ. ಅನಿಲ್ ಅಂಬಾನಿಗೆ ಸಹಾಯ ಮಾಡಿಕೊಡುವಂಥ ಡೀಲ್ ಇದು ಎಂದು ಸಂಜಯ್ ಮಂಗಳವಾರ ಆರೋಪಿಸಿದ್ದರು.

"ರಿಲಯನ್ಸ್ ಇನ್ ಫ್ರಾಸ್ಟ್ರಕ್ಚರ್ ಹಾಗೂ ಅದಾನಿ ಮಧ್ಯದ ವ್ಯವಹಾರಕ್ಕೆ ಸಂಬಂಧಿಸಿದಂತೆ ಹಲವು ಸುಳ್ಳು ಹಾಗೂ ಆಧಾರರಹಿತ ಮತ್ತು ಮಾನನಷ್ಟ ಆಗುವಂಥ ಹೇಳಿಕೆಗಳನ್ನು ನಿರುಪಮ್ ನೀಡಿದ್ದಾರೆ. ರಫೇಲ್ ವಿಮಾನ ಖರೀದಿ ವ್ಯವಹಾರದಲ್ಲು ಅಂಥದ್ದೇ ಹೇಳಿಕೆ ನೀಡಿದ್ದಾರೆ" ಎಂದು ಕಂಪೆನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಸಂಜಯ್ ನಿರುಪಮ್ ಮಾಡಿದ ಆರೋಪಗಳನ್ನು ನೋಟಿಸ್ ಪಡೆದ ಎಪ್ಪತ್ತೆರಡು ಗಂಟೆಯೊಳಗೆ ವಾಪಸ್ ಪಡೆಯಬೇಕು. ಮತ್ತು ಕ್ಷಮಾಪಣೆ ಯಾಚಿಸಬೇಕು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications