ವಿಚಾರವಾದಿಗಳ ಬಂಧನ: ಮಹಾರಾಷ್ಟ್ರ ಪೊಲೀಸರಿಂದ ಪತ್ರಿಕಾಗೋಷ್ಠಿ
ಮುಂಬೈ, ಆಗಸ್ಟ್ 31: ಭೀಮಾ ಕೊರೆಗಾಂವ್ ವಿವಾದಕ್ಕೆ ಸಂಬಂಧಿಸಿದಂತೆ ವಿಚಾರವಾದಿಗಳ ಬಂಧನದ ಕುರಿತಂತೆ ಇಂದು ಮಹಾರಾಷ್ಟ್ರ ಪೊಲೀಸರು ಪತ್ರಿಕಾಗೊಷ್ಠಿ ನಡೆಸಿದ್ದಾರೆ.
'ನಾವು ಅವರನ್ನು ಬಂಧಿಸಿದ್ದು ವಿಚಾರಣೆಗಾಗಿ ಮಾತ್ರ. ಅವರಿಗೆ ಮಾವೋವಾದಿಗಳೊಂದಿಗೆ ನಂಟಿರುವುದು ಅಥವಾ ಭೀಮಾ ಕೊರೆಗಾಂವ್ ಗಲಭೆಯಲ್ಲಿ ಅವರ ಪಾತ್ರವಿರುವುದರ ಕುರಿತು ಇದುವರೆಗೂ ನಿಖರ ಮಾಹಿತಿ ಲಭ್ಯವಾಗಿಲ್ಲ. ಅದು ಸಾಬೀತಾದ ಮೇಲೆಯೇ ಅವರ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಮಹಾರಾಷ್ಟ್ರ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಪರಮ್ ಬೀರ್ ಸಿಂಗ್ ಹೇಳಿದರು.
31-12-2017 ರಂದು ನಡೆದ ಭೀಮಾ ಕೊರೆಗಾಂವ್ 200 ನೇ ವರ್ಷಾಚರಣೆ ವೇಳೆಯ ಗಲಭೆಗೆ ಸಂಬಂಧಿಸಿದಂತೆ ಜನವರಿ 8 ರಂದು ದೂರು ದಾಖಲಾಗಿತ್ತು. ಕೆಲವರು ಪ್ರಚೋದನಾತ್ಮಕ ಭಾಷಣ ಮಾಡಿದ ಕುರಿತೂ ದೂರು ಬಂದಿತ್ತು. ಈ ಕುರಿತು ತನಿಖೆ ನಡೆಸಿ, ಆರೋಪಿಗಳನ್ನು ಬಂಧಿಸಿದ್ದೆವು ಅಷ್ಟೆ.

ತನಿಖೆಯ ವೇಳೆ ನಮಗೆ ಹಲವು ಸ್ಫೋಟಕ ಮಾಹಿತಿಗಳ ಸಿಕ್ಕಿದ್ದವು. ಆರೋಪಿಗಳು ತಮ್ಮ ಗುರಿ ಸಾಧಿಸಿಕೊಳ್ಳಲು ಮಾವೋವಾದಿಗಳ ನೆರವು ಪಡೆಯಲು ಬಯಸುತ್ತಿದ್ದರು ಎಂಬುದು ಈ ಮೂಲಕ ಗೊತ್ತಾಗಿತ್ತು. ಆದ್ದರಿಂದ ಮೇ 17 ರಂದು ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಅವರನ್ನು ಬಂಧಿಸಲಾಗಿತ್ತು ಎಂದು ಪರಮ್ ಬೀರ್ ಸಿಂಗ್ ಹೇಳಿದರು.
ಮಹಾರಾಷ್ಟ್ರದಲ್ಲಿ ಕಳೆದ ಡಿಸೆಂಬರ್-ಜನವರಿಯಲ್ಲಿ ನಡೆದ ಭೀಮಾ ಕೊರೆಗಾಂವ್ ವರ್ಷಾಚರಣೆಯ ಸಂದರ್ಭದ ಹಿಂಸಾಚಾರದಲ್ಲಿ ಕೆಲವು ವಿಚಾರವಾದಿಗಳ ಕೈವಾಡವಿದೆ ಎಂದು ಅವರನ್ನು ಮಂಗಳವಾರ ಬಂಧಿಸಲಾಗಿತ್ತು.
ಆಂಧ್ರದ ಕ್ರಾಂತಿಕಾರಿ ಕವಿ ವರವರ ರಾವ್, ನಾಗರೀಕ ಹಕ್ಕುಗಳ ಹೋರಾಟಗಾರ್ತಿ ಸುಧಾ ಭಾರದ್ವಾಜ್, ಲೇಖಕ ಆನಂದ ತೆಲ್ತುಂಬ್ಡೆ, ಮಾನವ ಹಕ್ಕು ಕಾರ್ಯಕರ್ತ ಅರುಣ್, ಪತ್ರಕರ್ತ ಗೌತಮ್, ಮಾನವ ಹಕ್ಕುಗಳ ಕಾರ್ಯಕರ್ತೆ ಸುಸಾನ್ ಅಬ್ರಹಾಂ, ಸಾಮಾಜಿಕ ಹೋರಾಟಗಾರ ಗೊನ್ಸಾಲ್ವಿಸ್ ಅವರುಗಳನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಲಾಗಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications