ಅಧಿಕಾರ ಕಳೆದುಕೊಂಡಿದ್ದಕ್ಕೆ ಬಿಜೆಪಿಗೆ ಶಿವಸೇನಾ ಬಗ್ಗೆ ಹೊಟ್ಟೆಯುರಿ: ಆದಿತ್ಯ ಠಾಕ್ರೆ
ಮುಂಬೈ, ಡಿಸೆಂಬರ್ 28: ಮಹಾರಾಷ್ಟ್ರದಲ್ಲಿ ಬಿಜೆಪಿ ಈಗ ಅಧಿಕಾರ ಕಳೆದುಕೊಂಡಿರುವುದಕ್ಕೆ ಶಿವಸೇನಾ ಬಗ್ಗೆ ಹೊಟ್ಟೆಯುರಿಪಡುತ್ತಿದೆ ಎಂದು ಶಿವಸೇನಾ ನಾಯಕ ಆದಿತ್ಯ ಠಾಕ್ರೆ ಲೇವಡಿ ಮಾಡಿದರು.
ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಅವರು, 'ಅವರೀಗ ಅಧಿಕಾರ ಕಳೆದುಕೊಂಡಿರುವುದರಿಂದ ದುಃಖಿತರಾಗಿದ್ದಾರೆ. ಅವರು 'ಬರ್ನಲ್' ಬಳಸಲಿ ಎಂದು ನಾನು ಸಲಹೆ ನೀಡುವುದಿಲ್ಲ. ಅವರ ನೋವು ನಮಗೆ ಅರ್ಥವಾಗುತ್ತದೆ. ಆದರೆ ಜನರು ನಮ್ಮನ್ನು ನಂಬಿರುವುದರಿಂದ ನಾವು ನಮ್ಮ ಕೆಲಸದ ಮೇಲೆ ಗಮನ ಕೊಡುತ್ತೇವೆ. ಸಾಲ ಮನ್ನಾ, 10 ರೂ.ಗೆ ಆಹಾರ ಅಥವಾ ಜನರಿಗೆ ವಸತಿ ಸೌಲಭ್ಯ ಒದಗಿಸುವ ನಮ್ಮ ಭರವಸೆಗಳನ್ನು ಈಡೇರಿಸಲು ಆರಂಭಿಸಿದ್ದೇವೆ' ಎಂದು ಹೇಳಿದರು.
'ಮಹಾ ವಿಕಾಸ್ ಅಘಾಡಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸುವುದನ್ನು ಮುಂದುವರಿಸಲಿದೆ. ನಾವು ಅಂತಹ ಟ್ರಾಲ್ಗಳನ್ನು ಮಾಡುವುದು ಬೇಡ. ಅವರು (ಬಿಜೆಪಿ) ಅಧಿಕಾರದಲ್ಲಿ ಇರುವುದರಿಂದ ಬೇಕಿದ್ದರೆ ನಮ್ಮನ್ನು ಟ್ರಾಲ್ ಮಾಡಿಕೊಂಡಿರಲಿ. ಟ್ರಾಲಿಂಹ್ ಮೂಲಕವಾದರೂ ಅವರು ಬಿಜಿಯಾಗಿರಲಿ. ಅವರು ಇಂಟರ್ನೆಟ್ ಸ್ಥಗಿತಗೊಳಿಸದ ಸ್ಥಳಗಳಿಂದ ನಮ್ಮನ್ನು ಟ್ರಾಲ್ ಮಾಡುತ್ತಿದ್ದಾರೆ. ಅವರು ತಮ್ಮ ಮೊಬೈಲ್ ಫೋನ್ಗಳನ್ನು ಬಳಸುವುದಕ್ಕೆ ಬಿಡುವುದು ಒಳ್ಳೆಯದು. ಅವರು ಅದನ್ನು ಮುಂದುವರಿಸಲಿ. ಅವರಿಗೆ ಅಧಿಕಾರವಿಲ್ಲ. ಹೀಗಾಗಿ ನಮ್ಮ ಮೇಲೆ ಅವರಿಗೆ ಹೊಟ್ಟೆ ಕಿಚ್ಚು' ಎಂದು ವ್ಯಂಗ್ಯವಾಡಿದರು.

ವಡಾಲದಲ್ಲಿ ವ್ಯಕ್ತಿಯೊಬ್ಬನ ಮೇಲೆ ಶಿವಸೇನಾ ಕಾರ್ಯಕರ್ತರು ಅಮಾನುಷವಾಗಿ ವರ್ತಿಸಿದ ಘಟನೆಗೆ ಪ್ರತಿಕ್ರಿಯಿಸಿದ ಅವರು, 'ಈ ಟ್ರಾಲರ್ಗಳು ಕೇವಲ ಶಿವಸೇನಾವನ್ನು ಟ್ರಾಲ್ ಮಾಡುವುದಿಲ್ಲ, ಮಹಿಳೆಯರು ಮತ್ತು ಪತ್ರಕರ್ತೆಯರನ್ನು ಕೂಡ ಟ್ರಾಲ್ ಮಾಡುತ್ತಾರೆ. ಯಾರಾದರೂ ಟ್ರಾಲ್ನಲ್ಲಿಯೇ ಮುಳುಗಿದ್ದರೆ ಬೇರೆಯವರಿಗೆ ಕೋಪ ಬರುವುದು ಸಹಜ. ಆದರೆ ಹಾಗೆ ಸಿಟ್ಟಿಗೇಳಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ. ಏಕೆಂದರೆ ಜನರು ಅಧಿಕಾರ ಕಳೆದುಕೊಂಡಿದ್ದಾರೆ. ಹಾಗಾಗಿ ಇದನ್ನೆಲ್ಲ ಮಾಡುತ್ತಿದ್ದಾರೆ' ಎಂದು ಟೀಕಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications