ರವಿಶಾಸ್ತ್ರಿ ಅಂಡ್ ಟೀಂನಿಂದ ಸ್ಪಾಟ್ ಫಿಕ್ಸಿಂಗ್ ತನಿಖೆ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆಗೆ ಸಮಿತಿ ರಚಿಸಿರುವ ಬಿಸಿಸಿಐ, ಇಂದು ನಡೆದ ತುರ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ ಎಂದು ಮಧ್ಯಂತರ ಅಧ್ಯಕ್ಷ, ಐಪಿಎಲ್ ಚೇರ್ಮನ್ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಸಿಬಿಐನ ಮಾಜಿ ನಿರ್ದೇಶಕ ಆರ್ ಕೆ ರಾಘವನ್, ಜೆಎನ್ ಪಟೇಲ್ ಹಾಗೂ ಮಾಜಿ ಕ್ರಿಕೆಟರ್ ರವಿ ಶಾಸ್ತ್ರಿ ಅವರು ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖಾ ತಂಡದ ಸದಸ್ಯರಾಗಿರುತ್ತಾರೆ. ಬಿಸಿಸಿಐ ಪರ ವಕೀಲರು ಈ ಮೂವರು ಸದಸ್ಯರ ಸಮಿತಿ ವಿವರವನ್ನು ಸುಪ್ರೀಂಕೋರ್ಟಿಗೆ ಮಂಗಳವಾರದಂದು ಸಲ್ಲಿಸಿ ಅನುಮತಿ ಪಡೆಯಲಿದ್ದಾರೆ.
ಐಪಿಎಲ್ ನ ಕಳ್ಳಾಟದ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಈ ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ. ಈ ನಡುವೆ ಪದಚ್ಯುತ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರ ಮೇಲ್ಮನವಿಯನ್ನು ಕೋರ್ಟ್ ತಳ್ಳಿಹಾಕಿದೆ. ಹೀಗಾಗಿ ಜಸ್ಟೀಸ್ ಮುದ್ಗಲ್ ವರದಿಯಂತೆ ಶ್ರೀನಿವಾಸನ್ ಸೇರಿದಂತೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು, ಟೀಂ ಇಂಡಿಯಾದ ಆಟಗಾರರು ಈಗ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಳ್ಳುವವರೆಗೆ ಹಾಲಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ತಾತ್ಕಾಲಿಕವಾಗಿ ಸುನೀಲ್ ಗವಾಸ್ಕರ್ ಅಥವಾ ಹಿರಿಯ ಕ್ರಿಕೆಟಿಗರು ಒಬ್ಬರನ್ನು ಆ ಸ್ಥಾನಕ್ಕೆ ನೇಮಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ ಸುನಿಲ್ ಗವಾಸ್ಕರ್ ಅವರು ಐಪಿಎಲ್ ಹಾಗೂ ಬಿಸಿಸಿಐ ಸಾರಥ್ಯ ವಹಿಸಿಕೊಂಡಿದ್ದರು.
ಇದಕ್ಕೂ ಮುನ್ನ ಬಾಲಿವುಡ್ ನಟ, ಬುಕ್ಕಿಗಳ ನಂಟು ಹೊಂದಿರುವ ವಿಂದೂ ದಾರಾಸಿಂಗ್ ಮೂಲಕ ನಾನು ಐಪಿಎಲ್ ಬೆಟ್ಟಿಂಗ್ ನಡೆಸಿರುವುದು ನಿಜ ಎಂದು ಹಗರಣದಲ್ಲಿ ಬಂಧಿತನಾಗಿ ಪೊಲೀಸರ ವಶದಲ್ಲಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಅಳಿಯ ಗುರುನಾಥ ಮೇಯಪ್ಪನ್ ತಪ್ಪೊಪ್ಪಿಕೊಂಡಿದ್ದರು. ಮೇಯಪ್ಪನ್ ಹೆಸರು ಕೂಡಾ ಮುದ್ಗಲ್ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications