ಬೆಳಗಾವಿ ಗಡಿ ವಿವಾದ: ಕರ್ನಾಟಕದ ಜತೆ ಚರ್ಚಿಸಲು ರಾಜ್ಯಪಾಲರಿಗೆ ಶಿವಸೇನೆ ಒತ್ತಾಯ
ಮುಂಬೈ, ನವೆಂಬರ್ 02: ಬೆಳಗಾವಿ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಜತೆ ಚರ್ಚಿಸಲು ರಾಜ್ಯಪಾಲರಿಗೆ ಶಿವಸೇನೆ ಆಗ್ರಹಿಸಿದೆ.
ಬೆಳಗಾವಿಯಲ್ಲಿ ಮರಾಠಿ ಭಾಷಿಕರ ಮೇಲೆ ದೌರ್ಜನ್ಯವೆಸಗಲಾಗುತ್ತಿದೆ ಎಂಬುದರ ಕುರಿತು ಕರ್ನಾಟಕದ ರಾಜ್ಯಪಾಲರ ಜತೆಗೆ ಚರ್ಚಿಸಬೇಕು ಎಂದು ಹೇಳಿದೆ.
ಬಿಹಾರದ ಸಿಎಂ ತೇಜಸ್ವಿಯಾದರೂ ಅಚ್ಚರಿಯಿಲ್ಲ: ಸಂಜಯ್ ರಾವತ್
ಮಹಾರಾಷ್ಟ್ರ ರಾಜ್ಯಪಾಲರು ಕರ್ನಾಟಕದ ರಾಜ್ಯಪಾಲರ ಬಳಿ ಚರ್ಚಿಸಬೇಕು. ಕನಿಷ್ಠ ಬೆಳಗಾವಿಯ ನಿಯೋಗ ಪ್ರಧಾನಿಯನ್ನು ಭೇಟಿ ಮಾಡಲು ಸಮಯಾವಾಶ ನಿಗದಿಪಡಿಸಲಾದರೂ ನೆರವು ನೀಡಬೇಕು ಎಂದು ಹೇಳಿದೆ.
ಬೆಳಗಾವಿ, ಇತರೆ ಗಡಿ ಪ್ರದೇಶ ಕುರಿತಂತೆ ಕರ್ನಾಟಕ-ಮಹಾರಾಷ್ಟ್ರ ನಡುವಿನ ವಿವಾದ ಈಗ ಸುಪ್ರೀಂಕೋರ್ಟ್ನಲ್ಲಿದೆ. ಕರ್ನಾಟಕದ ಲಕ್ಷಾಂತರ ಜನರು ಮಹಾರಾಷ್ಟ್ರದಲ್ಲಿ ಉದ್ಯಮ, ವ್ಯಾಪಾರ ನಡೆಸುತ್ತಾ ಸಂತೋಷದಿಂದ ಜೀವನ ಸಾಗಿಸುತ್ತಿದ್ದಾರೆ ಎಂಬುದನ್ನು ಲಕ್ಷ್ಮಣ ಸವದಿಯಂತಹ ಸಚಿವರು ಮರೆಯಬಾರದು ಎಂದು ಸಂಪಾದಕೀಯದಲ್ಲಿ ಬರೆಯಲಾಗಿದೆ.
ಮರಾಠಿ ಭಾಷಿಕರ ಮೇಲೆ ಈ ಭಾಗದಲ್ಲಿ ಕಳೆದ 60 ವರ್ಷಗಳಿಂದ ದೌರ್ಜನ್ಯ ನಡೆಯುತ್ತಿದೆ. ಕರ್ನಾಟಕ ಇದನ್ನು ನಿಭಾಯಿಸುತ್ತಿರುವ ಕ್ರಮ ಈ ಜನರಲ್ಲಿ ಆಕ್ರೋಶವನ್ನುಂಟುಮಾಡಿದೆ.
ಸೂರ್ಯ-ಚಂದ್ರ ಇರುವವರೆಗೂ ಬೆಳಗಾವಿ ಕರ್ನಾಟಕದ ಭಾಗವೆಂಬ ಲಕ್ಷ್ಮಣ ಸವದಿ ಅವರ ಹೇಳಿಕೆಯನ್ನು ತರಾಟೆಗೆ ತೆಗೆದುಕೊಂಡಿದೆ.