ಕಿಡ್ನ್ಯಾಪ್ ಹೇಳಿಕೆಗೆ ಸಮಜಾಯಿಷಿ ನೀಡಿದ ಬಿಜೆಪಿ ಶಾಸಕ
ಮುಂಬೈ, ಸೆಪ್ಟೆಂಬರ್ 05: 'ನೀವು ಇಷ್ಟಪಟ್ಟ ಹುಡುಗಿ ನಿಮ್ಮ ಪ್ರೀತಿಯನ್ನು ನಿರಾಕರಿಸಿದರೆ ನಾನೇ ಅವಳನ್ನು ಅಪಹರಿಸಿ ತಂದು ನಿಮ್ಮೊಂದಿಗೆ ಮದುವೆ ಮಾಡಿಸುತ್ತೇನೆ' ಎಂಬ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ರಾಮ್ ಕದಮ್ , ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟೀಕರಣ ನೀಡೀದ್ದಾರೆ.
'ನಾನು ಮೊಸರು ಕುಡಿಕೆ ಹಬ್ಬದ ಪ್ರಯುಕ್ತ ಮಾತನಾಡಿದ ವಿಡಿಯೋವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ವರೋಧಿಗಳು ಹರಿಬಿಟ್ಟಿದ್ದಾರೆ. ಆದರೆ ಅದರಲ್ಲಿ ಸಂಪೂರ್ಣ ವಿಡಿಯೋವನ್ನು ಹಾಕಲಾಗಿಲ್ಲ. ಆದ್ದರಿಂದ ನನ್ನ ಮಾತಿನ ಅರ್ಥ ಯಾರಿಗೂ ಆಗಿಲ್ಲ. ನನ್ನ ಮಾತನ್ನು ತಪ್ಪಾಗಿ ಅರ್ಥೈಸಲಾಗಿದೆ. ದಯವಿಟ್ಟು ಸಂಪೂರ್ಣ ವಿಡಿಯೋ ನೋಡಿ. ಆಗ ನನ್ನ ಮಾತು ನಿಮಗೆ ಅರ್ಥವಾಗುತ್ತದೆ ಎಂದಿದ್ದಾರೆ.'
"ಯಾವುದೇ ಕಾರಣಕ್ಕೂ ಪಾಲಕರಿಗೆ ಬೇಸರ ಮಾಡಿ ಓಡಿಹೋಗಿ ಮದುವೆಯಾಗಬೇಡಿ. ಅಕಸ್ಮಾತ್ ನೀವು ಯಾರನ್ನಾದರೂ ಇಷ್ಟಪಡುತ್ತಿದ್ದರೆ ನಾನೇ ಅವರನ್ನು ಅಪಹರಿಸಿ ಒಪ್ಪಿಸಿ ನಿಮ್ಮೊಂದಿಗೆ ಮದುವೆ ಮಾಡುತ್ತೇನೆ. ನಿಮ್ಮ ಪಾಲಕರ ಒಪ್ಪಿಗೆಯನ್ನು ಪಡೆದೇ ಈ ಕೆಲಸ ಮಾಡುತ್ತೇನೆ ಎಂದಷ್ಟೇ ನಾನು ಹೇಳಿದ್ದು" ಎಂದು ಅವರು ಹೇಳಿದ್ದಾರೆ.

'ಮಕ್ಕಳು ಪಾಲಕರ ಮನಸ್ಸಿಗೆ ನೋವುಂಟುಮಾಡಿ ಓಡಿ ಹೋಗಿ ಮದುವೆ ಮಾಡುವುದು ತಪ್ಪು ಎಂಬುದನ್ನು ಹೇಳಲು ಹೊರಟಿದ್ದೆ. ಆದರೆ ಅರ್ಧ ವಿಡಿಯೋವನ್ನಷ್ಟೇ ಹಾಕಿ ಕಾಂಗ್ರೆಸ್ಸಿಗರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ' ಎಂದು ಅವರು ದೂರಿದರು.
ಮುಂಬೈಯಲ್ಲಿ ನಡೆದ ಮೊಸರು ಕುಡಿಕೆ(ಕೃಷ್ಣಾಷ್ಟಮಿ) ಉತ್ಸವದಲ್ಲಿ ಮಾತನಾಡುತ್ತಿದ್ದ ಅವರು, 'ಮಗೆ ಏನಾದರೂ ಸಹಾಯ ಬೇಕಾದರೆ ನನಗೆ ಕರೆ ಮಾಡಿ' ಎಂದು ತಮ್ಮ ಫೋನ್ ನಂಬರ್ ನೀಡಿದ್ದರು. ನಂತರ, 'ನೀವು ಯಾವುದಾದರೂ ಹುಡುಗಿಯನ್ನು ಇಷ್ಟಪಟ್ಟಿದ್ದು, ಆಕೆ ನಿಮ್ಮ ಪ್ರೇಮ ನಿವೇದನೆ ತಿರಸ್ಕರಿಸಿದ್ದರೆ ನನಗೆ ಹೇಳಿ. ನಾನು ಆಕೆಯನ್ನು ಅಪಹರಿಸಿ ನಿಮ್ಮ ಬಳಿ ಕರೆತರುತ್ತೇನೆ' ಎಂದು ಸಹ ಅವರು ಹೇಳಿಕೆ ನೀಡಿದ್ದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications