ಬಂಜಾರ ಸಮುದಾಯದ ಧಾರ್ಮಿಕ ಮುಖಂಡ ರಾಮರಾವ್ ಮಹಾರಾಜ್ ನಿಧನ
ಮುಂಬೈ, ಅಕ್ಟೋಬರ್ 31: ಬಂಜಾರ ಸಮುದಾಯದ ಹಿರಿಯ ಧಾರ್ಮಿಕ ಮುಖಂಡ ರಾಮರಾವ್ ಮಹಾರಾಜ್ ಅವರು ಸುದೀರ್ಘ ಸಮಯದ ಅನಾರೋಗ್ಯದ ಬಳಿಕ ಶನಿವಾರ ಬೆಳಿಗ್ಗೆ ನಿಧನರಾದರು. ಅವರನ್ನು ಕೆಲವು ದಿನಗಳ ಹಿಂದೆ ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಬಂಜಾರ ಸಮುದಾಯದ ಪ್ರಮುಖ ಸ್ವಾಮಿಗಳಾದ ರಾಮರಾವ್ ಮಹಾರಾಜ್, ದೇಶದಾದ್ಯಂತ 12 ಕೋಟಿಗೂ ಅಧಿಕ ಅನುಯಾಯಿಗಳನ್ನು ಹೊಂದಿದ್ದಾರೆ. ಅವರಿಗೆ ಪ್ರಧಾನಿ ನರೇಂದ್ರ ಮೋದಿ, ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸೇರಿದಂತೆ ಅನೇಕ ರಾಜಕೀಯ ನಾಯಕರ ಜತೆ ಆಪ್ತ ಒಡನಾಟವಿತ್ತು.
ರಾಮರಾವ್ ಮಹಾರಾಜ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. 'ರಾಮರಾವ್ ಬಾಪು ಮಹಾರಾಜ್ ಅವರನ್ನು ಅವರ ಸಮಾಜಸೇವೆ ಮತ್ತು ಶ್ರೀಮಂತ ಆಧ್ಯಾತ್ಮಿಕ ಜ್ಞಾನದ ಸಲುವಾಗಿ ಸ್ಮರಿಸಲಾಗುವುದು. ಅವರು ಬಡತನ ನಿರ್ಮೂಲನೆ ಮತ್ತು ಮಾನವ ಸಂಕಷ್ಟಗಳನ್ನು ನಿವಾರಿಸಲು ಅನವರತ ಪ್ರಯತ್ನ ಮಾಡಿದ್ದರು. ಕೆಲವು ತಿಂಗಳ ಹಿಂದೆ ಅವರನ್ನು ಭೇಟಿಯಾಗುವ ಗೌರವ ನನಗೆ ಸಿಕ್ಕಿತ್ತು' ಎಂದು ಮೋದಿ ಟ್ವಿಟ್ಟರ್ನಲ್ಲಿ ಹೇಳಿದ್ದಾರೆ.

ಗೃಹ ಸಚಿವ ಅಮಿತ್ ಶಾ ಸಹ ರಾಮರಾವ್ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಅವರು ತಮ್ಮ ಇಡೀ ಬದುಕನ್ನು ಬಡವರು ಮತ್ತು ಕೆಳವರ್ಗದವರನ್ನು ಮೇಲೆತ್ತುವ ಕಾರ್ಯಕ್ಕೆ ಮೀಸಲಿಟ್ಟಿದ್ದರು ಎಂದು ತಿಳಿಸಿದ್ದಾರೆ.
ರಾಮರಾವ್ ಮಹಾರಾಜ್ ಅವರ ಅಂತ್ಯಸಂಸ್ಕಾರವು ಕಾನೂನಿನ ನಿಯಮಾವಳಿಗೆ ಅನುಗುಣವಾಗಿ ಸೋಮವಾರ ಮಹಾರಾಷ್ಟ್ರದ ವಾಷಿಮ್ ಜಿಲ್ಲೆಯಲ್ಲಿರುವ ಪೊಹ್ರಾದೇವಿ ಧಾರ್ಮಿಕ ಸ್ಥಳದಲ್ಲಿ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.
-
Power Cut: ನಾಳೆ ಮಾ.22 ರಿಂದ 25ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ












Click it and Unblock the Notifications