ಟಿಕೆಟ್ ಸಿಗದ ಸಿಟ್ಟಿಗೆ ಕಚೇರಿಯ 300 ಕುರ್ಚಿ ಹೊತ್ತೊಯ್ದ ಕಾಂಗ್ರೆಸ್ ಶಾಸಕ
ಔರಂಗಾಬಾದ್, ಮಾರ್ಚ್ 28: ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗದೆ ಇದ್ದರೆ ಆಕಾಂಕ್ಷಿಗಳು ಪಕ್ಷದ ನಾಯಕರ ವಿರುದ್ಧ ಕೋಪಗೊಂಡು ಪಕ್ಷ ತ್ಯಜಿಸುವುದೋ ಅಥವಾ ಬಂಡಾಯ ಏಳುವುದೋ ಮುಂತಾದ ಚಟುವಟಿಕೆಗಳನ್ನು ನಡೆಸುತ್ತಾರೆ. ಆದರೆ, ಔರಂಗಾಬಾದ್ನ ಸಿಲ್ಲೋದ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತೆಗೆದುಕೊಂಡು ತೀರ್ಮಾನ ನಗೆಯುಕ್ಕಿಸುವಂತಿದೆ.
ಔರಂಗಾಬಾದ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಆಕಾಂಕ್ಷಿಯಾಗಿದ್ದ ಶಾಸಕ ಅಬ್ದುಲ್ ಸತ್ತಾರ್ ಎ ನಬಿಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿತ್ತು. ಇದರಿಂದ ಕೋಪಗೊಂಡ ಅಬ್ದುಲ್ ಸತ್ತಾರ್ ಪಕ್ಷದ ಸ್ಥಳೀಯ ಕಚೇರಿಯಲ್ಲಿದ್ದ ಕುರ್ಚಿಗಳನ್ನೆಲ್ಲ ಹೊತ್ತೊಯ್ದಿದ್ದಾರೆ.
ಕಾಂಗ್ರೆಸ್ ಪಕ್ಷದ ವಿರುದ್ಧ ಆಕ್ರೋಶಗೊಂಡ ಸತ್ತಾರ್ ಮತ್ತವರ ಬೆಂಬಲಿಗರು ಪಕ್ಷದ ಸ್ಥಳೀಯ ಕಚೇರಿಯಲ್ಲಿದ್ದ ಸುಮಾರು 300 ಪ್ಲಾಸ್ಟಿಕ್ ಕುರ್ಚಿಗಳನ್ನು ಬೇರೆಡೆ ಸಾಗಿಸಿದ್ದಾರೆ. ಬಳಿಕ ಅವರು ಕಾಂಗ್ರೆಸ್ಗೆ ರಾಜೀನಾಮೆ ನೀಡುವುದಾಗಿ ಪ್ರಕಟಿಸಿದ್ದಾರೆ.

ಈ ಘಟನೆಯನ್ನು ಸತ್ತಾರ್ ಬೆಂಬಲಿಗರು ಸಮರ್ಥಿಸಿಕೊಂಡಿದ್ದಾರೆ. ಕೆಲವು ವರ್ಷಗಳ ಹಿಂದೆ ಈ ಕುರ್ಚಿಗಳಿಗೆ ಸತ್ತಾರ್ ಅವರೇ ಹಣ ನೀಡಿದ್ದರು. ಹೀಗಾಗಿ ಅವು ಅವರಿಗೇ ಸೇರಿದ್ದು. ಅವರು ಈಗ ಪಕ್ಷವನ್ನು ತ್ಯಜಿಸಿರುವುದರಿಂದ ತಮ್ಮ ಕುರ್ಚಿಗಳನ್ನು ಇಲ್ಲಿಯೇ ಬಿಟ್ಟು ಹೋಗುವುದರಲ್ಲಿ ಅರ್ಥವಿಲ್ಲ. ಮಿಗಿಲಾಗಿ ಅವರಿಗೆ ಈ ಕುರ್ಚಿಗಳ ಅಗತ್ಯವಿದೆ. ಅವುಗಳನ್ನು ಅವರ ಖಾಸಗಿ ಕಚೇರಿಗೆ ಸಾಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಎನ್ಸಿಪಿ ಕಚೇರಿಯಲ್ಲಿ ಸೋಮವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಎಂಎಲ್ಸಿ ಸುಭಾಷ್ ಜಂಬಾದ್ ಅವರನ್ನು ಔರಂಗಾಬಾದ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿತ್ತು. ಇದು ಪ್ರಬಲ ಆಕಾಂಕ್ಷಿಯಾಗಿದ್ದ ಸತ್ತಾರ್ ಅವರನ್ನು ಕೆರಳಿಸಿತ್ತು.
ಕಾಂಗ್ರೆಸ್ ತ್ಯಜಿಸಿದ ಬಳಿಕ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಅವರಿಗೆ ಕರೆ ಮಾಡಿ ಮಾತನಾಡಿದ್ದರು. ಇದರಿಂದ ಸತ್ತಾರ್ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಆದರೆ, ಶಾಸಕನಾದ ತಮಗೆ ನಾಲ್ಕು ವರ್ಷ ಸಹಕಾರ ನೀಡಿದ್ದಕ್ಕೆ ಧನ್ಯವಾದ ಸಲ್ಲಿಸಲು ಕರೆ ಮಾಡಿದ್ದಾಗಿ ಸತ್ತಾರ್ ಸ್ಪಷ್ಟೀಕರಣ ನೀಡಿದ್ದಾರೆ.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ಮತಾಂತರವಾದರೆ SC ಸ್ಥಾನಮಾನ ರದ್ದು ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು; ಕೇಂದ್ರದ ವಿರುದ್ಧ ಕಾಂಗ್ರೆಸ್ ಕೆಂಡ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL












Click it and Unblock the Notifications