ಟಿಆರ್ಪಿ ಹಗರಣ; ಅರ್ನಬ್ ಗೋಸ್ವಾಮಿಯಿಂದ ಲಕ್ಷ ಲಕ್ಷ ಲಂಚ?
ಮುಂಬೈ, ಡಿಸೆಂಬರ್ 29: ನಕಲಿ ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಕಳೆದ ವಾರ ಬಂಧಿತರಾಗಿದ್ದ ಬ್ರಾಡ್ ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್ (ಬಾರ್ಕ್) ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಹಲವು ಮಾಹಿತಿಗಳನ್ನು ಪೊಲೀಸರಿಗೆ ನೀಡಿದ್ದಾರೆ. ರಿಪಬ್ಲಿಕ್ ಟಿ.ವಿ ಮಾಲೀಕ ಹಾಗೂ ಸಂಪಾದಕ ಅರ್ನಬ್ ಗೋಸ್ವಾಮಿ ತಮ್ಮ ಚಾನೆಲ್ ಟಿಆರ್ಪಿ ತಿರುಚಲು ಲಕ್ಷಾಂತರ ರೂಪಾಯಿ ಲಂಚ ನೀಡಿದ್ದರು ಎಂದು ತಿಳಿಸಿದ್ದಾರೆ.
ಸೋಮವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಮುಂಬೈ ಅಪರಾಧ ವಿಭಾಗದ ಪೊಲೀಸರು ವರದಿ ಸಲ್ಲಿಸಿದ್ದು, ಬಾರ್ಕ್ ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಟಿಆರ್ಪಿ ತಿರುಚಿರುವುದಾಗಿ ತಿಳಿಸಿದ್ದಾರೆ. ಹೆಚ್ಚಿನ ವಿಚಾರಣೆಗೆ ಅವರನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಕೋರಿಕೊಂಡಿದ್ದಾರೆ.
ಕಳೆದ ವಾರ ಪೊಲೀಸರು ಪುಣೆಯಲ್ಲಿ ದಾಸ್ ಗುಪ್ತಾರನ್ನು ಬಂಧಿಸಿದ್ದು, ಅವರ ಮನೆಯಿಂದ ಮೂರು ಕೆಜಿ ಬೆಳ್ಳಿ ಸೇರಿದಂತೆ ಹಲವು ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದರು. ಈ ದುಬಾರಿ ವಸ್ತುಗಳನ್ನು ಅರ್ನಬ್ ಗೋಸ್ವಾಮಿ ನೀಡಿದ ಹಣದಿಂದಲೇ ಖರೀದಿಸಿದ್ದು ಎಂದು ಹೇಳಿಕೆ ನೀಡಿದ್ದಾರೆ.

ದಾಸ್ ಗುಪ್ತಾ 2013ರಿಂದ 2019ರ ಅವಧಿಯಲ್ಲಿ ಬಾರ್ಕ್ ಸಿಇಒ ಆಗಿದ್ದು, ಆ ಅವಧಿಯಲ್ಲಿ ಅರ್ನಬ್ ಗೋಸ್ವಾಮಿ ಲಕ್ಷ ಲಕ್ಷ ಲಂಚ ನೀಡಿದ್ದರು ಎಂದು ತಿಳಿಸಿದ್ದಾರೆ. ಟಿಆರ್ಪಿ ಮಾಪನದ ಗೌಪ್ಯ ಮಾಹಿತಿಯನ್ನು ದಾಸ್ ಗುಪ್ತಾ ಅರ್ನಬ್ ಗೋಸ್ವಾಮಿಯೊಂದಿಗೆ ಹಂಚಿಕೊಂದ್ದರು ಎನ್ನಲಾಗಿದೆ. ದಾಸ್ ಗುಪ್ತಾ ತಮ್ಮ ಹುದ್ದೆ ದುರುಪಯೋಗ ಮಾಡಿಕೊಂಡು ರಿಪಬ್ಲಿಕ್ ಟಿವಿ ಇಂಗ್ಲಿಷ್ ಹಾಗೂ ರಿಪಬ್ಲಿಕ್ ಭಾರತ್ ಹಿಂದಿ ಟಿಆರ್ಪಿ ತಿರುಚಿದ್ದಾರೆ ಎಂದು ಪೊಲೀಸರು ಆರೋಪಿಸಿದ್ದಾರೆ.
ಟಿಆರ್ಪಿ ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೂ 15 ಮಂದಿ ಬಂಧಿಸಲಾಗಿದೆ. ಸದ್ಯಕ್ಕೆ ದಾಸ್ ಗುಪ್ತಾ ಪೊಲೀಸ್ ಕಸ್ಟಡಿಯನ್ನು ಡಿ.30ರವರೆಗೂ ವಿಸ್ತರಿಸಲಾಗಿದೆ.
-
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು -
ಲಕ್ಷಾಂತರ ರೂಪಾಯಿ ಸಂಬಳದ ಕೆಲಸಕ್ಕೆ ಗುಡ್ಬೈ: ಸಿಂಗಾಪುರದಿಂದ ಮುಂಬೈಗೆ ಬಂದು ಕವಿಯಾದ ಭಾರತೀಯ ಮೂಲದ ಯುವತಿ -
Bengaluru School: ರಾಜಾಜಿನಗರದಲ್ಲಿ ಶಾಲೆ ವಿರುದ್ಧ ನಿವಾಸಿಗಳ ಬೇಸರ: ಹೈಕೋರ್ಟ್ ನೋಟಿಸ್ ಜಾರಿ -
Vande Bharat Express: ತಂಬಾಕು ಉಗಿಯಲು ಹೋಗಿ ಹೈಸ್ಪೀಡ್ ರೈಲಿಗೆ ಡಿಕ್ಕಿ, ವ್ಯಕ್ತಿ ಸಾವು Video -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ












Click it and Unblock the Notifications