Fact Check: 10 ದಿನಗಳ ಕಾಲ ಭಾರತೀಯ ಸೈನ್ಯದ ವಶಕ್ಕೆ ಮುಂಬೈ ನಗರ?
ಮುಂಬೈ, ಮೇ 8: ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮಾಡುತ್ತಿದೆ. ದೇಶಾದ್ಯಂತ 58 ಸಾವಿರಕ್ಕೂ ಅಧಿಕ ಜನರಿಗೆ ಕೊರೊನಾ ಸೋಂಕು ತಗುಲಿದೆ. ಮಹಾರಾಷ್ಟ್ರ ಒಂದರಲ್ಲೇ 17 ಸಾವಿರ ಸೋಂಕು ಪತ್ತೆಯಾಗಿದೆ.
ಮಹಾರಾಷ್ಟ್ರ ದೇಶದ ಕೊರೊನಾ ಹಾಟ್ಸ್ಪಾಟ್ ರಾಜ್ಯವಾಗಿದೆ. ಅದರಲ್ಲೂ ಮುಂಬೈ ನಗರದಲ್ಲಿ ಕೊರೊನಾ ರುದ್ರತಾಂಡವ ಮಾಡುತ್ತಿದೆ. ಈವರೆಗೂ ಮುಂಬೈನಲ್ಲಿ 11 ಸಾವಿರಕ್ಕೂ ಹೆಚ್ಚು ಪ್ರಕರಣ ವರದಿಯಾಗಿದೆ.
ಮುಂಬೈ ನಗರವನ್ನು ನಿಯಂತ್ರಣಕ್ಕೆ ತರಲು ಮಹರಾಷ್ಟ್ರ ಸರ್ಕಾರಕ್ಕೆ ಬಹುದೊಡ್ಡ ಸವಾಲಾಗಿದೆ. ಇದೀಗ, ಮುಂಬೈ ನಗರವನ್ನು ಹತ್ತು ದಿನಗಳ ಕಾಲ ಭಾರತೀಯ ಸೈನ್ಯದ ವಶಕ್ಕೆ ವಹಿಸಲಾಗುತ್ತಿದೆ ಎಂಬ ಸುದ್ದಿಗಳು ಕೇಳಿ ಬರುತ್ತಿದೆ.

ಶನಿವಾರದಿಂದ ಹತ್ತು ದಿನಗಳ ಕಾಲ ಮುಂಬೈ ನಗರವನ್ನು ಮಿಲಿಟರಿ ವಶಕ್ಕೆ ತೆಗೆದುಕೊಳ್ಳುತ್ತಿದೆ. ಹಾಲು ಮತ್ತು ಮೆಡಿಕಲ್ ಬಿಟ್ಟು ಬೇರೆನೂ ಸಿಗುವುದಿಲ್ಲ. ಅಗತ್ಯ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಿ ಎಂಬ ಸಂದೇಶ ವಾಟ್ಸಾಪ್ ಹಾಗು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಇದು ಸುಳ್ಳು ಸುದ್ದಿ ಎಂದು ಪಿಐಬಿ ಪ್ಯಾಕ್ಟ್ ಚೆಕ್ ವಿಭಾಗ ಹೇಳಿದೆ. ಮುಂಬೈ ನಗರದಲ್ಲಿ ಸೈನ್ಯ ಪ್ರವೇಶವಾಗುತ್ತಿಲ್ಲ. ಇಂತಹ ಸುದ್ದಿಗಳನ್ನು ಸಾರ್ವಜನಿಕರು ನಂಬಬೇಡಿ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ಇನ್ನು ಮಹಾರಾಷ್ಟ್ರದಲ್ಲಿ ಮೇ ಅಂತ್ಯದವರೆಗೂ ಲಾಕ್ಡೌನ್ ವಿಸ್ತರಿಸುವ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಮಾಹಿತಿ ನೀಡಿದ್ದಾರೆ. ವಿಶೇಷವಾಗಿ ಮುಂಬೈ ಮತ್ತು ಪುಣೆ ನಗರಗಳಲ್ಲಿ ಲಾಕ್ಡೌನ್ ಮುಂದುವರಿಯುವುದು ಅಗತ್ಯ ಎಂದು ಅಭಿಪ್ರಾಯ ಪಟ್ಟಿದ್ದಾರೆ.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications