ಬಿಜೆಪಿಯಲ್ಲಿ ಅಪ್ಪಂಗೂ ಗೌರವವಿಲ್ಲ, ಅಡ್ವಾಣಿಗೂ ಇಲ್ಲ: ಸೋನಾಕ್ಷಿ ಸಿನ್ಹಾ
ನವದೆಹಲಿ, ಮಾರ್ಚ್ 30: "ನಮ್ಮ ಅಪ್ಪ ಎಷ್ಟೋ ದಿನಗಳ ಹಿಂದೆಯೇ ಬಿಜೆಪಿಯಿಂದ ಹೊರಬರಬೇಕಿತ್ತು. ಅವರಿಗೆ ಸಿಗಬೇಕಾದ ಗೌರವ ಬಿಜೆಪಿಯಲ್ಲಿ ಅವರಿಗೆ ಸಿಗಲಿಲ್ಲ. ಅಡ್ವಾಣಿಯವರನ್ನೂ ಬಿಜೆಪಿ ಗೌರವಿಸಲಿಲ್ಲ" ಎಂದು ಬಾಲಿವುಡ್ ನಟಿ ಸೋನಾಕ್ಷಿ ಸಿನ್ಹಾ ಹೇಳಿದ್ದಾರೆ.
ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ
ತಂದೆ ಶತ್ರುಘ್ನ ಸಿನ್ಹಾ ಅವರು ಬಿಜೆಪಿ ತೊರೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಒಂದು ಕಡೆ ನಮಗೆ ಗೌರವ ಇಲ್ಲ ಅನ್ನಿಸಿದಾಗ ಅಲ್ಲಿಂದ ಹೊರಬರಬೇಕು. ಅಲ್ಲಿಂದ ಹೊರಬಂದರೇ ಸಂತೋಷವಾಗಿರುತ್ತೇವೆ ಅನ್ನಿಸಿದರೆ ಅಲ್ಲಿರುವುದರಿಂದ ಯಾವುದೇ ಪ್ರಯೋಜನವಿಲ್ಲ. ಈಗ ನಮ್ಮ ತಂದೆಯವರೂ ಅದನ್ನೇ ಮಾಡಿದ್ದಾರೆ" ಎಂದು ಸೋನಾಕ್ಷಿ ಹೇಳಿದರು.
ಬಿಹಾರದ ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಎರಡು ಬಾರಿ ಸ್ಪರ್ಧಿಸಿ ಗೆದ್ದಿದ್ದ 72 ವರ್ಷ ವಯಸ್ಸಿನ ಶತ್ರುಘ್ನ ಸಿನ್ಹ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿರಲಿಲ್ಲ. ಆದ್ದರಿಂದ ಅವರು ಬಿಜೆಪಿ ತೊರೆದಿದ್ದಾರೆ. ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದು, ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ.

ಬಿಜೆಪಿಗೆ ಸಿನ್ಹಾ ಮೇಲೆ ಮುನಿಸೇಕೆ?
ನಿರಂತರವಾಗಿ ಎನ್ ಡಿಎ ಸರ್ಕಾರದ ನಾಯಕತ್ವದ ಮೇಲೆ ಸಿನ್ಹಾ ವಾಗ್ದಾಳಿ ನಡೆಸಿದ್ದು ಮತ್ತು ಮೋದಿ ಅವರನ್ನು ಸತತ ಟೀಕಿಸುತ್ತಲೇ ಇದ್ದಿದ್ದು, ಬಿಜೆಪಿಯ ಈ ನಿರ್ಧಾರಕ್ಕೆ ಕಾರಣ ಎನ್ನಲಾಗಿತ್ತು. ಸಿನ್ಹಾ ಬದಲು ಈ ಕ್ಷೇತ್ರದಿಂದ ಬಿಜೆಪಿ ಮುಖಂಡ, ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಬಿಜೆಪಿ ಕಣಕ್ಕಿಳಿಸಿದೆ.

ಅಡ್ವಾಣಿಗೂ ಟಿಕೆಟ್ ನೀಡದ ಬಿಜೆಪಿ
ಗುಜರಾತಿನ ಗಾಂಧಿನಗರ ಕ್ಷೇತ್ರದ ಸಂಸದ ಎಲ್ ಕೆ ಅಡ್ವಾನಿ ಅವರಿಗೂ ಈ ಬಾರಿ ಬಿಜೆಪಿ ಟಿಕೆಟ್ ನೀಡಿಲ್ಲ. ಬದಲಾಗಿ ಈ ಕ್ಷೇತ್ರದಿಂದ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಕಣಕ್ಕಿಳಿದಿದ್ದು, ಬಿಜೆಪಿ ಹಿರಿಯರಿಗೆ ಗೌರವ ನೀಡುತ್ತಿಲ್ಲ. ಅಡ್ವಾಣಿ ಅವರಿಗೆ ಬಂದ ಸ್ಥಿತಿಯೇ ನನ್ನ ತಂದೆಗೂ ಬಂದಿದೆ ಎಂದು ಸೋನಾಕ್ಷಿ ಸಿನ್ಹಾ ಬೇಸರ ವ್ಯಕ್ತಪಡಿಸಿದರು.

ಏಪ್ರಿಲ್ 6 ರಂದು ಕಾಂಗ್ರೆಸ್ಸಿಗೆ?
ಈಗಾಗಲೇ ಬಿಜೆಪಿ ತೊರೆದಿರುವ ಶತ್ರುಘ್ನ ಸಿನ್ಹಾ ಏಪ್ರಿಲ್ 6 ರಂದು ಅಧಿಕೃತವಾಗಿ ಕಾಂಗ್ರೆಸ್ ಸೇರಲಿದ್ದಾರೆ. ಪಾಟ್ನಾ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಿ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಅವರನ್ನು ಅವರು ಎದುರಿಸುವುದು ಬಹುತೇಕ ಖಚಿತವಾಗಿದೆ.

ಚುನಾವಣೆಗೆ ದಿನಗಣನೆ
ಬಿಹಾರದಲ್ಲಿ ಈಗಾಗಲೇ ಮಹಾ ಮೈತ್ರಿಕೂಟದ ಮಾತುಕತೆ ಸಫಲವಾಗಿದ್ದು, ಸೀಟು ಹಂಚಿಕೆಯೂ ನಡೆದಿದೆ. ಪಾಟ್ನಾ ಸಾಹಿಬ್ ನಿಂದ ಕಾಂಗ್ರೆಸ್ ಅಭ್ಯರ್ಥಿಯೇ ಸ್ಪರ್ಧಿಸುವುದು ಖಚಿತವಾಗಿದೆ. ಏಪ್ರಿಲ್ 11 ರಂದು ಲೋಕಸಭಾ ಚುನಾವಣೆ ಆರಂಭವಾಗಲಿದ್ದು, ಮೇ 19 ರವರೆಗೆ ಏಳು ಹಂತಗಳಲ್ಲಿ ನಡೆಯಲಿದೆ. ಬಿಹಾರದಲ್ಲಿ ಏಳೂ ಹಂತಗಳಲ್ಲೂ ಚುನಾವಣೆ ನಡೆದು, ಮೇ 23 ರಂದು ಫಲಿತಾಂಶ ಹೊರಬೀಳಲಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications