Fact Check: 10 ದಿನಗಳ ಕಾಲ ಭಾರತೀಯ ಸೈನ್ಯದ ವಶಕ್ಕೆ ಮುಂಬೈ ನಗರ?
ಮುಂಬೈ, ಮೇ 8: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮಾಡುತ್ತಿದೆ. ದೇಶಾದ್ಯಂತ 58 ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ತಗುಲಿದೆ. ಮಹಾರಾಷ್ಟ್ರ ಒಂದರಲ್ಲೇ 17 ಸಾವಿರ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರ ದೇಶದ ಕೊರೊನಾ ಹಾಟ್ಸ್ಪಾಟ್ ರಾಜ್ಯವಾಗಿದೆ. ಅದರಲ್ಲೂ ಮುಂಬೈ ನಗರದಲ್ಲಿ ಕೊರೊನಾ ರುದ್ರತಾಂಡವ ಮಾಡುತ್ತಿದೆ. ಈವರೆಗೂ ಮುಂಬೈನಲ್ಲಿ 11 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗಿದೆ.
ಮುಂಬೈ ನಗರವನ್ನು ನಿಯಂತ್ರಣಕ್ಕೆ ತರಲು ಮಹರಾಷ್ಟ್ರ ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಿದೆ. ಇದೀಗ, ಮುಂಬೈ ನಗರವನ್ನು ಹತ್ತು ದಿನಗಳ ಕಾಲ ಭಾರತೀಯ ಸೈನ್ಯದ ವಶಕ್ಕೆ ವಹಿಸಲಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

ಶನಿವಾರದಿಂದ ಹತ್ತು ದಿನಗಳ ಕಾಲ ಮುಂಬೈ ನಗರವನ್ನು ಮಿಲಿಟರಿ ವಶಕ್ಕೆ ತೆಗೆದುಕೊಳ್ಳುತ್ತಿದೆ. ಹಾಲು ಮತ್ತು ಮೆಡಿಕಲ್ ಬಿಟ್ಟು ಬೇರೆನೂ ಸಿಗುವುದಿಲ್ಲ. ಅಗತ್ಯ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಿ ಎಂಬ ಸಂದೇಶ ವಾಟ್ಸಾಪ್ ಹಾಗು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದು ಸುಳ್ಳು ಸುದ್ದಿ ಎಂದು ಪಿಐಬಿ ಪ್ಯಾಕ್ಟ್ ಚೆಕ್ ವಿಭಾಗ ಹೇಳಿದೆ. ಮುಂಬೈ ನಗರದಲ್ಲಿ ಸೈನ್ಯ ಪ್ರವೇಶವಾಗುತ್ತಿಲ್ಲ. ಇಂತಹ ಸುದ್ದಿಗಳನ್ನು ಸಾರ್ವಜನಿಕರು ನಂಬಬೇಡಿ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಇನ್ನು ಮಹಾರಾಷ್ಟ್ರದಲ್ಲಿ ಮೇ ಅಂತ್ಯದವರೆಗೂ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾಹಿತಿ ನೀಡಿದ್ದಾರೆ. ವಿಶೇಷವಾಗಿ ಮುಂಬೈ ಮತ್ತು ಪುಣೆ ನಗರಗಳಲ್ಲಿ ಲಾಕ್ಡೌನ್ ಮುಂದುವರಿಯುವುದು ಅಗತ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications