ಆ ಹೀನ ಕೃತ್ಯಕ್ಕೆ ಗಲ್ಲೇ ಸರಿ: ಪೋಕ್ಸೋ ತಿದ್ದುಪಡಿಗೆ ಅನುಷ್ಕಾ ಬೆಂಬಲ
ಮುಂಬೈ, ಏಪ್ರಿಲ್ 24: "ಪೋಕ್ಸೋ ಕಾಯಿದೆಯಲ್ಲಿ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರದ ನಡೆಗೆ ನನ್ನ 1000 ಪ್ರತಿಶತ ಬೆಂಬಲವಿದೆ" ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಹೇಳಿದ್ದಾರೆ.
ಕೇಂದ್ರ ಸರ್ಕಾರ ಏ.21 ರಂದು ಪೋಕ್ಸೋ(Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತರುವ ಮೂಲಕ 12 ವರ್ಷ ಅಥವಾ ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲು ಶಿಕ್ಷೆ ನೀಡುವ ನಿರ್ಧಾರ ತೆಗೆದುಕೊಂಡಿತ್ತು.
ಈ ಕುರಿತು ಮುಂಬೈಯಲ್ಲಿ ಪ್ರತಿಕ್ರಿಯೆ ನೀಡಿದ ಕ್ರಿಕೆಟಿಗೆ ವಿರಾಟ್ ಕೋಹ್ಲಿ ಪತ್ನಿ ಅನುಷ್ಕಾ, "ಅತ್ಯಾಚಾರದಂಥ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಅತ್ಯಂತ ಉಗ್ರ ಶಿಕ್ಷೆ ವಿಧಿಸಬೇಕು. ನಾನು ಎಂದಿಗೂ ಅದಕ್ಕೆ ಬೆಂಬಲ ನೀಡುತ್ತೇನೆ. ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಕೆಟ್ಟ ಕೃತ್ಯವೆಂದರೆ ಅದು ಮಕ್ಕಳ ಮೇಲಿನ ಅತ್ಯಾಚಾರ" ಎಂದು ಅವರು ಹೇಳಿದ್ದಾರೆ.

ಕತುವಾದಲ್ಲಿ ಜನರಿ ತಿಂಗಳಿನಲ್ಲಿ ನಡೆದ ಎಂತು ವರ್ಷ ವಯಸ್ಸಿನ ಮಗುವಿನ ಮೇಲಿನ ಅತ್ಯಾಚಾರ 29 ವರ್ಷದ ಶರ್ಮಾ ಕಟು ಶಬ್ದಗಳಿಂದ ವಿರೋಧಿಸಿದರು.
ಜಮ್ಮು ಕಾಶ್ಮಿರದ ಕತುವಾದಲ್ಲಿ ಎಂಟು ವರ್ಷದ ಬಾಲಕಿಯೊಬ್ಬಳ ಮೇಲೆ ನಡೆದ ಅತ್ಯಾಚಾರ ಮತ್ತ ಕೊಲೆ ಪ್ರಕರಣ ದೇಶದಾದ್ಯಂತ ಕಿಡಿಹೊತ್ತಿಸಿತ್ತು. ಪುಟ್ಟ ಬಾಲಕಿಯನ್ನು ಅಪಹರಿಸಿ, ಮತ್ತು ಬರುವ ಔಷಧ ನೀಡಿ ಹಲವು ದಿನಗಳ ಕಾಲ ಅತ್ಯಾಚಾರ ಎಸಗಲಾಗಿತ್ತು. ನಂತರ ಆಕೆಯನ್ನು ಕೊಲೆಗೈಯ್ಯಲಾಗಿತ್ತು. ಈ ಹೀನಾತಿಹೀನ ಕೃತ್ಯದೊಂದಿಗೆ ದೇಶದಲ್ಲಿ ದಿನೇ ದಿನೇ ವರದಿಯಾಗುತ್ತಿರುವ ಅಪ್ರಾಪ್ತೆಯರ ಮೇಲಿನ ಅತ್ಯಾಚಾರ ಪ್ರಕರಣವನ್ನು ನಿಯಂತ್ರಿಸುವ ಸಲುವಾಗಿ ಪೋಕ್ಸೊ ಕಾಯ್ದೆಯಲ್ಲಿ ತಿದ್ದುಪಡಿ ತಂದು, ಕಠಿಣ ಶಿಕ್ಷೆ ಜಾರಿಗೊಳಿಸುವ ನಿರ್ಧಾರಕ್ಕೆ ಕೇಮದ್ರ ಸರ್ಕಾರ ಬಂದಿದೆ.
-
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ












Click it and Unblock the Notifications