ಆರ್ಯನ್ ಖಾನ್ ಡ್ರಗ್ಸ್ ಕೇಸ್: ದೆಹಲಿ ಎನ್ಸಿಬಿಗೆ ಹಸ್ತಾಂತರ
ಮುಂಬೈ, ನವೆಂಬರ್ 06: ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣವನ್ನು ದೆಹಲಿ ಎನ್ಸಿಬಿಗೆ ವರ್ಗಾವಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ಸಿಬಿ) ಶುಕ್ರವಾರ ಮುಂಬೈ ಘಟಕದ ಉಸ್ತುವಾರಿ ಸಮೀರ್ ವಾಂಖೆಡೆ ಅವರನ್ನು ಕಾರ್ಡೆಲಿಯಾ ಕ್ರೂಸ್ ಶಿಪ್ ಮಾದಕ ದ್ರವ್ಯ ಪತ್ತೆ ಪ್ರಕರಣದಿಂದ ಸ್ಥಳಾಂತರಿಸಿದೆ. ಆದಾಗ್ಯೂ, 'ತೆಗೆದುಹಾಕಲಾಗಿದೆ' ಎಂಬುದು ಬಲವಾದ ಪದವಾಗಿದೆ ಎಂದು ವಾಂಖೆಡೆ ಹೇಳಿದ್ದಾರೆ ಮತ್ತು ಎನ್ಸಿಬಿಯ ಮುಂಬೈ ಘಟಕದ ವಲಯ ನಿರ್ದೇಶಕರಾಗಿ ತಾವು ಮುಂದುವರಿದಿರುವುದಾಗಿ ಅವರು ಹೇಳಿದರು.
ಆರ್ಯನ್ ಖಾನ್ ಮತ್ತು ಸಮೀರ್ ಖಾನ್ ಪ್ರಕರಣವನ್ನು ಕೇಂದ್ರ ತಂಡದಿಂದ ತನಿಖೆ ನಡೆಸಬೇಕು ಎಂದು ವಾಂಖೆಡೆ ಅವರು ಬಾಂಬೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.

ಒಟ್ಟು ಐದು ಪ್ರಕರಣಗಳನ್ನು ಎಸ್ ಕೆ ಸಿಂಗ್ ಮತ್ತು ಅವರ ತಂಡಕ್ಕೆ ವರ್ಗಾಯಿಸಲಾಗಿದೆ. ನಾನು ರಿಟ್ ಅರ್ಜಿ ಸಲ್ಲಿಸಿದ್ದೇನೆ: ವಾಂಖೇಡೆ: "ಈ ಎರಡು ಪ್ರಕರಣಗಳನ್ನು ಕೇಂದ್ರ ತಂಡಗಳಿಂದ ತನಿಖೆ ನಡೆಸಬೇಕು ಎಂದು ನಾನು ರಿಟ್ ಅರ್ಜಿಯನ್ನು ಸಲ್ಲಿಸಿದ್ದೇನೆ... ಪ್ರಕರಣದ ತನಿಖೆ ನಡೆಸುತ್ತಿರುವವರು ಹಿರಿಯ ಅಧಿಕಾರಿ ಇದ್ದಾರೆ" ಎಂದು ವಾಂಖೇಡೆ ತಿಳಿಸಿದ್ದಾರೆ ಎಂದು ಟೈಮ್ಸ್ ನೆಟ್ವರ್ಕ್ ತಿಳಿಸಿದೆ.
ತಮ್ಮನ್ನು 'ತನಿಖೆಯಿಂದ ತೆಗೆದುಹಾಕಲಾಗಿಲ್ಲ' ಎಂದು ಹೇಳಿದರು, ಬದಲಿಗೆ, ತನಿಖಾ ಸಂಸ್ಥೆ ಕ್ರಮಕೈಗೊಂಡಿದೆ.
"ಈ ವಿಷಯವನ್ನು ಕೇಂದ್ರೀಯ ಸಂಸ್ಥೆಯಿಂದ ತನಿಖೆ ಮಾಡಬೇಕೆಂದು ನ್ಯಾಯಾಲಯದಲ್ಲಿ ನನ್ನ ರಿಟ್ ಅರ್ಜಿ ಸಲ್ಲಿಸಿದ್ದೆ. ಆದ್ದರಿಂದ ಆರ್ಯನ್ ಪ್ರಕರಣ ಮತ್ತು ಸಮೀರ್ ಖಾನ್ ಪ್ರಕರಣವನ್ನು ದೆಹಲಿ ಎನ್ಸಿಬಿ (NCB) ಯ ಎಸ್ಐಟಿ (SIT) ತನಿಖೆ ನಡೆಸುತ್ತಿದೆ.
ಇದು ದೆಹಲಿ ಮತ್ತು ಮುಂಬೈನ ನಡುವೆ ಎನ್ಸಿಬಿ ತಂಡಗಳ ಸಮನ್ವಯವಾಗಿದೆ" ಎಂದು ಅವರು ಹೇಳಿದರು. ಆರ್ಯನ್ ಖಾನ್ ಪ್ರಕರಣ ಸೇರಿದಂತೆ ಮುಂಬೈ ವಲಯದ 6 ಪ್ರಕರಣಗಳು ಮತ್ತು ಇತರ 5 ಪ್ರಕರಣಗಳನ್ನು ಈಗ ಅವರಿಂದಲೇ ತನಿಖೆ ನಡೆಸಲಾಗುವುದು ಎಂಬ ನಿರ್ಧಾರದ ನಂತರ ದೆಹಲಿ ಎನ್ಸಿಬಿ ತಂಡ ನಾಳೆ ಮುಂಬೈಗೆ ಆಗಮಿಸುತ್ತಿದೆ.
ಯಾವುದೇ ಅಧಿಕಾರಿ ಅಥವಾ ಅಧಿಕಾರಿಗಳನ್ನು ಅವರ ಪ್ರಸ್ತುತ ಪಾತ್ರಗಳಿಂದ ತೆಗೆದುಹಾಕಲಾಗಿಲ್ಲ ಮತ್ತು ಯಾವುದೇ ನಿರ್ದಿಷ್ಟ ಆದೇಶಗಳನ್ನು ಹೊರಡಿಸುವ ವರೆಗೆ ಅವರು ಕಾರ್ಯಾಚರಣೆಯ ಶಾಖೆಯ ತನಿಖೆಗೆ ಅಗತ್ಯವಿರುವಂತೆ ಸಹಾಯ ಮಾಡುವುದನ್ನು ಮುಂದುವರಿಸುತ್ತಾರೆ. ಸಂಯೋಜಿತ ಸಂಸ್ಥೆ"ಭಾರತದಾದ್ಯಂತ ಒಂದೇ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ ಎಂದು ಎನ್ಸಿಬಿ ಪುನರುಚ್ಚರಿಸಿದೆ.
ಐದು ಪ್ರಕರಣಗಳು ರಾಷ್ಟ್ರವ್ಯಾಪಿ ಹಾಗೂ ಅಂತಾರಾಷ್ಟ್ರೀಯ ಸಂಪರ್ಕಗಳನ್ನು ಹೊಂದಿರಬಹುದು ಎಂದು ಎನ್ಸಿಬಿ ಆರೋಪಿಸಿದೆ ಮತ್ತು ಎಸ್ಕೆ ಸಿಂಗ್ ನೇತೃತ್ವದ ಕೇಂದ್ರ ವಲಯ ತಂಡವು ಈಗ 'ನಿಕಟ ಸಮನ್ವಯ'ಕ್ಕಾಗಿ ತನಿಖೆಯನ್ನು ಮುನ್ನಡೆಸಲಿದೆ ಎಂದು ಹೇಳಿಕೊಂಡಿದೆ.
ಎನ್ಸಿಬಿ ಮಹಾನಿರ್ದೇಶಕರು ರಚಿಸಿರುವ ಎನ್ಸಿಬಿ ಕೇಂದ್ರ ಕಚೇರಿಯಶಾಖೆಯ ಅಧಿಕಾರಿಗಳನ್ನು ಒಳಗೊಂಡ ಎಸ್ಐಟಿಯು ಆಳವಾದ ತನಿಖೆಯನ್ನು ನಡೆಸಲು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಪರಿಣಾಮಗಳನ್ನು ಹೊಂದಿರುವ ಫಾರ್ವರ್ಡ್ ಮತ್ತು ಬ್ಯಾಕ್ವರ್ಡ್ ಸಂಪರ್ಕಗಳನ್ನು ಕಂಡುಹಿಡಿಯಲು ಎನ್ಸಿಬಿ ಮುಂಬೈ ವಲಯ ಘಟಕದಿಂದ ಒಟ್ಟು 6 ಪ್ರಕರಣಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಎನ್ಸಿಬಿ ಪತ್ರಿಕಾ ಪ್ರಕಟಣೆ ತಿಳಿಸಿದೆ.
ಆರ್ಯನ್ ಖಾನ್ ಪ್ರಕರಣ ಮತ್ತು ಇತರ 5 ಪ್ರಕರಣಗಳು ಸೇರಿದಂತೆ ನಮ್ಮ ವಲಯದ ಒಟ್ಟು 6 ಪ್ರಕರಣದ ತನಿಖೆಯನ್ನು ದೆಹಲಿಯ ಎನ್ಸಿಬಿ ತಂಡ ಕೈಗೆತ್ತಿಕೊಳ್ಳಲಿದೆ.
ಇದು ಆಡಳಿತಾತ್ಮಕ ನಿರ್ಧಾರವಾಗಿದೆ ಎಂದು ಎನ್ಸಿಬಿಯ ನೈರುತ್ಯ ವಲಯದ ಡೆಪ್ಯುಟಿ ಡಿಜಿ ಮುತಾ ಅಶೋಕ್ ಜೈನ್ ಸ್ಪಷ್ಟನೆ ನೀಡಿದ್ದಾರೆ. ಪ್ರಕರಣಗಳ ತನಿಖೆಯನ್ನು ವಹಿಸಿಕೊಳ್ಳಲು ದೆಹಲಿ ಎನ್ಸಿಬಿಯ ತಂಡ ಶನಿವಾರ ಮುಂಬೈಗೆ ಆಗಮಿಸಲಿದೆ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ, ಈ ಕುರಿತು ಪ್ರತಿಕ್ರಿಯೆ ನೀಡಿರುವ ಎನ್ಸಿಬಿ, ಯಾವುದೇ ಅಧಿಕಾರಿಯನ್ನೂ ತನಿಖಾ ತಂಡದಿಂದ ತೆಗೆದುಹಾಕಲಾಗಿಲ್ಲ. ಅವರು ತನಿಖೆಯಲ್ಲಿ ಸಹಕಾರ ನೀಡಲಿದ್ದಾರೆ. ಮುಂದಿನ ಆದೇಶದವರೆಗೆ ಅವರು ತಮ್ಮ ಸ್ಥಾನದಲ್ಲಿಯೇ ಮುಂದುವರೆಯಲಿದ್ದಾರೆ ಎಂದು ಎನ್ಸಿಬಿಯನ್ನು ಉಲ್ಲೇಖಿಸಿ ಎಎನ್ಐ ವರದಿ ಮಾಡಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications