Breaking; ಮಹಾರಾಷ್ಟ್ರದ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ
ಮುಂಬೈ, ಜುಲೈ 03; ಏಕನಾಥ್ ಶಿಂಧೆ ಸರ್ಕಾರದ ವಿಶ್ವಾಸಮತಯಾಚನೆಗೂ ಮುನ್ನ ಭಾನುವಾರ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ನಡೆಯಿತು.
ಮಹಾರಾಷ್ಟ್ರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆಯಾದರು. ರಾಹುಲ್ ನಾರ್ವೇಕರ್ ಕೊಲಾಬಾ ಕ್ಷೇತ್ರದ ಬಿಜೆಪಿ ಶಾಸಕರು.
ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ರಾಹುಲ್ ನಾರ್ವೇಕರ್ 164 ಮತಗಳಿಂದ ಸ್ಪೀಕರ್ ಆಗಿ ಆಯ್ಕೆಯಾದರು. ಶಿವಸೇನೆಯಿಂದ ಚುನಾವಣೆಗೆ ಸ್ಪರ್ಧಿಸಿದ್ದ ರಾಜನ್ ಸಾಲ್ವಿ 107 ಮತಗಳನ್ನು ಪಡೆದರು.

2021ರ ಫೆಬ್ರವರಿಯಲ್ಲಿ ಕಾಂಗ್ರೆಸ್ನ ನಾನಾ ಪಟೋಲ್ ರಾಜೀನಾಮೆ ನೀಡಿದ ಬಳಿಕ ಸ್ಪೀಕರ್ ಹುದ್ದೆ ಖಾಲಿ ಇತ್ತು. ವಿಧಾನಸಭೆ ಡೆಪ್ಯುಟಿ ಸ್ಪೀಕರ್ ನರಹರಿ ಜೀರವಾಲ್ ನೂತನ ಸ್ಪೀಕರ್ ರಾಹುಲ್ ನಾರ್ವೇಕರ್ಗೆ ಅಧಿಕಾರ ಹಸ್ತಾಂತರ ಮಾಡಿದರು.
ರಾಹುಲ್ ನಾರ್ವೇಕರ್ಗೆ ಮುಂಬೈನ ಕೊಲಬಾ ಕ್ಷೇತ್ರದ ಬಿಜೆಪಿ ಶಾಸಕರು. ಎನ್ಸಿಪಿಯ ಹಿರಿಯ ನಾಯಕ ರಾಮ್ರಾಜೇ ನಾಯಕ್ ನಿಂಬಾಳ್ಕರ್ ಅಳಿಯ.
ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಮೊದಲು ಅವರು ಶಿವಸೇನೆ ಯುವ ಘಟಕದ ವಕ್ತಾರರಾಗಿದ್ದರು. ಪಕ್ಷ ತೊರೆದು ಅವರು 2014ರಲ್ಲಿ ಎನ್ಸಿಪಿ ಸೇರಿದರು. 2019ರಲ್ಲಿ ಅವರು ಬಿಜೆಪಿ ಸೇರಿದ್ದರು.
BJP candidate Rahul Narwekar elected as the Speaker of Maharashtra Legislative Assembly: he received a total of 164 votes in support and 107 against him.
— ANI (@ANI) July 3, 2022
(Source: Maharashtra Assembly) pic.twitter.com/viHOHiVhkn
ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಬಿಜೆಪಿಯ ಚಂದ್ರಕಾಂತ್ ಪಾಟೀಲ್ ರಾಹುಲ್ ನಾರ್ವೇಕರ್ ಹೆಸರು ಮಂಡನೆ ಮಾಡಿದರು. ಕೈಗಳನ್ನು ಎತ್ತುವ ಮೂಲಕ ಶಾಸಕರು ಬೆಂಬಲ ಸೂಚಿಸಿದರು.
ಬಹುಮತ ಸಾಬೀತು ಮಾಡಬೇಕು; ಬಿಜೆಪಿ ಬೆಂಬಲದೊಂದಿಗೆ ಗುರುವಾರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿರುವ ಮಹಾರಾಷ್ಟ್ರದ ಮುಖ್ಯಮಂತ್ರಿ ಏಕನಾಥ್ ಶಿಂಧೆ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತಯಾಚನೆ ಮಾಡಬೇಕು.
ನೂತನ ಸ್ಪೀಕರ್ ರಾಹುಲ್ ನಾರ್ವೇಕರ್ ವಿಶ್ವಾಸಮತಯಾಚನೆಯನ್ನು ನಡೆಸಿಕೊಡಲಿದ್ದಾರೆ. ಶಿವಸೇನೆ ಮತ್ತು ಬಿಜೆಪಿ ಮೈತ್ರಿಕೂಟ ಬಹುಮತಗಳಿಸಲಿದೆಯೇ? ಕಾದು ನೋಡಬೇಕಿದೆ.
-
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
Thalapathy Vijay Assets: ನಾಮಪತ್ರ ಸಲ್ಲಿಸಿದ ವಿಜಯ್, ಇವರ ಒಟ್ಟು ಆಸ್ತಿ ಎಷ್ಟು? ಇಲ್ಲಿದೆ ಮಾಹಿತಿ -
Hindi Language: ಹಿಂದಿ ಭಾಷೆ ರದ್ದು, ಎಸ್ಎಸ್ಎಲ್ಸಿ ಮಕ್ಕಳ ಬದುಕಿಗೆ ಕಲ್ಲು:ಆರ್ ಅಶೋಕ್ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications