ಇತರೆ ಕೈದಿಗಳ ಜತೆ ಬಿಡುಗಡೆಯಾಗಲಿದ್ದಾರೆ ಆರ್ಯನ್ ಖಾನ್
ಮುಂಬೈ, ಅಕ್ಟೋಬರ್ 30: ಮುಂಬೈ ತೀರದಲ್ಲಿ ಕ್ರೂಸ್ ಹಡಗಿನಲ್ಲಿ ನಿಷೇಧಿತ ಡ್ರಗ್ಸ್ ವಶಪಡಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ತಿಂಗಳ ಆರಂಭದಲ್ಲಿ ಬಂಧನಕ್ಕೊಳಗಾಗಿರುವ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ಇಂದು ಬಿಡುಗಡೆಗೊಳ್ಳಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಗುರುವಾರ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದರೂ ಶುಕ್ರವಾರ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಆರ್ಯನ್ ಖಾನ್ ಮತ್ತೊಂದು ರಾತ್ರಿ ಜೈಲಿನಲ್ಲಿಯೇ ಕಳೆಯಬೇಕಾಗಿತ್ತು.
ಬಿಡುಗಡೆ ಪ್ರಕ್ರಿಯೆ ಕುರಿತು ಮಾತನಾಡಿರುವ ಆರ್ಥರ್ ರೋಡ್ ಜೈಲು ಸೂಪರಿಂಟೆಂಡೆಂಟ್ ನಿತಿನ್ ವೈಚಲ್ ಬಿಡುಗಡೆ ಆದೇಶ ನಮ್ಮ ಕೈ ಸೇರಿದೆ. ಇನ್ನು ಒಂದೆರಡು ಗಂಟೆಗಳಲ್ಲಿ ಆರ್ಯನ್ ಖಾನ್ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಶಾರೂಖ್ ಖಾನ್ ಬರುವ ಸಾಧ್ಯತೆ ಇದೆ.

"ನಾವು ಯಾರಿಗೂ ವಿಶೇಷ ಆತಿಥ್ಯ ನೀಡುವುದಿಲ್ಲ. ಕಾನೂನು ಎಲ್ಲರಿಗೂ ಒಂದೇ. ಜಾಮೀನು ಪೇಪರ್ ಗಳು ಸ್ವೀಕರಿಸಲು ಸಂಜೆ 5. 30ಕ್ಕೆ ಕಾಲಾವಕಾಶ ಇದೆ. ಆದರೆ ಸಕಾಲಕ್ಕೆ ಪೇಪರ್ ಗಳು ಸಲ್ಲಿಕೆಯಾಗದ ಹಿನ್ನೆಲೆಯಲ್ಲಿಅವರನ್ನು ಬಿಡುಗಡೆ ಮಾಡುವುದಿಲ್ಲ" ಜೈಲು ಎಂದು ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದರು.
ಆರ್ಯನ್ ಖಾನ್ ಅವರ ಕಾನೂನು ತಂಡ, "ಸಂಜೆ 7 ಗಂಟೆಯವರೆಗೆ ಪೇಪರ್ ಗಳನ್ನು ಸ್ವೀಕರಿಸಿ ಬಿಡುಗಡೆ ಮಾಡಬಹುದು" ಎಂದು ಹೇಳಿದ ಹಿನ್ನೆಲೆಯಲ್ಲಿ ಜೈಲು ಅಧಿಕಾರಿಗಳು ಈ ಸಮರ್ಥನೆ ನೀಡಿದ್ದಾರೆ.
"ಬಿಡುಗಡೆಗಾಗಿ ಆರ್ಥರ್ ರೋಡ್ ಜೈಲಿನ ಹೊರಗಿನ ಜಾಮೀನು ಪೆಟ್ಟಿಗೆಯಲ್ಲಿ ಬಿಡುಗಡೆ ಆದೇಶದ ಭೌತಿಕ ಪ್ರತಿಯನ್ನು ಹಾಕಬೇಕು. ಇದಕ್ಕಾಗಿ ಜೈಲು ಅಧಿಕಾರಿಗಳು ಸಂಜೆ 5.35 ರವರೆಗೆ ಕಾಯುತ್ತಾರೆ" ಎಂದು ಆರ್ಥರ್ ರೋಡ್ ಜೈಲು ಅಧೀಕ್ಷಕ ನಿತಿನ್ ವಾಯ್ಚಲ್ ಅವರು ಹೇಳಿದ್ದಾರೆ.
ಕಳೆದ ಹಲವು ದಿನಗಳಿಂದ ಮುಂಬೈನ ಅರ್ತರ್ ರೋಡ್ ಜೈಲಿನಲ್ಲಿ ಬಂಧಿಯಾಗಿರುವ ಆರ್ಯನ್ ಖಾನ್ ಗೆ ಅವರಿಗೆ ನಿನ್ನೆ ಜಾಮೀನು ಸಿಕ್ಕಿದ್ದು, ನಾಳೆ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಮಾದಕ ವಸ್ತುಗಳ ಬಳಕೆ, ಮಾರಾಟ ಸೇರಿದಂತೆ ಅನೇಕ ಆರೋಪಗಳನ್ನು ಆರ್ಯನ್ ಖಾನ್ ಮೇಲೆ ಎನ್ ಸಿ ಬಿ ಹೊರಿಸಿದೆ. ಆರ್ಥರ್ ರೋಡ್ ಜೈಲಿನ ಅಧಿಕಾರಿಗಳ ಪ್ರಕಾರ, ಆರ್ಯನ್ ಖಾನ್ ಅವರನ್ನು ಶನಿವಾರ ಮಧ್ಯಾಹ್ನ ಜೈಲಿನಿಂದ ಬಿಡುಗಡೆ ಮಾಡಲಾಗುತ್ತದೆ.
ನಾವು ಕಳೆದ ಮೂರು ದಿನಗಳಿಂದ ಸ್ವತಂತ್ರ ಸ್ಥಳದಲ್ಲಿ ವಿಚಾರಣೆ ನಡೆಸುತ್ತಿದ್ದೇವೆ ಮತ್ತು ನಾವು ಐದು ಅಧಿಕಾರಿಗಳು ಮತ್ತು ಮೂವರು ಖಾಸಗಿ ಸಾಕ್ಷಿಗಳನ್ನು ಪರೀಕ್ಷಿಸಿದ್ದೇವೆ ಮತ್ತು ವಿವಿಧ ದಾಖಲೆಗಳು ಮತ್ತು ಸಾಕ್ಷ್ಯಗಳನ್ನು ಸಂಗ್ರಹಿಸಿದ್ದೇವೆ ಎಂದು ಐಷಾರಾಮಿ ಹಡಗಿನಲ್ಲಿ ಡಗ್ಸ್ ಪ್ರಕರಣದ ಕುರಿತು ಡಿಡಿಜಿ ಎನ್ಸಿಬಿ ಜ್ಞಾನೇಶ್ವರ್ ಸಿಂಗ್ ಹೇಳಿದ್ದಾರೆ.
ಸಮೀರ್ ವಾಂಖೆಡೆ ಅವರನ್ನು ಕಳೆದ ದಿನ ವಿಚಾರಣೆಗೊಳಪಡಿಸಿದ್ದು ಅವರು ಕೆಲವು ದಾಖಲೆಗಳನ್ನು ಸಲ್ಲಿಸಿದ್ದಾರೆ. ನಾವು ಅದನ್ನು ವಿಶ್ಲೇಷಿಸುತ್ತಿದ್ದೇವೆ. ನಾವು ಇನ್ನೂ ಕೆಲವು ದಾಖಲೆಗಳನ್ನು ಕೇಳಿದ್ದೇವೆ ಮತ್ತು ಅಗತ್ಯವಿದ್ದರೆ ಅವರನ್ನು ಮತ್ತೆ ಸಂಪರ್ಕಿಸುತ್ತೇವೆ. ಲಭ್ಯವಿರುವ ಎಲ್ಲಾ ಮೂಲಗಳ ಮೂಲಕ ಸಾಕ್ಷಿ ಪ್ರಭಾಕರ್ ಸೈಲ್ ಅವರೊಂದಿಗೆ ಸಂಪರ್ಕವನ್ನು ಸ್ಥಾಪಿಸಲು ನಾವು ಪ್ರಯತ್ನಿಸಿದ್ದೇವೆ.
ಸೈಲ್ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ಮಾಧ್ಯಮ ವರದಿಗಳು ಬಂದಿದ್ದರಿಂದ ನಮಗೆ ಸಹಾಯ ಮಾಡುವಂತೆ ನಾವು ಮುಂಬೈ ಪೊಲೀಸ್ ಕಮಿಷನರ್ ಅವರನ್ನು ವಿನಂತಿಸಿದ್ದೇವೆ. ಅವರಿಗೆ ಇನ್ನೂ ನೋಟಿಸ್ ನೀಡಲು ನಮಗೆ ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications