ಹಿಂದೂಸ್ತಾನಿ ಸಂಗೀತ ಕ್ಷೇತ್ರದ ಮಿಂಚು ಅನ್ನಪೂರ್ಣ ದೇವಿ ಇನ್ನಿಲ್ಲ
ನವದೆಹಲಿ, ಅಕ್ಟೋಬರ್ 13: ಹಿಂದುಸ್ತಾನಿ ಕ್ಲಾಸಿಕಲ್ ಸಂಗೀತಗಾರ್ತಿ ಅನ್ನಪೂರ್ಣ ದೇವಿ(91) ಅವರು ಮುಂಬೈಯ ಬ್ರೆಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಶನಿವಾರ ಬೆಳಗ್ಗಿನ ಜಾವ ಮೃತರಾದರು.
ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಮುಂಬೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗಿನ ಜಾವ ಸುಮಾರು 4 ಗಂಟೆಯ ಸಮಯದಲ್ಲಿ ಅವರು ಮೃತರಾದರು ಎದು ವೈದ್ಯರು ಘೋಷಿಸಿದರು.
ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾಗಿದ್ದ ಅನ್ನಪೂರ್ಣ ಅವರು ಸಿತಾರ್ ಮಾಂತ್ರಿಕ ದಿ.ರವಿಶಂಕರ್ ಅವರ ಪತ್ನಿಯೂ ಆಗಿದ್ದರು.
ಮಧ್ಯಪ್ರದೇಶದ ಮೈಹಾರ್ ನಗರದಲ್ಲಿ ಉಸ್ತಾದ್ ಬಾಬಾ ಅಲ್ಲಾವುದ್ದಿನ್ ಖಾನ್ ಮತ್ತು ಮದೀನಾ ಬೇಗಂ ಅವರ ಪುತ್ರಿಯಾಗಿ 1927, ಏಪ್ರಿಲ್ 23 ರಂದು ಜನಿಸಿದರು. ಪ್ರಖ್ಯಾತ ಸುಬ್ರಹಾರ್(ಒಂದು ಬಗೆಯ ಸಿತಾರ್) ವಾದಕರಾಗಿದ್ದ ಅವರು ಕೊಳಲು ಮಾಂತ್ರಿಕ ಹರಿಪ್ರಸಾದ್ ಚೌರಾಸಿಯಾ ಅವರಂಥ ದಿಗ್ಗಜರಿಗೆ ಗುರುವೂ ಹೌದು.

ಮೈಹಾರ್ ಗರಾನಾವನ್ನು ಸ್ಥಾಪಿಸಿದ ಅನ್ನಪೂರ್ಣ ದೇವಿ ಅವರು ಹಿಂದೂಸ್ತಾನಿ ಸಂಗೀತದ ಹಲವಾರು ಸಾಧ್ಯತೆಗಳನ್ನು ಪರಿಚಯಿಸಿದ ಕೀರ್ತಿಯನ್ನೂ ಹೊಂದಿದ್ದರು. ಅವರ ನಿಧನಕ್ಕೆ ಹಿಂದೂಸ್ತಾನಿ ಸಂಗೀತ ಕ್ಷೇತ್ರ ಮಾತ್ರವಲ್ಲದೆ, ಇಡೀ ದೇಶವೂ ಕಂಬನಿ ಮಿಡಿದಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications