ರವಿಶಾಸ್ತ್ರಿ ಅಂಡ್ ಟೀಂನಿಂದ ಸ್ಪಾಟ್ ಫಿಕ್ಸಿಂಗ್ ತನಿಖೆ

ಸುಪ್ರೀಂಕೋರ್ಟ್ ನಿರ್ದೇಶನದಂತೆ ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖೆಗೆ ಸಮಿತಿ ರಚಿಸಿರುವ ಬಿಸಿಸಿಐ, ಇಂದು ನಡೆದ ತುರ್ತು ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಂಡಿದೆ ಎಂದು ಮಧ್ಯಂತರ ಅಧ್ಯಕ್ಷ, ಐಪಿಎಲ್ ಚೇರ್ಮನ್ ಸುನಿಲ್ ಗವಾಸ್ಕರ್ ಹೇಳಿದ್ದಾರೆ.
ಸಿಬಿಐನ ಮಾಜಿ ನಿರ್ದೇಶಕ ಆರ್ ಕೆ ರಾಘವನ್, ಜೆಎನ್ ಪಟೇಲ್ ಹಾಗೂ ಮಾಜಿ ಕ್ರಿಕೆಟರ್ ರವಿ ಶಾಸ್ತ್ರಿ ಅವರು ಸ್ಪಾಟ್ ಫಿಕ್ಸಿಂಗ್ ಪ್ರಕರಣದ ತನಿಖಾ ತಂಡದ ಸದಸ್ಯರಾಗಿರುತ್ತಾರೆ. ಬಿಸಿಸಿಐ ಪರ ವಕೀಲರು ಈ ಮೂವರು ಸದಸ್ಯರ ಸಮಿತಿ ವಿವರವನ್ನು ಸುಪ್ರೀಂಕೋರ್ಟಿಗೆ ಮಂಗಳವಾರದಂದು ಸಲ್ಲಿಸಿ ಅನುಮತಿ ಪಡೆಯಲಿದ್ದಾರೆ.
ಐಪಿಎಲ್ ನ ಕಳ್ಳಾಟದ ಬಗ್ಗೆ ಸೂಕ್ತ ಕ್ರಮ ಜರುಗಿಸುವಂತೆ ಸುಪ್ರೀಂಕೋರ್ಟ್ ನೀಡಿದ ನಿರ್ದೇಶನದ ಮೇರೆಗೆ ಈ ಮೂವರು ಸದಸ್ಯರ ಸಮಿತಿ ರಚಿಸಲಾಗಿದೆ. ಈ ನಡುವೆ ಪದಚ್ಯುತ ಅಧ್ಯಕ್ಷ ಎನ್ ಶ್ರೀನಿವಾಸನ್ ಅವರ ಮೇಲ್ಮನವಿಯನ್ನು ಕೋರ್ಟ್ ತಳ್ಳಿಹಾಕಿದೆ. ಹೀಗಾಗಿ ಜಸ್ಟೀಸ್ ಮುದ್ಗಲ್ ವರದಿಯಂತೆ ಶ್ರೀನಿವಾಸನ್ ಸೇರಿದಂತೆ ಚೆನ್ನೈ ಸೂಪರ್ ಕಿಂಗ್ಸ್ ಆಟಗಾರರು, ಟೀಂ ಇಂಡಿಯಾದ ಆಟಗಾರರು ಈಗ ತನಿಖೆ ಎದುರಿಸುವುದು ಅನಿವಾರ್ಯವಾಗಿದೆ.
ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಪೂರ್ಣಗೊಳ್ಳುವವರೆಗೆ ಹಾಲಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿ ತಾತ್ಕಾಲಿಕವಾಗಿ ಸುನೀಲ್ ಗವಾಸ್ಕರ್ ಅಥವಾ ಹಿರಿಯ ಕ್ರಿಕೆಟಿಗರು ಒಬ್ಬರನ್ನು ಆ ಸ್ಥಾನಕ್ಕೆ ನೇಮಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು. ಅದರಂತೆ ಸುನಿಲ್ ಗವಾಸ್ಕರ್ ಅವರು ಐಪಿಎಲ್ ಹಾಗೂ ಬಿಸಿಸಿಐ ಸಾರಥ್ಯ ವಹಿಸಿಕೊಂಡಿದ್ದರು.
ಇದಕ್ಕೂ ಮುನ್ನ ಬಾಲಿವುಡ್ ನಟ, ಬುಕ್ಕಿಗಳ ನಂಟು ಹೊಂದಿರುವ ವಿಂದೂ ದಾರಾಸಿಂಗ್ ಮೂಲಕ ನಾನು ಐಪಿಎಲ್ ಬೆಟ್ಟಿಂಗ್ ನಡೆಸಿರುವುದು ನಿಜ ಎಂದು ಹಗರಣದಲ್ಲಿ ಬಂಧಿತನಾಗಿ ಪೊಲೀಸರ ವಶದಲ್ಲಿರುವ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಅಳಿಯ ಗುರುನಾಥ ಮೇಯಪ್ಪನ್ ತಪ್ಪೊಪ್ಪಿಕೊಂಡಿದ್ದರು. ಮೇಯಪ್ಪನ್ ಹೆಸರು ಕೂಡಾ ಮುದ್ಗಲ್ ವರದಿಯಲ್ಲಿ ಪ್ರಸ್ತಾಪಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications